ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಕನ್ನಡ ನಾಣ್ನುಡಿ ಸಂಗ್ರಹ ಭಾಗ – ೭ Kannada Proverb Collection

Kannada Gaade Maathu | ಕನ್ನಡ ಗಾದೆ ಮಾತು | ಗಾದೆ ವಿಸ್ತರಣೆ | Gaade expand | ಕನ್ನಡ ಜನಪ್ರಿಯ ಗಾದೆಗಳು | Kannada Popular Proverbs | Janapriya Gaadegalu | Kannada Gaadegalu | ಕನ್ನಡ ಗಾದೆಗಳು | Kannada Proverbs | ಜನಪ್ರಿಯ ಗಾದೆಗಳು | ಗಾದೆ ಅರ್ಥ ಸಹಿತ | proverbs with meanings

ಕನ್ನಡ ನಾಣ್ನುಡಿ ಸಂಗ್ರಹ ಭಾಗ – ೬ Kannada Proverb Collection

ಯಸಗಾತಿಗೆ ದೋಸೆ ಕೊಡೊ ಹೊತ್ತಿಗೆ, ಮೂಸಿಮೂಸಿ ಮೂಗಿನ ಕೆಳಗೆ ಹಾಕಿದ್ಲು
ಹುಚ್ಚು ಹೊಳೇ ಬರುವಾಗ ಹೂವಿನ ತೋಟ ಇದಿರೇ
ಹೊಕ್ಕು ಬಳಸಿದರೆ ನಂಟು
ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
ಹೊರಗೆ ಝಗ ಝಗ, ಒಳಗೆ ಭಗ ಭಗ.
ಮುಖ ನೋಡಿ ಮಣೆ ಹಾಕು
ಯೋಗ ಇದ್ದಷ್ಟೇ ಭೋಗ ಹಾಕ್ಮಣೆ,
ಹಾವೂ ಸಾಯಲಿಲ್ಲ ಕೋಲು ಮುರೀಲಿಲ್ಲ
ನಿದ್ದೆಗೆ ಮದ್ದಿಲ್ಲ, ವಜ್ರಕ್ಕೆ ಬೆಲೆಯಿಲ್ಲ.
ಆಡಿ ತಪ್ಪ ಬೇಡ ಓಡಿ ಸಿಕ್ಕ ಬೇಡ
ಗಂಜಿ ಕುಡಿಯೋನಿಗೆ,ಮೀಸೆ ಹಿಡಿಯುವವನೊಬ್ಬ
ಮೀಸೆ ಬಂದಾಗ ದೇಶ ಕಾಣದು ಮೊ.. ಬಂದಾಗ ನೆಲ ಕಾಣದು
ನೆಚ್ಚಿನೆಮ್ಮೆ ಕೋಣನನ್ನೀಯಿತು
ಮಾಡಿ ಉಣ್ಣು ಬೇಡಿದಷ್ಟು, ತಗಾದೆ ಮಾಡದೇ ಉಣ್ಣು ನೀಡಿದಷ್ಟು.ಕೆಲಸವಿಲ್ಲದ ಕು೦ಬಾರ ಮಗನ ಮುಕಳಿ ಕೆತ್ತಿದನ೦ತೆ.
ಆಕಳ ಹೊಟ್ಟೆಯಲ್ಲಿ ಅಚ್ಚೇರು ಬ೦ಗಾರ.
ಹುಣ್ಣು ಮಾದರೂ ಕಲೆ ಮಾದೀತೇ
ಹಾಡ್ತಾ ಹಾಡ್ತಾ ರಾಗ; ಉಗುಳ್ತಾ ಉಗುಳ್ತಾ ರೋಗ
ಜಟ್ಟಿ ಅಡಿಗೆ ಬಿದ್ದರೂ ಮೂಗು ಮೇಲಿದೆ ಅಂದ.
ಇದ್ದೋರು ಮೂರು ಜನರಲ್ಲಿ ಕದ್ದೋರು ಯಾರು ?
ಹೆಂಡ ಕುಡಿದ ಕಪಿಗೆ ಚೇಳು ಕಡಿದ ಹಾಗೆ
ಕಾಲಿದ್ದವನಿಗೆ ಆಟ, ಕಣ್ಣಿದ್ದವನಿಗೆ ನೋಟ.
ದೂರದ ಬೆಟ್ಟ ನುಣ್ಣಗೆ.
ಉಂಡದ್ದು ಊಟ ಆಗಲಿಲ್ಲ, ಕೊಂಡದ್ದು ಕೂಟ ಆಗಲಿಲ್ಲ
ದಾಯವಾಗಿ(=ದಾನವಾಗಿ) ಸಿಕ್ಕಿದರೆ, ನನಗೆ ಒಂದಿರಲಿ ನಮ್ಮಪ್ಪನಿಗೆ ಒಂದಿರಲಿ
ಧರ್ಮಕ್ಕೆ ಕೊಟ್ಟ ಆಕಳ ಹಲ್ಲು ಎಣಿಸಿದರು.
ಡಂಬು ನನ್ನ ಕೇಳು, ಡಬ್ಬು ನನ್ನ ಹೆಂಡ್ರನ್ನ ಕೇಳು
ಮನೆ ಬೆಳಗಲಿ ದೀಪ ಬೇಕು, ಮಾನವ ಬೆಳಗಲು ಅಕ್ಷರ ಬೇಕು.
ನಾಯಿ ಬಾಲ ಎ೦ದಿಗೂ ಡೊ೦ಕು.
ತಬ್ಬಲಿ ತಬಕು (ಎಲೆ ಅಡಿಕೆ ತಟ್ಟೆ, ತಂಬಾಕು ತಟ್ಟೆ) ಕದ್ದು ಜಗಲೀಲಿ ಸಿಕ್ಕಿಬಿದ್ದ
ಒಂದು ಒಳ್ಳೇ ಮಾತಿಗೆ ಸುಳ್ಳೇ ಪ್ರಧಾನ
ಕಲಿತವನಿಗಿಂತ ನುರಿತವನೇ ಮೇಲು.
ಪ್ರಾಮಾಣಿಕತೆಯಿಂದಲೇ ಪಾರಮಾರ್ಥ.
ಉಪಾಸ ಇದ್ರೂ ಉಪದ್ರ ಇರಬಾರ್‍ದು
ಬೆಣ್ಣೇಲಿ ಕೂದಲು ತೆಗೆದ ಹಾಗೆ
ಆಳ್ ಮೇಲ್ ಆಳ್ ಬಿದ್ದು ಗೋಣು ಬರಿದಾಯ್ತು
ಕಬ್ಬು ಡೊಂಕಾದ್ರೆ ಸವಿ ಡೊಂಕೇ
(ಅವರು) ಚಾಪೆ ಕೆಳಗೆ ತೂರಿದರೆ (ನೀನು) ರಂಗೋಲಿ ಕೆಳಗೆ ತೂರು.
ನೀರ ಕಡೆದರೆ ಬೆಣ್ಣೆ ಬಂದಾದೇನೆ
ಕೊಡಲಿ ಕಾವು ಕುಲಕ್ಕೆ ಸಾವು
ಇಬ್ಬರ ಜಗಳ ಮೂರನೆಯವನಿಗೆ ಲಾಭ.
ತಿಳಿದವನಾದರೂ ಮಲಮೂತ್ರ ಬಿಟ್ಟೀತೇ?
ಕಾಲಕ್ಕೆ ತಕ್ಕಂತೆ ನಡೆಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು
ಇತ್ತತ್ತ ಬಾ ಅಂದ್ರೆ ಇದ್ದ ಮನೆ ಕಿತ್ಕೊಂಡರು
ಊರಿಗೆ ಊರ ಚಿಂತೆಯಾದರೆ ಅಜ್ಜಿಗೆ ಅರಿವೆ ಚಿಂತೆಯತೆ
ಎರಡು ದಾಸರ ನಂಬಿ ಕುರುಡು ದಾಸ ಕೆಟ್ಟ
ಜನ ಮರುಳೋ ಜಾತ್ರೆ ಮರುಳೋ.
ಹೋದ್ರೆ ಒಂದು ಕಲ್ಲು, ಬಂದ್ರೆ ಒಂದು ಹಣ್ಣು
ತಾ ಬಲವೋ ಜಗ ಬಲವೋ
ಅರಿವಿನ ಹಾದಿ ಬೇರೆ
ಇಲಿ ಬೇಟೆಗೆ ತಮಟೆ ಬಡಿದಂಗೆ.
ಸ್ವಾರ್ಥ ಉಳಿಸಿದವ ಪಾಪಾತ್ಮ, ನಿಸ್ವಾರ್ಥ ಗಳಿಸಿದವ ಪುಣ್ಯಾತ್ಮ.
ನೀರೆ ನಿನ್ನ ಮಾತು ನಿಜವೇನೆ ನೀರ ಕಡಿದರೆ ಬೆಣ್ಣೆ ಬಂದಾದೇನೆ
ಅತಿ ಆಸೆ ಗತಿಗೇಡು
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ
ಹಿಟ್ಟು ಹಳಸಿತ್ತು ನಾಯೂ ಹಸಿದಿತ್ತು
ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ:
ಸೊಕ್ಕಿದ್ದು ಉಕ್ತದೆ ಉಕ್ಕಿದ್ದು ಒಲೆಗೆ ಹಾರ‍್ತದೆ
ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೆ ?
