ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಮಾಘ ಹುಣ್ಣಿಮೆ

ಮಾಘ ಹುಣ್ಣಿಮೆ…
ಮಾಘಿ ಹುಣ್ಣಿಮೆಯಂದು ಗಂಗಾ ಸ್ನಾನದ ಮಹತ್ವ:

ಮಾಘ ಮಾಸದಲ್ಲಿ ದೇವತೆಗಳು ಭೂಮಿಗೆ ಆಗಮಿಸಿ ಕೆಲವು ದಿನಗಳ ಕಾಲ ಇಲ್ಲೇ ನೆಲೆಸಿರುತ್ತಾರೆ ಎಂಬ ನಂಬಿಕೆ ಇದೆ. ಯಾವುದೇ ವ್ಯಕ್ತಿಯು ಮಾಘ ಪೂರ್ಣಿಮೆಯಂದು ಗಂಗಾ ಸ್ನಾನವನ್ನು ಮಾಡಿದರೆ, ಆತ/ಆಕೆ ಪಾಪಗಳಿಂದ ಮುಕ್ತನಾಗುತ್ತಾನೆ ಮತ್ತು ಸ್ವರ್ಗವನ್ನು ಪಡೆಯುತ್ತಾನೆ ಎನ್ನಲಾಗಿದೆ. 

 ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಿಶೇಷ ದಿನದಂದು ಸೂರ್ಯೋದಯಕ್ಕೂ ಮುನ್ನ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, ಸ್ನಾನ ಮಾಡಿ ಭಗವಾನ್‌ ವಿಷ್ಣುವನ್ನು ಪೂಜಿಸಿ ದಾನ ಧರ್ಮ ಮಾಡಿದರೆ ಮೋಕ್ಷ ಪ್ರಾಪ್ತಿಯಾಗುತ್ತದೆ. ಈ ದಿನ ಎಳ್ಳಿನ ನೈವೇದ್ಯ, ಎಳ್ಳೆಣ್ಣೆ ದೀಪ ಹಚ್ಚುವುದು ಕೂಡಾ ಒಳ್ಳೆಯದು. 

  'ಹೇಳಿಕೊಳ್ಳದಿದ್ದರೆ ಅದೆಂತಹ ಪ್ರೀತಿ?' ಸುಂದರವಾದ ಕನ್ನಡ ಕಥೆ

ಮಾಘ ಪೂರ್ಣಿಮೆಯಂದು ಭಗವಾನ್ ವಿಷ್ಣುವು ಸ್ವತಃ ಗಂಗಾನದಿಯ ನೀರಿನಲ್ಲಿ ಸ್ನಾನ ಮಾಡುತ್ತಾನೆ, ಆದ್ದರಿಂದ ಈ ದಿನದಂದು ಗಂಗಾಸ್ನಾನಕ್ಕೆ ವಿಶೇಷ ಮಹತ್ವವಿದೆ. ಈ ದಿನದಂದು ಗಂಗಾಜಲವನ್ನು ಸ್ಪರ್ಶಿಸುವುದರಿಂದ ದೇಹದ ಎಲ್ಲಾ ಕಾಯಿಲೆಗಳು ಗುಣವಾಗುತ್ತವೆ ಎಂದು ನಂಬಲಾಗಿದೆ. ಪಾಪಗಳೆಲ್ಲಾ ನಾಶವಾಗಿ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಮೊದಲಿನಿಂದಲೂ ಇದೆ.

ಪುರಾಣದ ಪ್ರಕಾರ, ಮಾಘ ಹುಣ್ಣಿಮೆಯಂದು ಗಂಗಾ-ಯಮುನೆಯಂತಹ ಪವಿತ್ರ ನದಿಗಳಲ್ಲಿ ಸ್ನಾನ ಮಾಡಿದ ನಂತರ ಭಗವಾನ್ ವಿಷ್ಣುವಿನ ಧ್ಯಾನ  ಮಾಡಿ, ದಾನ ಮಾಡಿದರೆ ಸಾಕ್ಷಾತ್‌ ವಿಷ್ಣು ಸಂತೃಪ್ತನಾಗಿ ಹರಸುತ್ತಾನೆ. ಈ ದಿನ ಹಸು, ಎಳ್ಳು, ಬೆಲ್ಲ ಮತ್ತು ಕಂಬಳಿಯನ್ನು ದಾನ ಮಾಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಹಾಗೆಯೇ ಬಟ್ಟೆ, ಬೆಲ್ಲ, ತುಪ್ಪ, ಹತ್ತಿ, ಲಡ್ಡು, ಹಣ್ಣುಗಳು, ಧಾನ್ಯಗಳು ಹಾಗೂ ಇನ್ನಿತರ ವಸ್ತುಗಳನ್ನು ದಾನ ಮಾಡಬಹುದು. 

  ದತ್ತ ಜಯಂತಿ ಪೂಜೆ ವಿಧಾನ, ಮಹತ್ವ ಮತ್ತು ಮಂತ್ರ

ಸಂಗ್ರಹ= ಅನಂತ.ಎಚ್

Leave a Reply

Your email address will not be published. Required fields are marked *

Translate »