ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ನವರಾತ್ರಿ 6ನೇ ದಿನ ಕಾತ್ಯಾಯನಿ ದೇವಿ ಪೂಜೆ ವಿಧಾನ

ನವರಾತ್ರಿಯ ಆರನೇ ದಿನವನ್ನು ಕಾತ್ಯಾಯಿನಿ ದೇವಿ ಎಂದು ಕರೆಯಲ್ಪಡುವ ದುರ್ಗಾ ದೇವಿಯ ಉಗ್ರ ಯೋಧ ಅವತಾರಕ್ಕೆ ಸಮರ್ಪಿಸಲಾಗಿದೆ. ಸಿಂಹದ ಮೇಲೆ ಸವಾರಿ ಮಾಡುವ ಮತ್ತು ಕಮಲದ ಹೂವು, ಖಡ್ಗ ಮತ್ತು ಶಿವನ ತ್ರಿಶೂಲ ಸೇರಿದಂತೆ ಬಹು ಆಯುಧಗಳನ್ನು ತನ್ನ ಕೈಗಳಲ್ಲಿ ಹಿಡಿದಿರುವ ಮಹಿಷಾಸುರಮರ್ದಿನಿಯನ್ನು ಷಷ್ಠಿಯಂದು ಅಂದರೆ ನವರಾತ್ರಿ ಹಬ್ಬದ 6ನೇ ದಿನದಂದು ಪೂಜಿಸಲಾಗುತ್ತದೆ. ನವರಾತ್ರಿಯ ಆರನೇ ದಿನ ಪೂಜಿಸಲ್ಪಡುವ ಕಾತ್ಯಾಯನೀ ದೇವಿ, ಮಹಿಷಾಸುರನನ್ನು ಕೊಂದವಳು, ದೇವತೆಗಳನ್ನು ಸೆರೆಯಿಂದ ಬಿಡಿಸಿದವಳು.ಈಕೆ ಮಹಿಷಾಸುರ ಮರ್ದಿನಿ, ಸುಜನರಕ್ಷಕಿ. ಈ ದಿನ ತಾಯಿಯನ್ನು ಪೂಜಿಸುವವರಿಗೆ ಆಯುರಾರೋಗ್ಯ ಭಾಗ್ಯ ಸದಾ ಇರುತ್ತದೆ ಇರುತ್ತದೆ.

ಕಾತ್ಯಾಯಿನಿ ದೇವಿಯನ್ನು ಶತ್ರುಗಳಿಂದ ಮತ್ತು ತೊಂದರೆಗಳಿಂದ ಮುಕ್ತಿ ನೀಡುವವಳು ಎಂದು ಪರಿಗಣಿಸಲಾಗಿದೆ. ದೇವತೆಗಳನ್ನು ರಾಕ್ಷಸರಿಂದ ರಕ್ಷಿಸಿದ ದೇವತೆ ಈಕೆ. ಈ ತಾಯಿ ಮಹಿಷಾಸುರನನ್ನು ಕೊಂದಳು, ನಂತರ ಶುಂಭ ಮತ್ತು ನಿಶುಂಭರನ್ನೂ ಕೂಡ ಕೊಂಡಳು. ಅಷ್ಟೇ ಅಲ್ಲ, ರಾಕ್ಷಸರು ಸೆರೆಯಲ್ಲಿ ಇಟ್ಟಿದ್ದ ಎಲ್ಲಾ ಒಂಬತ್ತು ಗ್ರಹಗಳು ಕೂಡ ಈಕೆಯ ಮೂಲಕ ಬಿಡುಗಡೆ ಹೊಂದಿದವು. 
ಈಕೆಯ ಕತೆ ಹೀಗಿದೆ.