ಅತ್ತ ದರಿ; ಇತ್ತ ಪುಲಿ
ಬಂದರು ಬಾ ಅನ್ನದ ದರ್ಪಕುರುಡರ ಸಾವಸವೇ ಬೇಡ
ಡಾವರ (=ನೀರಡಿಕೆ) ಹತ್ತಿದಾಗ ದೇವರ ಧ್ಯಾನ
ಜಾಣನಿಗೆ ಮಾತಿನ ಪೆಟ್ಟು; ದಡ್ಡನಿಗೆ ದೊಣ್ಣೆಯ ಪೆಟ್ಟು
ತಾಟುಗಾರ ಆಟಕ್ಕೆ ಹೋಗಿ ಮೋಟಗಾರನಾಗಿ ಬಿದ್ದ ತಾತಾಚಾರ‍್ಯರ ಮನೆಗೆ ಏನಪ್ಪಣೆ?
ಒಣ ಮಾತು ಒಣಗಿದ ಹುಲ್ಲು, ಒಳ್ಳೆಯ ಮಾತು ಬೆಳ್ಳಗಿನ ಹಾಲು.
ತಾ ಕಳ್ಳೆ ಪರರ ನಂಬಳು, ಹಾದರಗಿತ್ತಿ ಗಂಡನ ನಂಬಳು
ಹೆಂಗಸರ ಬುದ್ಧಿ ಸೊಂಟದಿಂದ ಕೆಳಗೆ
ಸಮಯಕ್ಕೆ ಬಾರದ ಬುದ್ಧಿ ಸಾವಿರ ಇದ್ದರೂ ಲದ್ಧಿ
ಹೆಂಡ್ರನ್ನ ಸಸಾರ (=ತಾತ್ಸಾರ) ಮಾಡಿದ್ರೆ ಸಂಸಾರ ನಿಸ್ಸಾರವಾಗ್ತದೆ
ಸ್ವರ್ಗದಲ್ಲಿ ಸೇವೆಗೈಯುವುದಕ್ಕಿಂತ ನರಕದಲ್ಲಿ ಆಳುವುದೇ ಲೇಸು.
ಕೋರಿ (=ಚೆಂದುಳ್ಳಿ ಚೆಲುವೆ) ಒಲುಮೆ ತನಗೆ ಅನ್ನೋ ಮಾರನಿಗೆ (=ಚೆಲುವಾಂತನಿಗೆ) ಮಾರಿ ಹಿಡಿಯಿತು.
ಹಾರುವ ಆಳಲ್ಲ, ಬಾಳೆ ದಡಿಯಲ್ಲ.
ಅತಿ ಸ್ನೇಹ ಗತಿ ಕೆಡಿಸಿತು
ಬಡ ದೇವರನ್ನು ಕಂಡರೆ ಬಿಲ್ಪತ್ರೇನೂ ’ಭುಸ್’ ಅಂತಂತೆ
ಗಂಧ ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೂ ಬಳಿದುಕೊಂಡರಂತೆ
ಬೀದೀ ಕೂಸು ಬೆಳೀತು ಕೋಣೇ ಕೂಸು ಕೊಳೀತು
ತವಕ ಪಟ್ಟವ ತಬ್ಬರಿಸಿ ಬಿದ್ದ
ಹತ್ತು ಮಂದಿ ಹುಲ್ಲು ಕಡ್ಡಿ ಒಬ್ಬನ ತಲೆ ಭಾರ.
ತನ್ನ ತಾನರಿತರೆ ಸುಜ್ಞ್ನಾನಿ
ಅಶ್ವಿನೀ ಸಸ್ಯನಾಶಿನೀ.
ಆನೆಯಂಥದೂ ಮುಗ್ಗರಿಸ್ತದೆ
ಅರಮನೆಯ ಮುಂದಿರಬೇಡ, ಕುದರೆಯ ಹಿಂದಿರಬೇಡ
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
ಊಡದ ಆವಿಗೆ ಉಣ್ಣದ ಕರುವ ಬಿಟ್ಟಂತೆ
ಅರಸು ಆದೀಕ (=ಆದಾಯ) ತಿಂದ, ಪರದಾನಿ ಹೂಸು ಕುಡಿದ
ಹಲ್ಲುಬಿದ್ದ ಮುದುಕಿ ಎಲ್ಲಿ ಬಿದ್ದರೇನು
ಭಂಗಿ ದೇವರಿಗೆ ಹೆಂಡಗುಡುಕ ಪೂಜಾರಿ
ಅಪ್ಪನ ಸಾಲಕ್ಕೆ ಮಗನನ್ನು ತಿಪ್ಪೆ ಮೇಲೆ ಎಳೆದರು.
ಅರಸನ ಕುದರೆ ಲಾಯದಲ್ಲೆ ಮುಪ್ಪಾಯಿತು
ಬಂಡಾಟದ ನಡೆ ಚೆಂದ ಮಿಂಡಾಟದ ನುಡಿ ಚೆಂದ
ತಿಗಳಾ ತಾ ಕೆಡುತ್ತಾ ಏಳು ನೆರೆ ಕೆಡಿಸಿದ
ಕೆಲಸಿಲ್ಲದ ಗಂಡು ಕರೀ ಒನಕೆ ತುಂಡು
ಕುರುಡು ಕಣ್ಣಿಗಿಂತ ಮೆಳ್ಳೆ ಗಣ್ಣು ವಾಸಿ
ಹಾಲಿಗೆ ಹುಳಿ ಹಿಂಡಿದರೆ ಮೊಸರು, ಮಣ್ಣಿಗೆ ನೀರು ಹಾಕಿದರೆ ಕೆಸರು.
ಉಪ್ಪು ತಿಂದ ಮನೆಗೆ ಎರಡು ಬಗೆಯ ಬಂದ
ತುಟ್ಟಿಯಾದರೂ ಹೊಟ್ಟೆ ಕೇಳದು
ಅತೀ ಬುದ್ಧಿ, ಅ೦ಡು ಚಪ್ಪಟೆ!
ಸಾಲಗಾರನ ಮನೆಗೆ ಸವುದೆ ಹೊತ್ತರೆ ಮೇಲಣ ಬಡ್ಡಿಗೆ ಸಮವಾಯಿತು
ಸಿರಿತನ ಇರೂತನ ಹಿರಿತನ ಸಿರಿಹೋದ ಮರುದಿನ ಕಿರಿತನ
ರಾಮಾಯ ಸ್ವಸ್ತಿ, ರಾವಣಾಯ ಸ್ವಸ್ತಿ .
ಮೋಕ್ಷಮಂತ್ರ ತಿಳಿದವನಿಗೆ ವೇದಮಂತ್ರದ ಗೊಡವೆಯೆ?
ಹಳೇ ಗಂಡನ ಪಾದವೇ ಗತಿ
ಧರ್ಮಕ್ಕೆ ಕೊಟ್ಟ ಆಕಳ ಹಲ್ಲು ಎಣಿಸಿದರು
ದೀಪದ ಕೆಳಗೆ ಯಾವತ್ತೂ ಕತ್ತಲೇ
ಮಂಕುದಿಣ್ಣೆ ಮದಿವೆಗೆ ಹೋದರೆ ವಾಲಗದವರೆಲ್ಲಾ ಅಟ್ಟಾಡಿಕೊಂಡು ಹೊಡೆದರಂತೆ
ಚಿಂತೆ ಇಲ್ಲದವನಿಗೆ ಸ೦ತೇಯಲ್ಲೂ ನಿದ್ದೆ.
ಊಟ ಬಲ್ಲವನಿಗೆ ರೋಗವಿಲ್ಲ , ಮಾತು ಬಲ್ಲವನಿಗೆ ಜಗಳವಿಲ್ಲ.
ಹಾಕ್ಮಣೆ, ನೂಕ್ಮಣೆ, ಯಾಕ್ಮಣೆ
ನವಿಲಾಡಿತು ಅಂತ ಕೆಂಬೂತ ಪುಕ್ಕ ತೆರೆಯಿತು
ಹೆಂಡ ಕುಡಿಯುವ ದೇವರಿಗೆ ಹೇ.. ತಿನ್ನುವ ಪೂಜಾರಿ
ಉದ್ದರಿ ಕೊಟ್ಟು ಸೆಟ್ಟಿ ಕೆಟ್ಟ, ಕಡ ಸಿಕ್ಕು ಬಡವ ಕೆಟ್ಟ.
ಹಿರಿಯಕ್ಕನ ಚಾಳಿ ಮನೆಮಕ್ಕಳಿಗೆಲ್ಲ
ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು
ತನ್ನ ಯಂತ್ರಕ್ಕೆ ಎಣ್ಣೆ ಹಾಕಲೂ ಆಗದವ ಇನ್ನೊಬ್ಬರಿಗೆ ಉಪದೇಶ ನೀಡಿದಂತೆ.
