ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ನವರಾತ್ರಿಯ ಮೊದಲ ದಿನ – ಶೈಲಪುತ್ರಿ ಆರಾಧನೆ ಆಚರಣೆ ವಿಧಾನ

ನವರಾತ್ರಿಯ ಮೊದಲ ದಿನ ಶೈಲಪುತ್ರಿ

ಶೈಲ ಪುತ್ರಿಯ ಹಿನ್ನಲೆ
ಪರ್ವತರಾಜ ಹಿಮವಂತನ ಪುತ್ರಿಯೇ ಶೈಲ ಪುತ್ರಿ. ಈ ದೇವಿಯ ಅವತಾರದ ಹಿಂದೆ ಒಂದು ಕಥೆ ಇದೆ. ಪ್ರಜಾಪತಿ ಬ್ರಹ್ಮನ ಮಗನಾದ ದಕ್ಷ ತನ್ನ 27 ಪುತ್ರಿಯರನ್ನು ಚಂದ್ರನಿಗೆ ಮದುವೆ ಮಾಡಿ ಕೊಟ್ಟಿದ್ದ, ಉಳಿದವರಲ್ಲಿ ಒಬ್ಬಳಾದ ದಾಕ್ಷಾಯಿಣಿ ಶಿವನನ್ನು ವರಿಸಿದಳು. ದಕ್ಷ ಮಹಾರಾಜನಿಗೆ ಅಳಿಯ ಶಿವನನ್ನು ಕಂಡರೆ ಆಗುತ್ತಿರಲಿಲ್ಲ. ಸ್ಮಶಾನದಲ್ಲಿ ವಾಸ ಮಾಡುವ, ಕುತ್ತಿಗೆಯಲ್ಲಿ ನಾಗರ ಹಾವನ್ನು ಸುತ್ತಿಕೊಂಡಿರುವ ಶಿವನಿಗಿಂತ, ಚೆಲುವೆಯಾಗಿರುವ ತನ್ನ ಮಗಳಿಗೆ ಉತ್ತಮ ವರ ಸಿಗುತ್ತಿದ್ದ ಎಂದು ಹೇಳಿಕೊಳ್ಳುತ್ತಿದ್ದ.

ಶಿವನ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ದಕ್ಷ ಒಂದು ದೊಡ್ಡ ಯಜ್ಞವನ್ನು ಆಯೋಜಿಸಿದ್ದ. ಈ ಯಜ್ಞಕ್ಕೆ ಆಗಮಿಸುವಂತೆ ಎಲ್ಲ ಮಕ್ಕಳಿಗೆ, ಬಂಧುಮಿತ್ರರಿಗೆ ಆಹ್ವಾನ ನೀಡಿದ್ದ. ಈ ಸಮಾರಂಭಕ್ಕೆ ದಕ್ಷ ಪ್ರವೇಶಿಸುತ್ತಿದ್ದಂತೆ ಬ್ರಹ್ಮ ಮತ್ತು ಶಿವ ಬಿಟ್ಟು ಉಳಿದವರೆಲ್ಲರೂ ಎದ್ದು ನಿಂತು ಗೌರವ ಸೂಚಿಸಿದರು. ಈಗ ದಕ್ಷನು ‘ ಶಿವ ದೇವರು ಆಗಿರಬಹುದು, ಆದರೆ ಅವನಿಗೆ ನಾನು ಮಾವ. ಸಂಬಂಧದಲ್ಲಿ ನಾನು ಆತನಿಗಿಂತ ದೊಡ್ಡವ. ಶಿವ ಎದ್ದು ನಿಂತು ನನಗೆ ಗೌರವ ನೀಡಬಹುದಿತ್ತು. ಈ ರೀತಿ ಅಗೌರವ ಸಲ್ಲಿಸಿದ್ದು ಸರಿಯಲ್ಲ” ಎಂದು ಮನಸ್ಸಿನಲ್ಲೇ ಉರಿದು ಬಿದ್ದ. ಇದಕ್ಕೆ ಪ್ರತೀಕಾರವೆಂಬಂತೆ ದಕ್ಷನು ಶಿವನಿಗೆ ಅವಮಾನ ಮಾಡಬೇಕೆಂದು ಇನ್ನೊಂದು ಯಜ್ಞವನ್ನು ಆಯೋಜಿಸಿದ, ಆದರೆ ಮಗಳು ದಾಕ್ಷಾಯಿಣಿ ಹಾಗೂ ಅಳಿಯ ಶಿವನಿಗೆ ಆಹ್ವಾನ ನೀಡದೇ ಉಳಿದ ಎಲ್ಲಾ ಮಕ್ಕಳಿಗೂ ಆಹ್ವಾನ ನೀಡಿದ್ದ.