ಮಹರ್ಷಿ ಕಾತ್ಯಾಯನರು ದೇವಿ ಆದಿಶಕ್ತಿಗಾಗಿ ತೀವ್ರ ತಪಸ್ಸು ಮಾಡಿದರು. ಪರಿಣಾಮವಾಗಿ ಅವರು ದೇವಿಯನ್ನು ತಮ್ಮ ಮಗಳಾಗಿ ಪಡೆದರು. ದೇವಿಯು ಮಹರ್ಷಿ ಕಾತ್ಯಾಯನರ ಆಶ್ರಮದಲ್ಲಿ ಜನಿಸಿದಳು. ಕಾತ್ಯಾಯನರ ಮಗಳಾದ ಕಾರಣದಿಂದ ಅವಳನ್ನು ಕಾತ್ಯಾಯನಿ ಎಂದು ಕರೆಯಲಾಗುತ್ತದೆ. ದೇವಿಯು ಜನಿಸಲು ಮುನ್ನ ಮಹಿಷಾಸುರನೆಂಬ ರಾಕ್ಷಸನ ದೌರ್ಜನ್ಯವು ಲೋಕದಲ್ಲಿ ಬಹಳಷ್ಟು ಹೆಚ್ಚಾಗಿತ್ತು. ರಾಕ್ಷಸರು ಸ್ವರ್ಗ ಹಾಗೂ ಭೂಮಿಯಲ್ಲಿ ಗದ್ದಲ ಸೃಷ್ಟಿಸಿದರು. ಅಶ್ವಿನಿ ತಿಂಗಳ ಕೃಷ್ಣ ಪಕ್ಷದ ಚತುರ್ದಶಿಯಂದು ಕಾತ್ಯಾಯನ ಮುನಿ ಮನೆಯಲ್ಲಿ ತ್ರಿದೇವರ ಪ್ರಕಾಶಮಾನವಾದ ದೇವತೆ ಜನಿಸಿದಳು. ಇದರ ನಂತರ ಕಾತ್ಯಾಯನ ಋಷಿ ತಾಯಿಯನ್ನು ಮೂರು ದಿನಗಳ ಕಾಲ ಪೂಜಿಸಿದರು. ಇದರ ನಂತರ, ದಶಮಿಯ ದಿನದಂದು, ಮಹಿಷಾಸುರನನ್ನು ತಾಯಿಯು ಕೊಂದಳು. ಶುಂಭ ಮತ್ತು ನಿಶುಂಭರೂ ಸ್ವರ್ಗದ ಮೇಲೆ ದಾಳಿ ನಡೆಸಿ ಹಾಳುಮಾಡಿದ್ದರು. ಇಂದ್ರನ ಸಿಂಹಾಸನವನ್ನು ಸಹ ಕಿತ್ತುಕೊಂಡಿದ್ದರು. ಅಷ್ಟೇ ಅಲ್ಲ ನವಗ್ರಹಗಳನ್ನೂ ಒತ್ತೆಯಾಳಾಗಿರಿಸಿಕೊಂಡಿದ್ದರು. ರಾಕ್ಷಸರು ಬೆಂಕಿ ಮತ್ತು ಗಾಳಿಯ ಶಕ್ತಿಯನ್ನು ಕೂಡ ವಶಪಡಿಸಿಕೊಂಡರು. ನೊಂದ ಎಲ್ಲಾ ದೇವತೆಗಳು ದೇವಿಯಿದ್ದ ಆಶ್ರಯಕ್ಕೆ ಹೋದರು ಮತ್ತು ಅವರನ್ನು ಅಸುರರ ದೌರ್ಜನ್ಯದಿಂದ ಮುಕ್ತಗೊಳಿಸುವಂತೆ ಪ್ರಾರ್ಥಿಸಿದರು. ತಾಯಿ ಈ ಅಸುರರನ್ನು ಕೊಂದು ಎಲ್ಲರನ್ನೂ ಅವರ ಭಯದಿಂದ ಮುಕ್ತಗೊಳಿಸಿದರು.