ಎತ್ತು ಏರಿಗೆಳೀತು, ಕೋಣ ನೀರಿಗೆಳೀತು.
ಉದ್ದುದ್ದ ಮಾತಿನವರ ಮೊಳಕೈ ಮೊಂಡ.
ಪುಣ್ಯ ಉಂಡು (=ಸುಖ ಅನುಭೋಗಿಸಿ) ತೀರಿತು, ಪಾಪ ತಿಂದು (=ಕಷ್ಟ ಅನುಭವಿಸಿ) ತೀರಿತು
ಅರಿತೂ ಮಾಡಿದ ಪಾಪ ವಜ್ರದ ಸೆರೆಯಂತೆ
ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ
ಕೋಮಟಿ ಕೊಡ;ಜೈನಿಗ ಬಿಡ
ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
ಸಗಣಿಯವನ ಸರಸಕ್ಕಿಂತ, ಗಂಧದವನ ಗುದ್ದಾಟ ಮೇಲು
ಆಸೆ ಮಾತು ಕೊಟ್ಟು ಬಾಸೆ ತಪ್ಪಬಾರ‍್ದು
ಮೂರೂ ಬಿಟ್ಟೋನು, ಊರಿಗೆ ದೊಡ್ಡೋನು
ಅತಿ ಸ್ನೇಹ ಗತಿ ಕೇಡು
ಬೆಕ್ಕಿನ ಕನಸಿನಲ್ಲಿ ಬರೀ ಇಲಿಗಳೇ
ಪಾಪಿ ಸಮುದ್ರ ಹೊಕ್ರೂ ಮೊಣಕಾಲುದ್ದ ನೀರು
ಹಬ್ಬಕ್ಕೆ ಹೋಗಿ ತಬ್ಬಿಬ್ಬನಾದ
ಊರಿಗೆ ಉಪಕಾರಿ, ಮನೆಗೆ ಮಾರಿ
ಬಾವಿಯ ಬಾಯನ್ನು ಮುಚ್ಚಬಹುದು, ಜನಗಳ ಬಾಯನ್ನಲ್ಲ.
ಪ್ರಥಮ ಚುಂಬನೇ ದಂತ ಭಗ್ನಮ್
ಊರು ಬಾವಿಗೆ ಬಿದ್ದರೂ, ಊರ ಬಾಯಿಗೆ ಬೀಳಬಾರದು
ಮನೆ ಮಗ ಉ೦ಡಷ್ಟೂ ಒಳ್ಳೇದು, ಮಗೆ ಮಳೆ ಬ೦ದಷ್ಟೂ ಒಳ್ಳೇದು.
ಒಕ್ಕುವುದು ರೈತನ ಗುಣ ನೆಕ್ಕುವುದು ನಾಯಿಯ ಗುಣ
ನೀರುಗಣ್ಣಿನ ಹೆಂಗಸು ಊರು ಹಾಳು ಮಾಡಿದಳಂತೆ.
ನಾಲಿಗೆಯಿಂದ ಕೆಳಗೆ ಬಿದ್ದರೆ ನರಕ.
ಸ್ನೇಹ ಎಂಬ ಸಂಪಿಗೆ ಸುಮಧುರವಾದದ್ದು.
ಇಲ್ಲದ ಕಾಲಕ್ಕೆ ಕಲ್ಲೆದೆ ಬೇಕು
ಅಪಕೀರ್ತಿ ತರುವ ಮಗನಿಗಿಂತ, ಸತ್ಕೀರ್ತಿ ತರುವ ಆಳೇ ಮೇಲು.
ದಡ್ಡನಿಗೆ ಹಗಲು ಕಳೆಯುವುದಿಲ್ಲ, ಒಳ್ಳೆಯವನಿಗೆ ರಾತ್ರಿ ಸಾಲುವುದಿಲ್ಲ.
ಕತೆ ಹೇಳೋಕೆ ಹ್ಞುಂ-ಗುಟ್ಟೋರಿರಬೇಕು, ನೆಟ್ಟಗೆ ಬಾಳೋಕೆ ಛೀ-ಗುಟ್ಟೋರಿರಬೇಕು
ಮಾತು ಬೆಳ್ಳಿ, ಮೌನ ಬಂಗಾರ.
ಆಗ ಬಾ ಈಗ ಬಾ ಹೋಗಿ ಬಾ ಅನ್ನದೆ ಕೊಡುವ ತ್ಯಾಗವಾಗು
ಹನುಮಂತಾನೆ ಬಾಲ ಕಡಿತಿರುವಾಗ, ಇವನ್ಯಾವನೋ ಶಾವಿಗೆ ಕೇಳಿದನಂತೆ.
ಹುಚ್ಚರ ಮದುವೆಯಲ್ಲಿ ಉನ್ಡೋನೆ ಜಾಣ.
ಹೆಂಡತಿಯ ಮಾತು ಆಗದಿರಲಿ ಕೊಯ್ದುಕೊಳ್ಳುವಂತೆ ಕತ್ತು.
ಕಂಡ ಮನೆಗೆ ಕಳ್ಳ ಬಂದ , ಉಂಡ ಮನೆಗೆ ನೆಂಟ ಬಂದ
ಜಪ-ತಪ ಉಪವಾಸ ಇದ್ದರೆ ಅಂತಕನ ವಿಪರೀತ ತಪ್ಪೀತೆ
ತಿರುಪದ ಪುಟ್ಟಿಯಲ್ಲಿ ಶನೀಶ್ವರ ಕೂತ
ತಲೆ ಚೆನ್ನಾಗಿದ್ದರೆ ಮುಂಡಾಸು ನೂರು ಕಟ್ಟಬಹುದು
ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
ಹೊತ್ತಿರುವಾಗಲೇ ಗೊತ್ತು ಸೇರಬೇಕು
ತಗ್ಗು ಗದ್ದೆಗೆ ಮೂರು ಬೆಳೆ ಎತ್ತರದ ಗದ್ದೆಗೆ ಒಂದೇ ಬೆಳೆ
ನೀಡುವವ ಉತ್ತಮ ಬೇಡಿದರೂ ನೀಡದವ ಅಧಮ
ಗಂಡ ಹೆಂಡಿರ ಜಗಳ ಉಂಡು ಮಲಗುವ ತನಕ
ತರಗು ಲಡ್ಡಿಗೆ ಡೊಳ್ಳು ಗಣಪತಿಯೇ ಶ್ರೇಷ್ಠ
ತಾಯಿ ಬೇಕು ಇಲ್ಲವೇ ಬಾಯಿ ಬೇಕು.
ಅಳಿವುದೇ ಕಾಯ ಉಳಿವುದೇ ಕೀರ್ತಿ
ಹಂಪಿಗೆ ಹೋಗುವುದಕ್ಕಿಂತ ಕೊಂಪೆಯಲ್ಲಿರುವುದೇ ಲೇಸು.
ಕಡ್ಡೀನ ಗುಡ್ಡ ಮಾಡು.
ಒಳ್ಳೇನಾದ ನಲ್ಲೆ ಮುಂದೆ ಸುಳಿದರೆ ಲೋಕದೊಳಗೆ ಒಲ್ಲದವರಾರು
ಗಂಟೂ ಹೋಯ್ತು;ನಂಟೂ ಹೋಯ್ತು
ದಾಕ್ಷಿಣ್ಯಕ್ಕೆ ಬಸಿರಾದರೆ ಹಡೆಯೋದು ಕಷ್ಟ
ಕುಂಬಾರಂಗೆ ವರುಷ; ದೊಣ್ಣೆಗೆ ನಿಮಿಷ
ಜನಕ್ಕಂಜದಿದ್ದರೂ ಮನಕ್ಕಂಜಬೇಕು
ಅಂಬಲಿ ಕುಡಿಯುವವನಿಗೆ, ಮೀಸೆ ಹಿಡಿಯುವವನೊಬ್ಬ
ಬೆಕ್ಕಿಗೆ ಬೆಣ್ಣೆ ಕಂಡಿತು ಬಡಿಗೆ ಕಾಣಲಿಲ್ಲ
ನಾಯಿಯು ನಮ್ಮನ್ನು ಕಚ್ಚಿದರೆ ನಾಯಿಯನ್ನು ಕಚ್ಚಲು ನಮ್ಮಿಂದ ಆಗುವುದೇ?
ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು.
ಹಿರೀ ಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ
ರಟ್ಟೆ ಮುರಿದು ರೊಟ್ಟಿ ತಿನ್ನು ಕಟ್ಟೆ ಹಾಕಿ ಅನ್ನ ಉಣ್ಣು
ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ
ಇಲಿಯ ವ್ಯಾಜ್ಯಕ್ಕೆ ಬೆಕ್ಕು ಸಾಕ್ಷಿ
ಮೊಂಡ ಮಾವನಿಗೊಬ್ಬ ಭಂಡ ಅಳಿಯ
ತನುವರಿಯದ ನೋವಿಲ್ಲ ಮನವರಿಯದ ತಾಪವಿಲ್ಲ
ಅಪ್ಪನ್ನೇ ಅಪ್ಪ ಅನ್ನದೋನು,ಚಿಕ್ಕಪ್ಪನ್ನ ಅಪ್ಪಾ ಅಂತ ಕರೀತಾನಾ?