ತಂದೆಯು ಯಾಗವನ್ನು ಆಯೋಜಿಸಿರುವುದನ್ನು ತಿಳಿದ ದಾಕ್ಷಾಯಿಣಿ ಶಿವನೊಂದಿಗೆ’ ಈ ಕಾರ್ಯಕ್ರಮದಲ್ಲಿ ಭಾಗಿಯಾಗೋಣವೇ’ ಎಂದು ಕೇಳುತ್ತಾಳೆ. ಅದಕ್ಕೆ ಶಿವನು ” ಯಾವುದೇ ಶುಭ ಸಮಾರಂಭಕ್ಕೆ ಆಹ್ವಾನ ಇಲ್ಲದೇ ಹೋಗಬಾರದು, ತವರು ಮನೆಯಾದರೂ ಹೋಗಬಾರದು’ ಎಂದು ಹೇಳುತ್ತಾನೆ. ಇದಕ್ಕೆ ದಾಕ್ಷಾಯಿಣಿಯು ‘ಕೆಲಸದ ಒತ್ತಡದಲ್ಲಿ ಯಾವುದೋ ಅನಿವಾರ್ಯ ಕಾರಣದಿಂದಾಗಿ ತಂದೆಗೆ ಮರೆತು ಹೋಗಿರಬಹುದು, ತವರು ಮನೆಗೆ ಹೋಗಲು ಮಗಳಿಗೆ ಏಕೆ ಆಹ್ವಾನ ಬೇಕು’ ಎಂದು ಪ್ರಶ್ನಿಸುತ್ತಾಳೆ. ತೆರಳುವುದು ಬೇಡ ಎಂದು ಹೇಳಿದರೂ ಪತ್ನಿ ದಾಕ್ಷಾಯಿಣಿಯ ಹಠಕ್ಕೆ ಕರಗಿ ಶಿವ ಅನುಮತಿ ನೀಡುತ್ತಾನೆ.

  ಏಕಾದಶಿಗಳ ಹೆಸರುಗಳು ಮತ್ತು ಫಲ

ಶಿವನಿಂದ ಅನುಮತಿಯನ್ನು ಪಡೆದು ದಾಕ್ಷಾಯಿಣಿಯು ತಂದೆಯ ಯಾಗಕ್ಕೆ ಹೋಗುತ್ತಾಳೆ. ಆದರೆ ದಕ್ಷನು ಯಾಗಕ್ಕೆ ಬಂದ ಮಗಳನ್ನು ನೋಡಿ ‘ ನಾನು ಆಹ್ವಾನ ನೀಡದಿದ್ದರೂ ಬಂದಿದ್ದು ಯಾಕೆ? ನಿನ್ನ ಪತಿಯನ್ನೂ ಕರೆದುಕೊಂಡು ಬಂದಿದ್ದೀಯಾ ಎಂದು ಪ್ರಶ್ನೆ ಮಾಡುತ್ತಾನೆ. ತಂದೆ ಮನ ನೋಯಿಸಿದರೂ ನೋವನ್ನು ತಡೆದುಕೊಳ್ಳುತ್ತಾಳೆ.
ಯಜ್ಞ ಆರಂಭವಾದ ಬಳಿಕವೂ ದಕ್ಷ ಮತ್ತೆ ಶಿವನನ್ನು ಅವಮಾನಿಸುತ್ತಾನೆ. ಎಲ್ಲರ ಮುಂದೆ ಪತಿಗೆ ಆದ ಅವಮಾನವನ್ನು ಸಹಿಸದ ದಾಕ್ಷಾಯಿಣಿಯು ಮುಂದಿದ್ದ ”ಯಜ್ಞಕುಂಡಕ್ಕೆ ಹಾರಿ ಪ್ರಾಣತ್ಯಾಗ ಮಾಡುತ್ತಾಳೆ. ಹೀಗೆ ತನ್ನ ಶರೀರವನ್ನು ಭಸ್ಮವಾಗಿಸಿ ಮುಂದಿನ ಜನ್ಮದಲ್ಲಿ ಹಿಮವಂತನ ಪುತ್ರಿಯಾಗಿ ಜನಿಸಿದವಳೇ ಶೈಲ ಪುತ್ರಿ. ಮತ್ತೆ ಶಿವನ ಮಡದಿ ‘ಸತಿ’ಯಾಗಿ ಹೆಸರು ಪಡೆಯುತ್ತಾಳೆ. ಮದುವೆಯಾದ ಬಳಿಕ ಶಿವ ಪತ್ನಿಗೆ ವರ್ಷದಲ್ಲಿ 10 ದಿನ ಮಾತ್ರ ತವರು ಮನೆಗೆ ತೆರಳಲು ಅನುಮತಿ ನೀಡುತ್ತಾನೆ. ಅದರಂತೆ ಈಗಲೂ ದಸರಾ ಸಮಯದಲ್ಲಿ ಮದುವೆಯಾದ ಹೆಣ್ಣು ಮಕ್ಕಳನ್ನು ತವರಿಗೆ ಆಮಂತ್ರಿಸಿ ಗೌರವಿಸುವ ಸಂಪ್ರದಾಯವಿದೆ.