  ಕಗ್ಗ - ವಿಶಾಲ ಜಗತ್ತು - World

ದುರ್ಗಾ ದೇವಿಯ ಆರನೇ ಅವತಾರವಾದ ಕಾತ್ಯಾಯಿನಿ ದೇವಿಯನ್ನು ಬ್ರಿಜ್ ಮಂಡಲದ ಅಧಿದೇವತೆ, ಆಕೆಯನ್ನು ಯುದ್ಧದ ದೇವತೆ ಎಂದೂ ಕರೆಯುತ್ತಾರೆ. ತಾಯಿಯ ರೂಪವು ಚಿನ್ನದಂತೆ ಪ್ರಕಾಶಮಾನವಾಗಿದೆ ಮತ್ತು ಅತ್ಯಂತ ದೈವಿಕವಾಗಿದೆ. ತಾಯಿಗೆ ನಾಲ್ಕು ತೋಳುಗಳಿವೆ, ಆಕೆ ತನ್ನ ನಾಲ್ಕು ಕೈಗಳಲ್ಲಿ ಒಂದು ಕೈಯಲ್ಲಿ ಕಮಲದ ಹೂವನ್ನು, ಮತ್ತೊಂದರಲ್ಲಿ ಖಡ್ಗವನ್ನು ಮತ್ತು ಇನ್ನೆರೆಡು ಕೈಗಳಲ್ಲಿ ಭಕ್ತರಿಗೆ ಆಶೀರ್ವಾದವನ್ನು ಸುರಿಸುವ ಮುದ್ರೆಯನ್ನು ಹೊಂದಿದ್ದು, ಸಿಂಹಾಸನರೂಢಳಾಗಿದ್ದಳೆ. ತಾಯಿಗೆ ಹಳದಿ ಬಣ್ಣ ಎಂದರೆ ತುಂಬಾ ಇಷ್ಟ. ಶಾಸ್ತ್ರಗಳ ಪ್ರಕಾರ ತಾಯಿಯನ್ನು ಸರಿಯಾಗಿ ಪೂಜಿಸಿ ಕೆಲವು ವಿಶೇಷ ಉಪಾಯಗಳನ್ನು ಮಾಡುವುದರಿಂದ ಹೆಣ್ಣು ಮಕ್ಕಳ ವಿವಾಹವು ಶೀಘ್ರದಲ್ಲೇ ಪೂರ್ಣಗೊಳ್ಳುತ್ತದೆ ಮತ್ತು ಸೂಕ್ತ ವರ ದೊರೆಯುತ್ತಾನೆ ಎನ್ನುವ ನಂಬಿಕೆಯಿದೆ.

ಕಾತ್ಯಾಯನಿಯು ಗುರು ಗ್ರಹವನ್ನು ಆಳುತ್ತಾಳೆ. ಗುರುಗ್ರಹದ ದೃಷ್ಟಿ ಹಾಗೂ ಪ್ರಭಾವ ಉತ್ತಮವಾಗಿದ್ದರೆ ವ್ಯಕ್ತಿ ಜೀವನದಲ್ಲಿ ಪ್ರಯೋಜನ, ಸಮೃದ್ಧಿ ಹಾಗೂ ಯಶಸ್ಸನ್ನು ಪಡೆಯುತ್ತಾನೆ ಎಂದು ಹೇಳಲಾಗುತ್ತದೆ. ಕಾತ್ಯಾಯಿನಿ ದೇವಿಯ ಆರಾಧನೆ ಮಾಡುವುದರಿಂದ ಭಕ್ತರು ಗುರು ಗ್ರಹದಿಂದ ಪಡೆಯಬಹುದಾದ ಎಲ್ಲಾ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಜನ್ಮಕುಂಡಲಿಯಲ್ಲಿ ಗುರು ದೋಷವಿದ್ದರೂ ಪರಿಹಾರವಾಗುವುದು.

​ಕಾತ್ಯಾಯಿನಿ ದೇವಿ ಕಥೆ

ದೇವಿಯ ಆರನೇ ರೂಪವಾದ ತಾಯಿ ಕಾತ್ಯಾಯಿನಿಯನ್ನು ಶ್ರೀ ರಾಮ ಮತ್ತು ಶ್ರೀ ಕೃಷ್ಣ ಇಬ್ಬರೂ ಪೂಜಿಸುತ್ತಿದ್ದರು. ಶ್ರೀಕೃಷ್ಣನನ್ನು ಪಡೆಯಲು ಬ್ರಜ್‌ನ ಗೋಪಿಗಳು ಈ ದೇವಿಯನ್ನು ಪೂಜಿಸಿದರು ಎಂಬ ದಂತಕಥೆಯಿದೆ. ಕತ್ಯಾಯಿನಿ ದೇವಿಯ ಕಥೆ ಭಾಗವತ, ಮಾರ್ಕಂಡೇಯ ಮತ್ತು ಸ್ಕಂದ ಪುರಾಣಗಳಲ್ಲಿ ಉಲ್ಲೇಖವಾಗಿದೆ. ದೇವಿ ದುರ್ಗೆಯ ಪರಮ ಭಕ್ತನಾದ ಮಹರ್ಷಿ ಕಾತ್ಯಾಯಿನ ದಂಪತಿಗೆ ಮಕ್ಕಳಿರಲಿಲ್ಲ. ಅವರು ದೇವಿಯನ್ನು ಕುರಿತು ತಪಸ್ಸು ಕೈಗೊಂಡಾಗ ಆಕೆ ಪ್ರತ್ಯಕ್ಷವಾಗಿ ತಾನು ಕಾತ್ಯಾಯನ ಮಹರ್ಷಿಯ ಮಗಳಾಗಿ ಜನಿಸುವುದಾಗಿ ಆಶೀರ್ವಾದ ಮಾಡಿದಳು ಎಂದು ಪುರಾಣದ ಕಥೆ ಹೇಳುತ್ತದೆ.