(ನೀನು)ಮೊಳ ಬಿಟ್ಟರೆ,(ನಾನು) ಮಾರು ಬಿಡುತ್ತೇನೆ
ಹೊಸದರಲ್ಲಿ ಅಗಸ ಗೋಣಿಯನ್ನು ಎತ್ತಿ ಎತ್ತಿ ಒಗೆದನಂತೆ
ಅಟ್ಟದಿಂದ ಬಿದ್ದವನನ್ನು ದಡಿಗೆ ತೆಗೆದುಕೊಂಡು ಚಚ್ಚಿದರು.
ರಸವಳ್ಳಿ ಹೆಣ್ಣಿಗೆ ರಸಪೂರಿ ಹಣ್ಣಿಗೆ ಮನ ಸೋಲದವರಿಲ್ಲ
ಅಗಸರ ಕತ್ತೆ ಕೊಂಡು ಹೋಗಿ, ಡೊಂಬರಿಗೆ ತ್ಯಾಗ ಹಾಕಿದ ಹಾಗೆ
ಕೂಡಿದ ಗಂಡನನ್ನಾದರೂ ಬಿಟ್ತೇನು ಕಲ್ತದ್ದ ಬಿಡಲಾರೆ
ಮಾಘ ಕಾವ್ಯ ಮಗನಿಗೆ ಬೇಡ
ಉಪ್ಪಿಗಿ೦ತ ರುಚಿಯಿಲ್ಲ ತಾಯಿಗಿ೦ತ ದೇವರಿಲ್ಲ.
ಬೆಂಕಿಗೆ ಕರಗದ್ದು ಬಿಸಿಲಿಗೆ ಕರಗೀತೇ
ತಾರೇಮರದ ಕಾಯಾದರೂ ಕರೆದರೆ ಬಂದೀತೇ
ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ.
ಕೊ೦ಕಣ ಸುತ್ತಿ ಮೈಲಾರಕ್ಕೆ ಬ೦ದರು.
ಕೆಟ್ಟು ಬದುಕಬಹುದು ಬದುಕಿ ಕೆಡಬಾರದು
ತಾಯಿಯನ್ನು ಹೊಡೆಯಬಾರದು, ಗುಬ್ಬಿಯ ಗೂಡನ್ನು ತೆಗೆಯಬಾರದು.
ಎಡಗಣ್ಣು ಹೊಡೆದರೆ ನಾರಿಗೆ ಶುಭ.
ಸೊಕ್ಕಿದ್ದು ಉಕ್ತದೆ ಉಕ್ಕಿದ್ದು ಒಲೆಗೆ ಹಾರ್ತದೆ
ನೆಂಟ ನೆರವಲ್ಲ ಕುಂಟ ಜೊತೆಯಲ್ಲ
ತಾರಕ್ಕೊಂದು ಸೀರೆಯಾದರೂ ನಾಯಿ ತಿಕ ಬೆತ್ತಲೆ
ಕೊಡೋದು ಕೊಳ್ಳೋದು ಗಂಡಂದು, ಮಜ ಮಾಡೋದು ಹೆಂಡ್ರುದ್ದು
ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡಿದರಂತೆ
ದೊಂಬರಾಟ ಆಡಬಹುದು ಮಕ್ಕಳಾಟ ಆಡೊಕ್ಕಾಗಲ್ಲ.
ತೀರಕ್ಕೆ ಬಂದ ಮೇಲೆ ತೆರೆಯ ಭಯವೇ
ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು
ಲೆಕ್ಕಕ್ಕಿಂತ ಹೆಚ್ಚು ಹೊರಬಾರದು, ಲೆಕ್ಕಕ್ಕಿಂತ ಹೆಚ್ಚು ದೂರೆಬಾರದು.
ಅಡವಿಯ ದೊಣ್ಣೆ ಪರದೇಸಿಯ ತಲೆ
ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ
ಬಸವನ ಹಿಂದೆ ಬಾಲ.
ಚಿನ್ನದ ಸೂಜೀಂತ ಕಣ್ಣು ಚುಚ್ಚಿಕೊಳ್ಳುವುದಕ್ಕೆ ಆಗುತ್ತದೆಯೇ?
ಕೆಟ್ಟ ಅಡಿಗೆ ಅಟ್ಟವಳೇ ಜಾಣೆ
ಹಾಲು ಕುಡಿದ ಮಕ್ಕಳೇ ಬದುಕೊಲ್ಲ; ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವೇ ?
ಕೊಡುವವನ ಕೈ ಯಾವಾಲು ಮೇಲೆ
ಕಡಲೆಗೆ ಮುಂದು ಕಡಿವಾಣಕ್ಕೆ ಹಿಂದು.
ಶಿವಾ ಅರಿಯದ ಸಾವು ಇಲ್ಲ ಮನಾ ಅರಿಯದ ಪಾಪ ಇಲ್ಲ
ನಿಷ್ಠೆ ಇಲ್ಲದೆ ಎಷ್ಟು ಪೂಜೆ ಮಾಡಿದರೂ ನಷ್ಟ
ಪಾಪಕ್ಕೆ ಹೆದರು, ತಾಪಕ್ಕೆ ಹೆದರದಿರು.
ತಾಯಿ ಮಾರಿಯಾದರೆ ತರಳನು ಎಲ್ಲಿ ಹೋದಾನು
ತಾನು ಮಾಡುವುದು ಉತ್ತಮ; ಮಗ ಮಾಡುವುದು ಮಧ್ಯಮ; ಆಳು ಮಾಡುವುದು ಹಾಳು
ಏಳರಲ್ಲಿ ಬರಲೋ? ಎಪ್ಪತ್ತರಲ್ಲಿ ಬರಲೋ?
ಶಸ್ತ್ರದಿಂದಾದ ಗಾಯ ಮಾಯುತ್ತದೆ, ನಾಲಿಗೆಯಿಂದಾದ ಗಾಯ ಮಾಯುವುದಿಲ್ಲ.
ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು
ಪಾಪಿ ಚಿರಾಯು
ತಾಳೇ ಹಣ್ಣು ತಾನೇ ಬಿದ್ದರೂ ಬಾಳಾದ ಮುರವಗೆ ಬಾಯಿ ಮುಚ್ಚಿತು
ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
ನಾಡಳಿದು ನಾಡೊಡೆಯನಿಗೆ ಕೇಡು ನಾಡೊಡೆಯ ಅಳಿದು ನಾಡಿಗೆಲ್ಲ ಕೇಡು
ಅತ್ತೂ ಕರೆದೂ ಔತಣ ಹೇಳಿಸಿಕೊಂಡರು
ಇಲ್ಲದ ಬದುಕು ಮಾಡಿ ಇಲಿಗೆ ಚಣ್ಣ ಹೊಲಿಸಿದರು
ಆಕಾಶ ಹರಿದು ಬೀಳುವಾಗ ಕೈ ಅಡ್ಡ ಹಿಡಿಯಬಹುದೇ ?
ಹೆಂಗಸರ ಬುದ್ಧಿ ಮೊಣಕಾಲ ಕೆಳಗೆ
ಚಿಕ್ಕಪ್ಪನಾದರೆ ಮನೆಗೆ ಬಂದು ಕಾಲು ಹಿಡಿದೇನು ಅಪರಾಧಕ್ಕೆ ದೋತ್ರಾ ಕೊಡಬೇಕು
ಉಪ್ಪು ಬರುವ ಹೊತ್ತಿಗೆ (ನೆಮ್ಮದಿ ಬರುವ ಕಾಲಕ್ಕೆ) ಸೊಪ್ಪಿನಾಟ ಪೂರೈಸಿತು
ಕಾಲ ತಪ್ಪಿದ ಬಳಿಕ ನೂರು ಮಾಡಿದರು ಹಾಳು
ತಾಯಿ ಒಂದಾದರೂ ಬಾಯಿ ಬೇರೆ
ಮೊಸರು ಇಟ್ಟುಕೊಂಡು ಮಜ್ಜಿಗೆಗೆ ಅತ್ತಹಾಗೆ.
ಹಾಕೋದು ಬಿತ್ತೋದು ನನ್ನಿಚ್ಛೆ; ಆಗೋದು ಹೋಗೋದು ದೇವರಿಚ್ಛೆ
ನೀರೆ ನಿನ್ನ ಮಾತು ನಿಜವೇನೆ
ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದರು
ರಾಗ ನೆನೆಪಾದಾಗ ತಾಳ ಮರೆತು ಹೋಯಿತಂತೆ
ಮಂದ್ಯಾಗ ಮಚ್ಚೀಲೆ ಹೊಡೆದು ಸಂದ್ಯಾಗ ಕಾಲು ಹಿಡಿದರು
ತಿಪ್ಪೆಯ ಮೇಲೆ ಕುಂಡ್ರುವವಗೆ ತಕ್ಯೆ ಯಾತಕ್ಕೆ
ಇದ್ದ ಮಕ್ಕಳೇ ಎಣ್ಣೆ ಬೆಣ್ಣೆ ಕಾಣದಿರುವಾಗ ಮತ್ತೊಂದು ಕೊಡೋ ದೇವರೇ ಅಂದಂತೆ
ಹೌದಪ್ಪನ ಮನೇಲಿ ಹೌದಪ್ಪ, ಇಲ್ಲಪ್ಪನ ಮನೇಲಿ ಇಲ್ಲಪ್ಪ
ಸಿದ್ದಿಗಿಂತ ಬಲವಿಲ್ಲ ಬುದ್ಧಿಗಿಂತ ಹಿರಿದಿಲ್ಲ
ಆಫೀಸಿನಲ್ಲಿ ಆಫೀಸರ್, ಮನೆಯಲ್ಲಿ ಕುಕ್ಕರ್. .