ಶೈಲ ಪುತ್ರಿಯ ರೂಪ

ಶೈಲಪುತ್ರಿಯನ್ನು ಆದಿಶಕ್ತಿಯೆಂದು ಗುರುತಿಸಲಾಗುತ್ತದೆ. ಆಕೆಯು ಗೂಳಿಯ ಮೇಲೆ ಸವಾರಿ ಮಾಡುತ್ತಿದ್ದ ಕಾರಣ ವೃಷರುಧ ಎಂದೂ ಕರೆಯಲಾಗುತ್ತದೆ. ಶೈಲಪುತ್ರಿಯು ಮನೋಕಾರಕನಾದ ಚಂದ್ರನನ್ನು ತನ್ನ ಮಸ್ತಿಷ್ಕದ ಮೇಲೆ ಧರಿಸಿದ್ದಾಳೆ. ತಮೋಗುಣದ ಸಂಕೇತವಾದ ತ್ರಿಶೂಲವನ್ನು ತನ್ನ ಬಲಗೈಯಲ್ಲಿ ಧಾರಣೆ ಮಾಡಿದ್ದಾಳೆ. ಶ್ವೇತ ವಸ್ತ್ರಧಾರಿಯಾಗಿರುವ ಶೈಲ ಪುತ್ರಿಯು ಮಲ್ಲಿಗೆ ಪ್ರಿಯಳು.