ತಾಯಿ ಕಾತ್ಯಾಯನಿ ದೇವಿಯ ಅವತಾರದ ಉದ್ದೇಶವು ಮಹಿಷಾಸುರನನ್ನು ಸಂಹಾರ ಮಾಡುವುದಾಗಿತ್ತು. ಋಷಿಮುನಿಗಳು ಪೂಜಿಸಿದ ನಂತರ ಅವತಾರ ಎತ್ತಿದ ತಾಯಿ ಕಾತ್ಯಾಯನಿಯು ಅಶ್ವಿನಿ ಮಾಸದ ಶುಕ್ಲ ನವಮಿ ತಿಥಿಯಲ್ಲಿ ಮಹಿಷನೊಂದಿಗೆ ಯುದ್ಧ ಮಾಡಿ ಸಂಹಾರ ಮಾಡಿದಳು. ದಶಮಿ ದಿನದಂಧು ದೇವಿಯು ಜೇನುತುಪ್ಪ ತುಂಬಿದ ವೀಳ್ಯದ ಎಲೆಯನ್ನು ಸೇವಿಸಿ ನಂತರ ಮಹಿಷನನ್ನು ಕೊಂದಳು ಎಂದು ಪುರಾಣದ ಕಥೆಗಳು ಹೇಳುತ್ತವೆ. ಇದಾದ ನಂತರ ತಾಯಿಯನ್ನು ಮಹಿಷಾಸುರ ಮರ್ದಿನಿ ಎನ್ನುವ ಹೆಸರಿನಿಂದ ಕರೆಯಲಾಯಿತು.

  ಕನ್ನಡ ಗಾದೆಮಾತು ವಿಷಯ - ನಾಣ್ಣುಡಿ - ಲೋಕೋಕ್ತಿ - ಭಾಗ - ೫ Kannada Wisdom

ಧಾರ್ಮಿಕ ಪುರಾಣಗಳ ಪ್ರಕಾರ, ಕಾತ್ಯಾಯಿನಿಯು ದೇವತೆಗಳ ಸಂಯೋಜಿತ ಶಕ್ತಿಗಳಿಂದ ಪ್ರಕಟವಾದವಳು. ಸಾವಿರ ಸೂರ್ಯರು, ಮೂರು ಕಣ್ಣುಗಳು, ಕಪ್ಪು ಕೂದಲು ಮತ್ತು ಬಹು ಕೈಗಳ ಶಕ್ತಿಯೊಂದಿಗೆ, ಕಾತ್ಯಾಯಿನಿ ದೇವಿಯು ಮಹಿಷಾಸುರ ಎಂಬ ರಾಕ್ಷಸನನ್ನು ವಧಿಸಲು ಭೂಮಿಗೆ ಇಳಿದಳು.

ಹಿಂದೂ ಧರ್ಮದಲ್ಲಿ, ಮಹಿಷಾಸುರನು ಶಕ್ತಿಯುತ ಅರ್ಧ-ಮಾನವ ಅರ್ಧ-ಎಮ್ಮೆ ರಾಕ್ಷಸನಾಗಿದ್ದನು, ಅವನು ತನ್ನ ಆಕಾರವನ್ನು ಬದಲಾಯಿಸುವ ಸಾಮರ್ಥ್ಯವನ್ನು ಕೆಟ್ಟ ಕಾರ್ಯಕ್ಕಾಗಿ ಬಳಸಿದನು. ಅವನ ಕಿರುಕುಳದಿಂದ ಕೋಪಗೊಂಡ ಎಲ್ಲಾ ದೇವರುಗಳು ಕಾತ್ಯಾಯಿನಿಯನ್ನು ಸೃಷ್ಟಿಸಲು ತಮ್ಮ ಶಕ್ತಿಯನ್ನು ಒಂದುಗೂಡಿಸಿದರು ಮತ್ತು ದೇವಿ ಮತ್ತು ರಾಕ್ಷಸನ ನಡುವಿನ ಯುದ್ಧವನ್ನು ‘ಕೆಟ್ಟದ ಮೇಲೆ ಒಳ್ಳೆಯದ ವಿಜಯ’ ಎಂದು ಗುರುತಿಸಲಾಗಿದೆ.