ಒಂದಕ್ಕೆರಡು ದಂಡ,ಹೆಂಡಕ್ಕೆ ರಾಗಿ ದಂಡ
ಕೋಪದಲ್ಲಿ ಕೊಯ್ದ ಮೂಗು ಶಾ೦ತವಾದ ಮೇಲೆ ಬರುವುದಿಲ್ಲ.
ಕೊಟ್ಟವನು ಕೋಡಂಗಿ; ಇಸ್ಕೊಂಡೋನು ಈರಭದ್ರ
ಸೊಪ್ಪುಸೆದೆ ತಿನ್ನೋರ ಒಪ್ಪ ನೋಡು, ತುಪ್ಪತೊಗೆ ತಿನ್ನೋರ ರಂಪ ನೋಡು
ಸುರಿದು ಊಟ ಮಾಡು ಗೊರೆದು ನಿದ್ದೆ ಮಾಡು
ಛತ್ರದಲ್ಲಿ ಊಟ ಮಠದಲ್ಲಿ ನಿದ್ರೆ
ಬುದ್ಧಿಗಳ್ಳನಿಗೆಲ್ಲಿ ಸತ್ಯ, ಸದಾಚಾರ!
ಹಿರೀಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ
ಕೊಂಡು ಕೊಟ್ಟದ್ದೂ ಇಲ್ಲ ಹಂಚಿ ಉಂಡದ್ದೂ ಇಲ್ಲ ಸ್ವರ್ಗ ಬೇಕು ಅಂದ
ತಾರತಮ್ಯ ಅರಿಯದವ ದೊರೆಯಲ್ಲ ಮಾತು ಮೀರಿದವ ಸೇವಕನಲ್ಲ
ಉತ್ತಮ ಹೊಲ ಮಧ್ಯಮ ವ್ಯಾಪಾರ ಕನಿಷ್ಠ ಚಾಕರಿ
ಲೇ ! ಅನ್ನೋಕ್ಕೆ ಅವಳೇ ಇಲ್ಲ, ಮಗಳ ಹೆಸರು ಅನ೦ತಯ್ಯ.
ಕೆಲಸವಿಲ್ಲದ ಶಾನುಭೋಗ ಹಳೆ ಲೆಕ್ಕ ನೋಡಿದ ಹಾಗೆ.
ಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇ
ಮರಿ ಮಾಡುವ ಮೊದಲೇ ಮೊಟ್ಟೆಗಳನ್ನು ಎಣಿಸಬೇಡ.
ಲಲನೆಯರ ಒಲುಮೆ ತೊಲಗಿದರೆ ಇಲ್ಲ ಇಂಬರಿದು ಕೊಡುವಳೆ ರಂಭೆ
ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು.
ಆಡುತ್ತಾ ಆಡುತ್ತಾ ಭಾಷೆ, ಹಾಡುತ್ತಾ ಹಾಡುತ್ತಾ ರಾಗ
ಮಳೆಗಾಲದ ಮಳೆ ನಂಬಲಾಗದು ; ಮನೆ ಹೆಂಡ್ತಿ ನಗೆ ನಂಬಲಾಗದು.
ತಾಳಕ್ಕೆ ತಕ್ಕ ಮೇಳ
ವಶಗೆಡದೆ ಹಸಗೆಡಲ್ಲ
ಕೊಚ್ಚೆ ಮೇಲೆ ಕಲ್ಲು ಹಾಕಿದಂತೆ
ಹೊಟ್ಟೆ ತುಂಬಿದೋರಿಗೆ ಹುಡುಗಾಟ, ಹೊಟ್ಟೆಗಿಲ್ಲದೋರಿಗೆ ಮಿಡುಕಾಟ
ಎತ್ತೂ ಕೋಣಕ್ಕೆ ಎರಡು ಕೋಡು, ನಮ್ಮ ಅಯ್ಯಂಗಾರ್ಗೆ ಮೂರು ಕೋಡು
ತೂತು ಗತ್ತಲೇಲಿ ತಾತನ ಮದುವೆ
ಬಡವನ ಸಿಟ್ಟು ದವಡೆಗೆ ಮೂಲ
ಹಾಲುಕ್ಕಿದ ಮನೇಲಿ ಮೇಲ್‍ಗರೀಲಿ.
ನೀರೆಯ ಓರೆಗಣ್ಣ ನೋಟಕ್ಕೆ ನಾಡೆಲ್ಲ ಇರಿದಾಡಿತು/ಕಾದಡಿತು
ತಾಯಂತೆ ಕರು ನಾಯಂತೆ ಬಾಲ ತಾಯಂತೆ ಮಕ್ಕಳು ನೂಲಂತೆ ಸ್ಯಾಲೆ
ಹಂಪ್ಯಾಗ ಇರೂದಕ್ಕಿಂತ ತನ್ನ ಕೊಂಪ್ಯಾಗ ಇರೂದ್ ಲೇಸು
ತಾಯಿಗೆ ಸೇರದ್ದು ನಾಯಿಗೂ ಸೇರದು
ಮೂಗಿಗಿಂತ ಮೂಗುತಿ ಭಾರ
ಕಳ್ಳನ ಮನಸ್ಸು ಹುಳ್ಳಗೆ
ತನ್ನ ಮರ‍್ಯಾದೆ ಕೆಟ್ಟವ ಪರರ ಮರ‍್ಯಾದೆ ಇಟ್ಟಾನೆ?
ಚೇಳಿಗೆ ಪಾರುಪತ್ಯಾ ಕೊಟ್ತರೆ ಜಾವಕ್ಕೆ ಒಂದು ಸಾರಿ ಮುಟ್ಟಿಸಿತು
ಚಳಿ ಆಗುವ ಹಾಗೆ ಗಂಡನೂ ಆಗುವುದಿಲ್ಲ ಮಕ್ಕಳು ಆಗುವುದಿಲ್ಲ.
ಇತ್ತಿತ್ತ ಬಾ ಅಂದ್ರೆ ಇದ್ದ ಮನೇನೂ ಕಿತ್ತುಕೊಂಡ
ಊರಿಗೆ ಬ೦ದವಳು ನೀರಿಗೆ ಬರದೆ ಇರುತ್ತಾಳೆಯೇ ?
ಉಂಡದ್ದೇ ಉಗಾದಿ , ಮಿಂದದ್ದೇ ದೀವಳಿಗೆ , ಹೊಟ್ಟೆಗಿಲ್ಲದ್ದೇ ಏಕಾದಶಿ.
ಪೇಚಾಟದಲ್ಲಿ ಬಿದ್ದವನಿಗೆ ಪೀಕಲಾಟವೇ ಗತಿ.
ತಾನು ನೆಟ್ಟ ಬೀಳು ತನ್ನ ಎದೆಗೆ ಹಬ್ಬಿತು
ಕಾಮಾಲೆ ಕಣ್ಣವನಿಗೆ ಕಾಣುವುದೆಲ್ಲಾ ಹಳದಿ.
ಊರು ದೂರಾಯಿತು ಕಾಡು ಹತ್ತರಾಯಿತು
ಕೊಚ್ಚೆ ಮೇಲೆ ಕಲ್ಲು ಹಾಕಿದ ಹಾಗೆ.
ಪೆದ್ದ ಮರದ ತುದಿಯೇರಿ ಅಣಿತಪ್ಪಿ ಬಿದ್ದು ಸತ್ತ
ದೇವರಿಲ್ಲದ ಗುಡಿ;ಯಜಮಾನನಿಲ್ಲದ ಮನೆ ಎರಡೂ ಒಂದೇ
ಅಮ್ಮನವರು ಪಟ್ಟಕ್ಕೆ ಬಂದಾಗ,ಅಯ್ಯನವರು ಚಟ್ಟಕ್ಕೇರಿದರು
ದೂಫ ಹಾಕಿದರೆ ಪಾಪ ಹೋದೀತೇ
ಚೇಳಿಗೊಂದೇ ಬಸಿರು ; ಬಾಳೆಗೊಂದೇ ಗೊನೆ
ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ
ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು.
ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ
ಸಗಣಿಯವನೊಡನೆ ಸ್ನೇಹಕ್ಕಿಂತ ಗಂಧದವನ ಜೊತೆ ಗುದ್ದಾಟ ಮೇಲು
ಹಾಲಲ್ಲಾದ್ರೂ ಅದ್ದು, ನೀರಲ್ಲಾದ್ರೂ ಅದ್ದು.