  ಯಮ ದೀಪ ದಾನ

ದೇವರ ಎಲ್ಲಾ ರೂಪಗಳೂ ನಮಗೆ ಸೂಕ್ಷ್ಮವಾದ ಒಂದೊಂದು ಪಾಠವನ್ನು ಹೇಳುವಂತೆ ಶೈಲಪುತ್ರಿಯ ರೂಪವೂ ನಾವು ಪಾಲಿಸಬೇಕಾದ ಬದುಕಿನ ತತ್ವವನ್ನು ಸೂಚಿಸುತ್ತದೆ. ಶ್ವೇತ ವಸ್ತ್ರದಲ್ಲಿರುವ ಆಕೆ ಶಾಂತಿಯುತವಾದ ನಡವಳಿಕೆಯನ್ನು ಬೆಳೆಸಿಕೊಳ್ಳಲು ಪ್ರೇರಣೆಯಾಗಿದ್ದಾಳೆ. ಪರ್ವತರಾಜನ ಮಗಳಾಗಿ ಪರ್ವತ ಎಂದರೆ ಪ್ರಕೃತಿಯನ್ನು ಪ್ರೀತಿಸಿ, ಶುದ್ಧವಾಗಿರಿಸಿಕೊಳ್ಳಿರೆಂದು ಸೂಚಿಸುವಳು. ಗೂಳಿಯ ಮೇಲೆ ಕುಳಿತಿರುವುದು ಮೂಕಪ್ರಾಣಿಗಳೆಲ್ಲವೂ ದೇವ- ದೇವತೆಯರ ವಾಹನವಾಗಿದ್ದು ಅವನ್ನು ಹಿಂಸಿಸಬಾರದೆಂಬುದರ ಸಂಕೇತವಾಗಿದೆ. ಒಂದು ಕೈಯಲ್ಲಿರುವ ತ್ರಿಶೂಲ ತಾಪತ್ರಯಗಳ ನಿವಾರಣೆಯ ಸೂಚಕ ಮತ್ತು ನಮ್ಮ ಮನಸ್ಸು ದುಷ್ಟತನದತ್ತ ದೃಷ್ಟಿ ಹಾಯಿಸಬಾರದು, ಅದರಿಂದ ಶೂಲದಂತಹ ಅಸ್ತ್ರದಿಂದ ನಮ್ಮನ್ನು ನಾವೇ ಇರಿದುಕೊಂಡಂತೆ ಎಂಬುದನ್ನು ಸಾರುತ್ತದೆ. ಇನ್ನೊಂದು ಕೈಯಲ್ಲಿರುವ ಕಮಲವು ಕೋಮಲವಾದ ಎಸಳುಗಳುಳ್ಳ, ನೀರಿನಲ್ಲಿ ಅರಳುವ ಸುಂದರ ಹೂವು. ವಿನಯ ಮತ್ತು ತಾಳ್ಮೆಯ ಸಂಕೇತ. ತಿಳಿಯಾದ ಮನಸ್ಸಿನಲ್ಲಿ ತಳಮಳವಿರುವುದಿಲ್ಲ. ಸತ್ಯದ ಹಾದಿಯಷ್ಟೇ ಕಾಣುತ್ತದೆ. ಇವಷ್ಟೇ ಅಲ್ಲದೇ ದೇವೀ ರೂಪಗಳು ಹೆಣ್ಣಿನ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ.

ಉಪನಿಷತ್ತಿನ ಪ್ರಕಾರ ಶೈಲಪುತ್ರಿ ಇಂದ್ರ ಮತ್ತು ಇತರೆ ದೇವತೆಗಳ ಈಷ್ರ್ಯಾ ಮನೋಭಾವನೆಯನ್ನು ನಿಯಂತ್ರಿಸುತ್ತಾಳೆ. ಇದರಿಂದ ಅಪಮಾನಗೊಂಡ ಇಂದ್ರಾದಿ ದೇವತೆಗಳು ಆಕೆಯ ಮುಂದೆ ಶರಣಾಗುತ್ತಾರೆ. ತ್ವಂ ಬ್ರಹ್ಮಾಸಿ ಎಂದು ಉದ್ಗರಿಸುತ್ತಾರೆ. ದೇವಿ ಶೈಲಪುತ್ರಿ ಸಹನೆಯ ಪ್ರತೀಕಳಾಗಿದ್ದಾಳೆ. ಮೂಲಧಾರ ಚಕ್ರದಲ್ಲಿ ಯೋಗಿನಿಯಾಗಿ ನೆಲೆಗೊಂಡಿದ್ದಾಳೆ. ಮೂಲಾಧಾರ ಚಕ್ರವು ಬೆನ್ನು ಹುರಿಯ ಕೆಳಗಿದ್ದು ಸುಪ್ತ ಚೈತನ್ಯದ ಮೂಲ ಬಿಂದುವಾಗಿದ್ದು ಕುಂಡಲಿನಿ ಶಕ್ತಿಯ ಜಾಗೃತ ಸ್ಥಾನವಾಗಿದೆ.