ವಂಚಕ ರಾಕ್ಷಸನ ಸಂಹಾರಕಿ ಕಾತ್ಯಾಯಿನಿಯನ್ನು ಮಹಿಷರ್ಸುರಮರ್ದಿನಿ ಎಂದೂ ಕರೆಯಲಾಯಿತು ಮತ್ತು ಈ ಘಟನೆಯು ಹಿಂದೂ ಧರ್ಮದಲ್ಲಿ ಆಳವಾದ ಸಂಕೇತವನ್ನು ಹೊಂದಿದೆ. ಕಾತ್ಯಾಯಿನಿ ದೇವಿಗೆ ಬಹು ಕೈಗಳಿವೆ ಎಂದು ಹೇಳಲಾಗುತ್ತದೆ. ಶಿವನು ಅವಳಿಗೆ ತ್ರಿಶೂಲವನ್ನು ಕೊಟ್ಟರೆ, ಭಗವಾನ್ ವಿಷ್ಣುವು ಸುದರ್ಶನ ಚಕ್ರವನ್ನು, ಅಗ್ನಿ ದೇವನು ಬಾಣವನ್ನು, ವಾಯುದೇವನು ಬಿಲ್ಲು, ಇಂದ್ರ ದೇವನು ಒಂದು ಗುಡುಗು, ಬ್ರಹ್ಮದೇವನು ನೀರಿನ ಕಲಶದೊಂದಿಗೆ ರುದ್ರಾಕ್ಷಿಯನ್ನು ನೀಡಿದರು.

​ಕಾತ್ಯಾಯಿನಿ ದೇವಿ ಪೂಜೆ ವಿಧಾನ

– ಈ ದಿನ ಮುಂಜಾನೆ ಬೇಗ ಎದ್ದು ಸ್ನಾನ ಇತ್ಯಾದಿಗಳನ್ನು ಮುಗಿಸಿ ನಂತರ ಶುಭ್ರವಾದ ಬಟ್ಟೆಯನ್ನು ಧರಿಸಿ.

– ತಾಯಿಯ ವಿಗ್ರಹವನ್ನು ಶುದ್ಧ ನೀರಿನಿಂದ ಅಥವಾ ಗಂಗಾಜಲದಿಂದ ಅಭಿಷೇಕ ಮಾಡಿ.

– ತಾಯಿಗೆ ಹಳದಿ ಬಣ್ಣದ ಬಟ್ಟೆಗಳನ್ನು ಅರ್ಪಿಸಿ.

– ಅಭಿಷೇಕದ ನಂತರ ತಾಯಿಗೆ ಹೂವುಗಳನ್ನು ಅರ್ಪಿಸಿ.

– ತಾಯಿಗೆ ಕೆಂಪು ಬಣ್ಣ, ಕುಂಕುಮ ಹಚ್ಚಿ.

  ಕನ್ನಡ ಜಾನಪದ ಒಗಟುಗಳ ಕ್ವಿಜ್ - Kannada Janapada Riddles - Ogatu

– ಐದು ವಿಧದ ಹಣ್ಣುಗಳು ಮತ್ತು ಸಿಹಿತಿಂಡಿಗಳನ್ನು ತಾಯಿಗೆ ಅರ್ಪಿಸಿ.

– ಕಾತ್ಯಾಯಿನಿಗೆ ಜೇನುತುಪ್ಪವನ್ನು ಅರ್ಪಿಸಿ.

– ಕಾತ್ಯಾಯಿನಿಯನ್ನು ಧ್ಯಾನಿಸಿ.

– ಪೂಜೆಯ ಕೊನೆಯಲ್ಲಿ ತಾಯಿಗೆ ಆರತಿ ಮಾಡುವುದನ್ನು ಮರೆಯದಿರಿ.

– ಧಾರ್ಮಿಕ ನಂಬಿಕೆಗಳ ಪ್ರಕಾರ ಕಾತ್ಯಾಯಿನಿ ದೇವಿಯನ್ನು ಪೂಜಿಸುವುದರಿಂದ ದಾಂಪತ್ಯದಲ್ಲಿನ ಸಮಸ್ಯೆಗಳು ದೂರವಾಗುತ್ತವೆ.

– ಕಾತ್ಯಾಯಿನಿ ಮಾತೆಯನ್ನು ಆರಾಧಿಸುವುದರಿಂದ ಜಾತಕದಲ್ಲಿ ಗುರು ಬಲವಾಗುತ್ತದೆ.

