ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಕಲಶದ ವೀಳ್ಯದೆಲೆ ಮತ್ತು ವಿಶೇಷಗಳು

“ಕಲಶದ ವೀಳ್ಯದೆಲೆ”ಯನ್ನು, ಪೂಜೆಯ ನಂತರ ಏನು ಮಾಡಬೇಕು..?

ಕಲಶದ ವೀಳ್ಯದೆಲೆಯನ್ನು ಪ್ರಸಾದ ರೂಪವಾಗಿ ಮನೆಯ ಹಿರಿಯರು ಮಾತ್ರ ಹಾಕಿಕೊಳ್ಳಬೇಕು..
(ಹಿರಿಯರು ಯಾರು ಯಾರು ಎಂದು ತಿಳಿದು ಮಾಡಿ)
ಬೇರೆಯವರು ಹಾಕಿಕೊಳ್ಳಬಾರದು..
ಮಗಳು ಅಳಿಯ ಇದ್ದರೆ ಹಾಕಿಕೊಳ್ಳಬಹುದು ..

ಕಲಶದ ವೀಳ್ಯದೆಲೆಯನ್ನು ಒಣಗಿಸಿದರೆ , ಅಥವಾ ಕಸದಲ್ಲಿ ಗುಡಿಸಿದರೆ..
ಆ ಮನೆಗೆ ದಾರಿದ್ರ್ಯ ಬಂದು ಬಿಡುತ್ತದೆ..
ಕಲಶದೇವಿಯ ಶಾಪವಾಗಿ ಆ ಮನೆಯಲ್ಲಿ ಸಂಪಾದಿಸಿದ ಹಣ ಬೇರೆಯವರ ಪಾಲಾಗಿ, ತುಂಬಾ ಕಷ್ಟದ ಜೀವನ ಮಾಡುತ್ತೀರಿ..
ಸಾಲದಭಾದೆ ಇಂದ ನರಳುವಿರಿ..
ಶತೃಭಾಧೆ ಜಾಸ್ತಿಯಾಗುತ್ತದೆ ..

  ಚಾಂದ್ರಮಾನ ಯುಗಾದಿ ಹಬ್ಬ ಇತಿಹಾಸ ಮತ್ತು ಆಚರಣೆ ಮತ್ತು ವೈಜ್ಞಾನಿಕ ವಿಶ್ಲೇಷಣೆ

ಪೂಜಿಸಿದ ಕಲಶದ ವೀಳ್ಯದೆಲೆಯನ್ನು ತುಳಸೀ ಕಟ್ಟೆಗೆ ಹಾಕಿದರೆ,
ಅವರು ಮಾಡಿದ ಪಾಪಗಳೆಲ್ಲವೂ ನಿವಾರಣೆಯಾಗುತ್ತದೆ ..
ಬಹಳ ತೇಜೋವಂತರೂ ಕಾಂತಿವಂತರೂ ಆಗಿ, ನೆಮ್ಮದಿಯ ಜೀವನ ಮಾಡುತ್ತಾರೆ..
ಸರ್ವ ತೀರ್ಥಗಳೂ ತುಳಸಿಯಲ್ಲಿ ಇರುವುದರಿಂದ ಸರ್ವ ಶ್ರೇಷ್ಠ..
(ಯಾವ ಸಮಯದಲ್ಲಿ ಹಾಕಬೇಕು, ಯಾರು ಹಾಕಬೇಕು ತಿಳಿದು ಮಾಡಿ)

ಕಲಶದ ವೀಳ್ಯದೆಲೆಯನ್ನು ಪೂಜ್ಯ ಭಾವನೆಯಿಂದ , ಕುಲದೇವತಾ ಸ್ಮರಣೆ ಮಾಡಿ, ಹರಿಯುವ ನದಿಯಲ್ಲಿ ಬಿಟ್ಟರೆ ,
ಪೂಜಿಸಿದ ದೇವರು, ಕಲಶದ ದೇವರು, ಕುಲದೇವರ ಆಶೀರ್ವಾದ ಎಂದೆಂದೂ ಇದ್ದು ಇಷ್ಟಾರ್ಥ ಸಿದ್ಧಿಯಾಗುತ್ತದೆ..
(ಪೂರ್ವವಾಹಿನಿ, ಉತ್ತರವಾಹಿನಿ ನದಿಗಳಲ್ಲಿ ಮಾತ್ರ ಬಿಡಬೇಕು)
ನೆನೆದ ಕಾರ್ಯಗಳು ಬಹಳ ಬೇಗ ಈಡೇರುತ್ತವೆ..
ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇದ್ದು ಎಲ್ಲರೂ ಆರೋಗ್ಯವಂತರಾಗಿರುತ್ತಾರೆ..

  ನವರಾತ್ರಿಯ 8ನೇ ದಿನ ಮಹಾಗೌರಿ ಪೂಜಾ ವಿಧಾನ

ಕಲಶಕ್ಕೆ ಬಿಳೀ ವೀಳ್ಯದೆಲೆ ಇಟ್ಟರೆ ಸ್ತ್ರೀ ದೋಷ ಮತ್ತು ಶಾಪ ಉಂಟಾಗುತ್ತದೆ ..
ದಟ್ಟದಾರಿದ್ಯ ಅನುಭವಿಸುತ್ತಿರಿ .

ಕಲಶಕ್ಕೆ ಇಡೋ ವೀಳ್ಯದೆಲೆ ಹಸಿರು ಬಣ್ಣದ್ದಾಗಿರಬೇಕು..
ಎಳೆಯ ವೀಳ್ಯದೆಲೆ ಆಗಿರಬೇಕು..
ಹಸ್ತದ ಆಕಾರ ಇರಬೇಕು..
ಭಿನ್ನವಾಗಿರಬಾರದು..

Leave a Reply

Your email address will not be published. Required fields are marked *

Translate »