ಶೈಲ ಪುತ್ರಿಯ ಪೂಜೆ
ನವರಾತ್ರಿ ಪೂಜೆಯ ಸಂದರ್ಭದಲ್ಲಿ ಯೋಗಸಾಧಕರು ನವರಾತ್ರಿಯ ಮೊದಲ ದಿನ ಮೂಲಾಧಾರ ಚಕ್ರದ ಮೇಲೆ ಗಮನವಿಟ್ಟು ಧ್ಯಾನ ಮಾಡುತ್ತಾರೆ. ಅಧ್ಯಾತ್ಮ ಸಾಧನಾ ಕ್ರಮದಲ್ಲಿ ಅದುವೇ ಮೊದಲ ಹೆಜ್ಜೆಯೆಂದರೆ ತಪ್ಪಿಲ್ಲ. ಯಾರ ಮನಸು ಚಂಚಲ ಸ್ವಭಾವದ್ದಾಗಿರುತ್ತದೋ ಯಾರು ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಲು ಬಯಸುತ್ತಾರೋ ಅಂತಹವರು ಶೈಲಪುತ್ರಿಯ ಆರಾಧನೆಯನ್ನು ಮಾಡಬೇಕು. ಶೈಲಪುತ್ರಿಯ ಆರಾಧನೆಯಿಂದ ಸಾಧಕನಿಗೆ ಬಲ, ಶೌರ್ಯ ಮತ್ತು ಇಂದ್ರಿಯ ನಿಗ್ರಹ ಶಕ್ತಿ ಬರುತ್ತದೆ

  ಭಾರತದ ವಿಶೇಷ ದೇಗುಲ ಗಳ ಸಂಗ್ರಹ

ನವರಾತ್ರಿಯ ಮೊದಲ ದಿನ ಶೈಲಪುತ್ರಿಗೆ ಮಲ್ಲಿಗೆಯಿಂದ ಅರ್ಚಿಸಿ ಪೂಜಿಸಿ. ಗಣೇಶ ವಂದನೆಯ ನಂತರ ಷೋಡಶೋಪಚಾರ ಪೂಜೆಯನ್ನು ಈ ದಿನ ಮಾಡಿ. ಆರತಿಯೊಂದಿಗೆ ಪೂಜೆಯನ್ನು ಮುಕ್ತಾಯಗೊಳಿಸಿ. ನಿಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಆದಿಶಕ್ತಿಯಲ್ಲಿ ಬೇಡಿಕೊಳ್ಳಿ. ನವರಾತ್ರಿಯ ಮೊದಲ ದಿನ ಹಳದಿ ಬಣ್ಣಕ್ಕೆ ಸೀಮಿತವಾಗಿರುವುದರಿಂದ ಈ ದಿನ ಸರಳವಾಗಿರುವ ಹಳದಿ ಬಟ್ಟೆ ಧರಿಸಿ.

ಶೈಲ ಪುತ್ರಿ ಕವಚ ಮಂತ್ರ: ರಕ್ಷಣೆಗಾಗಿ ಮತ್ತು ಶೈಲಪುತ್ರಿಯ ಆಶೀರ್ವಾದಕ್ಕಾಗಿ ಈ ಶ್ಲೋಕವನ್ನು ಪಠಿಸಿ

ಓಂಕಾರಹಃ ಮೇ ಶಿರಾಹ್‌ ಪಟು ಮೂಲಾಧರ ನಿವಾಸಿನಿ|
ಹಿಮಾಕರಹಃ ಪಟು ಲಾಲೇಟ್‌ ಬಿಜರೂಪ ಮಹೇಶ್ವರಿ ||
ಶ್ರೀಂಕಾರ ಪಟು ವಾದನೇ ಲಾವಣ್ಯ ಮಹೇಶ್ವರೀ|
ಹಂಕಾರ ಪಟು ಹೃದಯಯಂ ತಾರಣಿ ಶಕ್ತಿ ಸ್ವಾಘ್ರಿತಾ
ಫಟ್ಕರಾ ಪಟು ಸರ್ವಾಂಗೆ ಸರ್ವ ಸಿದ್ಧಿ ಫಲಪ್ರದಾ||

ನವರಾತ್ರಿಯಂದು ಮೊದಲ ಮೂರು ದಿನಗಳಂದು ತಮೋಗುಣವನ್ನು ಕಡಿಮೆ ಮಾಡಲು ತಮೋಗುಣಿ ಮಹಾಕಾಳಿಯ, ನಂತರದ ಮೂರು ದಿನಗಳಂದು ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮೀ ಮತ್ತು ಕೊನೆಯ ಮೂರು ದಿನಗಳಂದು ಸಾಧನೆಯನ್ನು ತೀವ್ರವಾಗಿ ಮಾಡಲು ಸತ್ತ್ವಗುಣಿ ಮಹಾಸರಸ್ವತಿಯ ಪೂಜೆಯನ್ನು ಮಾಡುತ್ತಾರೆ……

Leave a Reply

Your email address will not be published. Required fields are marked *

Translate »