ಅನ್ನ ಹಾಕಿದ ಮನೆಗೆ ಕನ್ನ ಹಕಬೇಡ
ಇದ್ದಲ್ಲಿ ಗವುಡ ಹೋದಲ್ಲಿ ಕಿವುಡ
ಊರೆಲ್ಲ ಸೂರೆ ಆದ ಮೇಲೆ ಬಾಗಿಲ ಮುಚ್ಚಿದರು
ಹುಟ್ಟುವವನ ಅಣ್ಣ ಬೆಳೆಯುವವನ ತಮ್ಮ
ಕುದಿಯುವ ಎಣ್ಣೆಯಿಂದ ಕಾದ ತವದ ಮೇಲೆ ಬಿದ್ದ ಹಾಗೆ
ತನ್ನೂರಲಿ ರಂಗ, ಪರೂರಲಿ ಮಂಗ
ಇಂಬರಿತು ಕೊಡುವಳೆ ರಂಭೆ
ಹುತ್ತ ಬಡಿದರೆ ಹಾವು ಸಾಯುವುದೇ
ತಮ್ಮನೇಲಿ ಹೆಗ್ಗಣ ಸತ್ತು ಬಿದ್ದಿದ್ದರೂ ಬೇರೇ ಮನೇ ಸತ್ತ ನೊಣದ ಕಡೆಗೆ ಬೆಟ್ಟು ಮಾಡಿದರು
ಪಕ್ಕದ ಮನೇಗೆ ಬಿದ್ದ ಬೆಂಕಿ ಬಿಸಿ ತನ್ನ ಮನೇಗೆ ಬೀಳೋವರೆಗೂ ತಾಕಲ್ಲ
ಆಸೆಗೆ ಮಿತಿಯಿಲ್ಲ, ಆಕಾಶಕ್ಕೆ ಅಳತೆಯಿಲ್ಲ.
ಮಾಡಿದ್ದುಣ್ಣೋ ಮಹರಾಯ.
ಬಂಗಾರಕ್ಕೆ ಕುಂದಣವಿಟ್ಟಂತೆ ವಜ್ರಕ್ಕೆ ಸಾಣಿ ಹಿಡಿದಂತೆ
ಕಾಲಕ್ಕೆ ತಕ್ಕಂತೆ ನಡಿಯಬೇಕು,ತಾಳಕ್ಕೆ ತಕ್ಕಂತೆ ಕುಣಿಯಬೇಕು
ಶಿವರಾತ್ರಿ ಮನೆಗೆ ಏಕಾದಶಿ ಬಂದಂಗೆ
ಆಸೆ ಆಸ್ತಿ ಮಾಡ್ತು, ದುರಾಸೆ ನಾಶ ಮಾಡ್ತು.
ಹಾಲು ಬಿಟ್ಟವರ ಮನೆಗೆ ಸೀಬಿ ಅಂದಂಗೆ.
ತಲೆಗೆ ಎಣ್ಣೆ ಇಲ್ಲ ತನು ಮೃಗನಾಭಿ ಬೇಡಿತು
ಲೋಕ ತಿಳಿಯಬೇಕು ಲೆಕ್ಕ ಕಲಿಯಬೇಕು
ಆಡು ಮುಟ್ಟದ ಸೊಪ್ಪಿಲ್ಲ
ಮುದಿ … ಮಹಾ ಪತಿವ್ರತೆ (ವೃದ್ಧ ನಾರೀ ಪತಿವ್ರತಾ)
ಹುಣಿಸೆ ಮರ ಮುದಿಯಾದ್ರೂ ಕಾಯಿ ಹುಳಿ ಹೋಗಲ್ಲ
ನೋಡಿ ನಡೆದವರಿಗೆ ಕೇಡಿಲ್ಲ.
ಇಂಗು ತೆಂಗು ಇದ್ದರೆ ಮಂಗಮ್ಮನೂ ಅಡಿಗೆ ಮಾಡ್ತಾಳೆ.
ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ
ಚಂಡಾಲ ದೇವರಿಗೆ ಚಪ್ಪಲಿ ಸೇವೆ
ದಾರಿಯಲ್ಲಿ ಹೋಗುತ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊಂಡಂತೆ
ಯೋಗಿ ತಂದದ್ದು ಯೋಗಿಗೆ, ಭೋಗಿ ತಂದದ್ದು ಭೋಗಿಗೆ
ಕಾರ್ಯಾವಾಸಿ ಕತ್ತೆಕಾಲು ಹಿಡಿ.
ನಿಜ ಆಡಿದರೆ ನಿಷ್ಠೂರ
ಹಾದರ ಹಾಲು ಸಕ್ಕರೆಯಂತೆ,ಬಯಲಾದರೆ, ಬೇವಿನ ಸಾರದಂತೆ
ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡ
ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ
ಉಗಮವಾಗದಿರಲಿ ಹಿಂಸೆ, ಹೆಚ್ಚಿಗೆಯಾಗದಿರಲಿ ಆಸೆ.
ಉಂಬುವ ಜಂಗಮ ಬಂದರೆ ನಡೆಯೆಂಬರು, ಉಣ್ಣದ ಲಿಂಗಕ್ಕೆ ಬೋನ ಹಿಡಿಯೆಂಬರು
ಹಸಿದು ಹಲಸಿನ ಹಣ್ಣು ತಿನ್ನು ಉಂಡು ಮಾವಿನ ಹಣ್ಣು ತಿನ್ನು
ಅನ್ನ ಹಾಕಿದ ಮನೆಗೆ ಕನ್ನ ಹಾಕಿದಂತೆ
ಒಳಿತಾಗಿ ಮುಗಿದಿದ್ದೆಲ್ಲವೂ ಒಳ್ಳೆಯದೇ.
ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು
ಗೆದ್ದೆತ್ತಿನ ಬಾಲ ಹಿಡಿದ ಹಾಗೆ.
ಇಲಿ ಹೆಚ್ಚಿದವೆಂದು, ಮನೆಗೆ ಉರಿ ಇಡ ಬಾರದು
ಸಾಮವೇದದ ಗಾನ
ಹಗೆ ಮಾತು ಆತುಕೊಂಡ, ತುಟಿ ಬಿಚ್ಚದೆ ಕೂತುಕೊಂಡ
ಇಲ್ಲು ಪೋಗಂಡ ಅಲ್ಲು ಪೋಗಂಡ
ಮಾಡೋರನ್ನು ಕಂಡರೆ ನೋಡು ನನ್ನ ಸಿರೀನ
ಕೂಳಿಗೆ ಕೇಡು ಭೂಮಿಗೆ ಭಾರ
ಹಿಟ್ಟು ಹಳಸಿತ್ತು; ನಾಯಿ ಹಸಿದಿತ್ತು
ಸರಿಯಾದ ಎಚ್ಚರಿಕೆ ಇಲ್ಲದೆ ಹರಕೆಯ ಕುರಿಯಾದ
ರಾಮ ರಾಜ್ಯ ಬಂದರೂ ರಾಗಿ ಬೀಸೋದು ತಪ್ಪಲಿಲ್ಲ
ಹಸಿದ ಹೊಟ್ಟೆ ತೋರಿಸಿದರೆ ಮಸೆದ ಕತ್ತಿ ತೋರಿಸಿದರು
ಶಿವ ಪೂಜೇಲಿ ಕರಡಿ ಬಿಟ್ಟಂಗೆ
ಹುಲ್ಲಿನ ಬಣವೇಲಿ ಸೂಜಿ ಹುಡುಕಿದ ಹಾಗೆ
ಹಣ್ಣು ತಿಂದವನು ನುಣುಚಿಕೊಂಡ; ಸಿಪ್ಪೆ ತಿಂದವನು ಸಿಕ್ಕಿ ಹಾಕಿಕೊಂಡ
ಹೆಂಡ್ರ ಅವಾಂತರ ತಡಿಲಾರದೆ ಗಂಡ ದೇಶಾಂತರ ಹೋದ
ನಾವೂ ನೀವೂ ನೆಂಟರು , ಗಂತಿಗೆ ಮಾತ್ರ ಕೈ ಹಚ್ಚಬೇಡಿ.
ಮಂಡಕ್ಕಿ ತಿಂದ ಮಗ ಮದ್ದಾನೆ ತರುಬಿದ ಮೃಷ್ಟಾನ್ನ ತಿಂದ ಮಗ ನೊಣ ಝಾಡಿಸಿದ.
ಹೆರಿಗೆ ಬೇನೆ ಕೆಲ ಗಂಟೆ ಗಂಟ, ಬಂಜೆ ಬೇನೆ ಬದುಕಿನ ಗಂಟ
ಹೆಣ್ಣಿನ ಬಾಳು ಕಣ್ಣೀರಿನ ಗೋಳು
ಬಡ್ಡಿ ಬಾಯಿಗಂಜ್ತೀಯೋ,ದೊಡ್ಡೆತ್ತಿನ ಕೋಡಿಗಂಜ್ತೀಯೋ
ಸಂತೇಲಿ ಮಂತ್ರ ಹೇಳಿದಂಗೆ
ಬಗ್ಗಿದವನಿಗೆ ಒಂದು ಗುದ್ದು ಹೆಚ್ಚು.