– ಕಾತ್ಯಾಯಿನಿಗೆ ಜೇನುತುಪ್ಪವನ್ನು ಅರ್ಪಿಸುವುದರಿಂದ ಆಕರ್ಷಕ ಸೌಂದರ್ಯವನ್ನು ನೀಡುತ್ತಾಳೆ.

– ಕಾತ್ಯಾಯಿನಿ ಮಾತೆಯನ್ನು ಪೂಜಿಸುವುದರಿಂದ, ಒಬ್ಬ ವ್ಯಕ್ತಿಯು ಧನಾತ್ಮಕ ಶಕ್ತಿಯನ್ನು ಪಡೆಯುತ್ತಾನೆ.

– ಶತ್ರುಗಳ ಭಯವು ಕೊನೆಗೊಳ್ಳುತ್ತದೆ.

– ಕಾತ್ಯಾಯಿನಿ ಮಾತೆಯ ಕೃಪೆಯಿಂದ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳೂ ದೂರವಾಗುತ್ತವೆ.

​ಕಾತ್ಯಾಯಿನಿ ದೇವಿ ಮಂತ್ರ

ಯಾ ದೇವಿ ಸರ್ವಭೂತೇಷು ಶಕ್ತಿ ರೂಪೇಣ ಸಂಸ್ಥಿತಾ|
ನಮಸ್ತ್ಯೈ ನಮಸ್ತ್ಯೈ ನಮಸ್ತ್ಯೈ ನಮೋ ನಮಃ||

ಓಂ ಕಾತ್ಯಾಯಿನಿ ದೇವ್ಯೇ ನಮಃ
ಓಂ ದೇವಿ ಕಾತ್ಯಾಯಿನಿ ನಮಃ ಚಂದ್ರಹಾಸೋಜ್ವಲ ಕಾರಾ
ಶಾರ್ದೂಲ್ವರ್ವಾಹನಾ ಕಾತ್ಯಾಯಿನಿ ಶುಭಂ ದದ್ಯಾದ್ ದೇವೀ ದಾನವಗತಿನೀ

ಕಾತ್ಯಾಯಿನಿ ಪ್ರಾರ್ಥನಾ ಮಂತ್ರ:

ಚಂದ್ರಹಾಸೋಜ್ಜ್ವಲಕರಾ ಶಾರ್ದೂಲವರವಾಹನಾ|

ಕಾತ್ಯಾಯಿನಿ ಶುಭಂ ದದ್ಯಾದ್ ದೇವಿ ದಾನವಘಾತಿನೀ||

ಕಾತ್ಯಾಯಿನಿ ಧ್ಯಾನ ಮಂತ್ರ:

ವಂದೇ ವಂಚಿತ ಮನೋರಥಾರ್ಥ ಚಂದ್ರದ್ರಕೃತಾಶೇಖರಂ

ಸಿಂಹಾರುಧ ಚತುರ್ಭುಜ ಕಾತ್ಯಾಯಿನಿ ಯಶಸ್ವಿನೀಂ

ಸ್ವರ್ಣವರ್ಣ ಆಜ್ಞಾಚಕ್ರಂ ಸ್ಥಿತಂ ಶಾಶ್ತಮಾ ದುರ್ಗಾ ತ್ರಿನೇತ್ರಂ

ವರಭಿತ ಕರಂ ಶಗಪದಾಧರಂ ಕಾತ್ಯಾಯನಸುತಂ ಭಜಾಮಿ

ಪತಂಬರಾ ಪರಿಧನಂ ಸ್ಮೇರಮುಖಿ ನಾನಾಲಂಕಾರ ಭೂಷಿತಂ

ಮಂಜೀರಾ, ಹರಾ, ಕೇಯುರಾ, ಕಿಂಕಿಣಿ, ರತ್ನಕುಂಡಲ ಮಂಡಿತಂ

ಪ್ರಸನ್ನವದನಾ ಪಲ್ಲವಧಾರಂ ಕಾಂತ ಕಪೋಲಂ ತುಗಂ ಕುಚಂ

ಕಾಮನೀಯಂ ಲಾವಣ್ಯಂ ತ್ರಿವಲ್ಲಿವಿಭೂಷಿತ ನಿಮ್ನ ನಾಭೀಂ.

Leave a Reply

Your email address will not be published. Required fields are marked *

Translate »