ಕಂಕುಳಲ್ಲಿ ದೊಣ್ಣೆ; ಕೈಯಲ್ಲಿ ಶರಣಾರ್ಥಿ
ಬೇಡಿದರೆ ಇಲ್ಲ ಅನ್ನೋದ್ ಕಷ್ಟ ನೀಡುವರ ಬೇಡ ಅನ್ನೋದ್ ಕಷ್ಟ
ಹಾಳೂರಿಗೆ ಉಳಿದೋನೇ ಗೌಡ,
ಉತ್ತಮವಾದ ನಗು ನೇಸರನ ಮಗು.
ಹಾರಾಡೋ ಅಪ್ಪುಂಗೆ ತೂರಾಡೋ ಮಗ ಹುಟ್ದಂಗೆ
ನೆಂಟರೆಲ್ಲ ಖರೆ, ಕಂಟಲೆ ಚೀಲಕ್ಕೆ ಕೈ ಹಾಕಬೇಡ
ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರಂತೆ
ಸೊಲ್ಲಿನ ಬೇದ ತಿಳಿದ ಕಿರಿಯ ಎಲ್ಲರಿಗೂ ಹಿರಿಯ
ಕಟ್ಟಿಕೊಂಡವಳು ಕಡೇ ತನಕ; ಇಟ್ಟುಕೊಂಡವಳು ಇರೋ ತನಕ
ಮಧ್ಯಾಹ್ನದ ಊಟವಾದಮೇಲೆ ಮುಳ್ಳಿನ ಮೇಲಾದರೂ ಮಲಗು, ರಾತ್ರಿ ಊಟವಾದ ಮೇಲೆ ಅರ್ಧ ಮೈಲಿ ನಡೆ.
ರಾಮ ಅನ್ನೋ ಕಾಲದಲ್ಲಿ ರಾವಣ ಬುದ್ಧಿ
ಮಘೆ ಮಳೆ ಬಂದಷ್ಟೂ ಒಳ್ಳೇದು, ಮನೆ ಮಗ ಉಂಡಷ್ಟೂ ಒಳ್ಳೇದು
ಮದುವೆಯಾಗೋ ಗುಂಡ ಅಂದರೆ ನೀನೇ ನನ್ನ ಹೆಂಡತಿಯಾಗು ಅಂದ ಹಾಗೆ
ಕಲ್ಲು ಇದ್ದಾಗ ನಾಯಿ ಇಲ್ಲ ನಾಯಿ ಇದ್ದಾಗ ಕಲ್ಲು ಇಲ್ಲ
ಘಟಾ (ದೇಹ ) ಇದ್ದರೆ ಮಠಾ ಕಟ್ಟಿಸಬಹುದು.
ಬಾಲೇರ ಮನಸ್ಸು ನೆಲೆಯಿಲ್ಲ
ಆಸೆ ಹೆಚ್ಚಿತು ಆಯಸ್ಸು ಕಮ್ಮಿ ಆಯಿತು
ಮೋಟಾಳಿಗೊಂದು ಚೋಟಾಳು
ಸಡಗರದಲ್ಲಿ ಮದುವೆ ಮಾಡಿ ಈ ಹೆಣ್ಣು ಯಾರು ಅಂದಳಂತೆ
ಸಮತೆ ತೊಟ್ಟು ಪದವಿ ಮುಟ್ಟು
ಸೂಳೆಗೆ ಮದುವೆ ಮಾಡಿದ ಹಾಗೆ
ಹೂವ ತರುವ ಮನೆಗೆ ದೇವ ಹುಲ್ಲು ಹೊರುವ
ಸೂಳೆ ಮುಪ್ಪಾಗಿ ಗೊರವಿತ್ತಿಯಾದಳು
ಹೀನ ಸುಳಿ ಬೋಳಿಸಿದರೂ ಹೋಗೋದಿಲ್ಲ
ಅನ್ನ ಹಾಕಿದ ಮನೆಗೆ ಕನ್ನ ಹಾಕಬೇಡ
ನೀರಿನಲ್ಲಿ ಹೋಮ ಮಾಡಿದಂತೆ
ತೀಟೆಗೆ ಮಕ್ಕಳ ಹೆತ್ತು ತಿರುಮಲ ದೇವರ ಹೆಸರಿಟ್ಟ ಹಾಗೆ
ಸೊಸೆ ಸತ್ತರೆ ಸೊಬಾನ ಮಗ ಸತ್ತರೆ ಮನೆ ಹಾಳು.
ಕೊಡದ ಲೋಭಿ ಮಾತು ಕೊಡಲಿ ಪೆಟ್ಟು
ಹಿರಿದು ಪಾಪ ಮಾಡಿ ಗಂಗೆಗೆ ಹರಿದರು
ಇಕ್ಕಲಾರದ ಕೈ ಎಂಜಲು
ಸತ್ತವರಿಗೆ ಸಂಗವಿಲ್ಲ ಕೆಟ್ಟವರಿಗೆ ನೆಂಟರಿಲ್ಲ
ತಾಳ ತಪ್ಪಿದ ಬಾಳು, ತಾಳಲಾರದ ಗೋಳು
ಅಂಗಾಂಗದಲ್ಲಿ ಪಾಪ ಮಡಗಿಕೊಂಡು ಗಂಗೇಲಿ ಮಿಂದು ಬಂದ
ಅಪ್ಪನ ಮನೇಲಿ ಸೈ ಅನ್ನಿಸಿಕೊಂಡೋಳು, ಅತ್ತೆ ಮನೇಲೂ ಸೈ ಅನ್ನಿಸಿಕೊಣ್ತಾಳೆ
ಕೃಷಿತೋನಾಸ್ತಿ ದುರ್ಭಿಕ್ಷಂ
ತಾನು ಗರತಿ ಆದರೆ ಸೂಳೆಗೇರೀಲಿ ಮನೆ ಕಟ್ಟು
ನರಿ ಕೂಗು ಗಿರಿ ಮುಟ್ಟುತ್ಯೇ ?
ಬಾಲ ಸುಟ್ಟ ಬೆಕ್ಕಿನ ಹಾಗೆ
ಊರಿಗೆ ಬಂದ ನೀರೆ ನೀರಿಗೆ ಬಾರದಿರುತ್ತಾಳೆಯೇ?
ಆಡಿಕೊಳ್ಳೋರ ಮುಂದೆ ಎಡವಿ ಬಿದ್ದ ಹಾಗೆ
ಕಲಹವೇ ಕೇಡಿಗೆ ಮೂಲ.
ತಕ್ಕುದನ್ನು ಅರಿಯದ ಓದು ಲಕ್ಷ ಓದಿದರೇನು
ಶರಣು ಆದವನಿಗೆ ಮರಣವಿಲ್ಲ.
ರಾಮೇಶ್ವರಕ್ಕೆ ಹೋದರೂ ಶನೇಶ್ವರನ ಕಾಟ ತಪ್ಪಲಿಲ್ಲ
ಅರಿತರೆ ಮಾತನಾಡು, ಮರೆತರೆ ಕೂತು ನೋಡು.
ಇಟ್ಟ ವಿಭೂತಿ ಪಟ್ಟದಂತೆ
ಒಂದು ಕಣ್ಣಿಗೆ ಬೆಣ್ಣೆ; ಮತ್ತೊಂದು ಕಣ್ಣಿಗೆ ಸುಣ್ಣ
ಬೆಲ್ಲ ಇದ್ದಲ್ಲಿ ನೊಣ ತಿರುಗಾಡಿದಂತೆ.
ಒಪ್ಪವಿಲ್ಲದ ಮಾತು ತುಪ್ಪವಿಲ್ಲದ ಊಟ
ದಾಕ್ಷಿಣ್ಯವ೦ತ ದೇಶಕ್ಕೆ ಹೋದರೆ ದಕ್ಷಿಣೆ ಸಿಕ್ಕೀತೇ!
ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು.
ಉಂಡ ಮನೆ ಜಂತೆ ಎಣಿಸಬಾರದು
ನೆರೆದ ಸಿರಿ ಜಾವಕ್ಕೆ ಹರಿದು ಹೋಯಿತು
ತಾನು ಜಾರಿಬಿದ್ದು ಉಣ್ಣೆಯಂತ ನೆಲ ಅಂದ
ಮುರವ ತಾವು ಮಾಡುವುದು ಗಂಧರ್ವರು ಮಾಡಿದರು
ಎಡದ ನೆತ್ತಿಗೆ ಬಡಿದರೆ ಬಲದ ನೆತ್ತಿಗೆ ತಾಕಿತು
ಬೆಂಕಿ ಇಲ್ಲದೆ ಹೊಗೆ ಏಳಲ್ಲ
ಹನಿ ಹನಿ ಸೇರಿದರೆ ಹಳ್ಳ, ತೆನೆ ತೆನೆ ಸೇರಿದರೆ ಬಳ್ಳ.
ಮೊಸರ ಕಡೆದರೆ ಬೆಣ್ಣೆ ಒಸೆದು ಬಂತು
ಕುದುರೆ ಕಂಡರೆ ಕಾಲುನೋವು
ತನಗೆ ಬಂದ ಹಾನಿ ದುಡ್ಡಿನಿಂದ ಹೋಯಿತು
ಮೀಸೆ ಬ೦ದವನು ದೇಶ ಕಾಣ.
ಉದ್ಯೋಗವೇ ಗಂಡಸಿಗೆ ಲಕ್ಷಣ
ತಪಸ್ಸು ಇದ್ದವನೇ ಗಭಸ್ತಿ (=ಕಾಂತಿ) ಉಳ್ಳವನು
ಮನೇಗೆ ಬೆಂಕಿ ಬಿದ್ದಾಗ ಭಾವಿ ತೋಡಕ್ಕೆ ಶುರು ಮಾಡಿದರಂತೆ
ಕುಚ ಹೇಮ ಶಸ್ತ್ರ ಸೋಂಕಿದಾಗ ಶುಚಿ ವೀರ ಧೀರರು ಅಚಲಿತರಾದರು
ಅಡಿಕೆ ಕದ್ದ ಮಾನ ಆನೆ ಕೊಟ್ರೂ ಬರೊಲ್ಲ
ಸತ್ತು ಕೊಳ್ಳೋ ಸೊರ್‍ಗಕ್ಕಿಂತ ಬದುಕಿ ಕೊಳ್ಳೋ ನರಕ ಲೇಸು
ಸಂತೆ ಹೊತ್ತಿಗೆ ಮೂರು ಮೊಳ ನೇದ ಹಾಗೆ
ಬಡವನಿಗೆ ಉಳಿದಷ್ಟೆ ಅಭಿಮಾನ
ತಾನೂ ತಿನ್ನ; ಪರರಿಗೂ ಕೊಡ
ಒಪ್ಪೊತ್ತು೦ಡವ ಯೋಗಿ, ಎರಡೂತ್ತು೦ಡವ ಭೋಗಿ, ಮೂರೊತ್ತು೦ಡವ ರೋಗಿ, ನಾಲ್ಕೊತ್ತು೦ಡವನ ಹೊತ್ಕೊ೦ಡ್ಹೋಗಿ.
ಉಣವಲ್ಲ ಉಡವಲ್ಲದವನ ಒಡವೆ ಕಂಡವರ ಪಾಲಾಯ್ತು
ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಿಗೆ ಹೋಗಿ ಮೊಳ ಹಾಕಿದರು
ವೇದ ಸುಳ್ಳಾದರೂ ಗಾದೆ ಸುಳ್ಳಾಗದು.
ಇಷ್ಟನ್ನು ಕಂಡೆಯಾ ಕೃಷ್ಣಂಭಟ್ಟಾ ಅಂದರೆ,ಮುಪ್ಪಿನ ಕಾಲಕ್ಕೆ ಮೂರು ಜನ ಹೆಂಡಿರು
ಆಳಾಗದವ ಅರಸನಲ್ಲ, ಹಟ ಹಿಡಿದವ ಸಾಮ್ರಾಟನಲ್ಲ.
ಅಯ್ಯೋ ಅಂದರೆ ಅರೆ ವಯಸ್ಸು
ಈರಣ್ಣನ ಮುಂದೆ ಬಸ್ಸಣ್ಣ ಕುಂತಂತೆ
ಸಾವಿರ ಚಿತ್ತಾರ ಮಸಿ ನುಂಗಿತು
ಸಮಯಕ್ಕಿಲ್ಲದ ನೆರವು ಸಾವಿರ ಇದ್ದರೂ ಎರವು (ಅನ್ಯ)
ಆಡಿ ಉಂಡ ಮೈ ಅಟ್ಟು ಉಂಡೀತೇ?
ಅತಿಯಾದರೆ ಅಮೃತವೂ ವಿಷ
ಸಾದೆತ್ತಿಗೆ ಎರಡು ಹೇರು
ಹೆಂಡತಿಯಿಲ್ಲದ ಮನೆ ತಂತಿಯಿಲ್ಲದ ವೀಣೆ
ಕತ್ತೆಯ ಕಾಲು ಮುರಿದರೇನು ? ನಾಯಿಯ ಹಲ್ಲು ಮುರಿದರೇನು?
ಒಂದೊಂದು ಹನಿ ಬಿದ್ದು ನಿಂತಲ್ಲಿ ಮಡುವಾಯ್ತು
ಊರಿಗೆ ಬಂದವಳು ನೀರಿಗೆ ಬರದೆ ಇರುತ್ತಾಳೆಯೆ?
ಅತ್ತೆಯ ಮನಿಯಾಗ ಮುತ್ತಾಗಿ ಇರಬೇಕು
ಕೂತು ಉಣ್ಣೋನಿಗೆ ಕುಡಿಕೆ ಹೊನ್ನು ಸಾಲದು
ರಾಗಿ ಇದ್ರೆ ರಾಗ ರಾಗಿ ಇಲ್ದಿದ್ರೆ ರೋಗ
ಕೋಣನೆರಡುಂ ಹೋರೆ ಗಿಡುವಿಂಗೆ ಮಿತ್ತು (ರಾಘವಾಂಕ)
ಕಳ್ಳನ ಹೆಜ್ಜೆ ಕಳ್ಳನೇ ಬಲ್ಲ
ತಲೆ ಸೀಳಿದರೆ ಎರಡಕ್ಷರ ಇಲ್ಲ
ಹುಲಿಯ ಬಣ್ಣವನ್ನು ಮೆಚ್ಚಿ, ನರಿ ತನ್ನ ಕೂದಲನ್ನು ಭಸ್ಮ ಮಾಡಿಕೊಂಡಂತೆ.
ಉಣ್ಣೋಕಿಲ್ಲದಿದ್ದರೂ ಸಣ್ಣಕ್ಕಿ ಅನ್ನ ತಿಂದರು ; ಉಡೋಕಿಲ್ಲದಿದ್ದರೂ ಪಟ್ಟೆ ಸೀರೆ ಉಟ್ಟರು
ಅರವಲ್ಲದ್ದು (ಧರ್ಮವಲ್ಲದ್ದು) ಮಾಡಿದರೂ ತರವಲ್ಲದ್ದು ಮಾಡಬಾರದು
ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ
ತಂತು ಕೂಟಸ್ಥ ಇಲ್ದೋನ ಓದು ಗಿಳಿ ಕಲ್ತ ಪಾಠದಂತೆ
ತವಡು ತಿಂಬುವನಿಗೆ ವಯ್ಯಾರ ಯಾಕೆ
ಹಾಳೂರಿಗೆ ಉಳಿದವನೇ ಗೌಡ
ಅಟ್ಟ ಮೇಲೆ ಒಲೆ ಉರಿಯಿತು, ಕೆಟ್ಟ ಮೇಲೆ ಬುದ್ಧಿ ಬಂತು
ಬೈದು ಹೇಳಿದವರು ಬದುಕಕ್ಕೆ ಹೇಳಿದರು
ಓದಿದರ ಅರಿವು ಮೇದ ಕಬ್ಬಿನ ರಸ
ನಾಯಿಗೆ ಹೊತ್ತಿಲ್ಲ; ನಿಲ್ಲಕ್ಕೆ ನೆಲೆಯಿಲ್ಲ
ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ
ಮನೆಯ ಕಷ್ಟಕ್ಕೆ ನೆರೆಮನೆಯವರು ಹೊಣೆ ಏನು?
ಹಲ್ಲಿದ್ರೆ ಕಡಲೆ ಇಲ್ಲ;ಕಡಲೆ ಇದ್ರೆ ಹಲ್ಲಿಲ್ಲ
ಜ್ಯೋತಿಯ ನೆಲೆ ಅರಿತವನೇ ಯೋಗಿ
ಕೋತಿಗೆ ಹೆಂಡ ಕುಡಿಸಿದಂತೆ
ಕೈಗೆಟುಕದ ದ್ರಾಕ್ಷಿ ಹುಳಿ.
ಲಿಂಗ ಹರಿದ ಮೇಲೆ ಜಂಗಮನ ಹಂಗೇನು
ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಂಡಂತೆ
ತಿಪ್ಪೇ ಮೇಲೇ ಮುಪ್ಪಾದ ಕುಂಬಾರ ತಿಪ್ಪ
ನುಡಿಯೊಳು ಹೊಳೆವುದು ನಾಡಿನ ನಡವಳಿ.
ಹರಯದಲ್ಲಿ ಹಂದಿ ಕೂಡ ಚೆನ್ನಾಗಿರುತ್ತೆ.
ತಮ್ಮ ಕೋಳಿ ಕೂಗಿದ್ದರಿಂದಲೇ ಬೆಳಗಾಯಿತು ಎಂದುಕೊಂಡರು
ಲೋಕ ತಿಳೀಬೇಕು ಲೆಕ್ಕ ಕಲೀಬೇಕು.
ಒಂದರ ಮೊದಲೊಳಗೆ ಬಂದಿದೆ ಜಗವೆಲ್ಲ
ತಾಳಿದವ ಬಾಳ್ಯಾನು
ಹಟದಿಂದ ಹೆಣ್ಣು ಕೆಟ್ಟಳು ಚಟದಿಂದ ಗಂಡು ಕೆಟ್ಟ
ಸೆಟ್ಟಿ ಸಾಲ ಸತ್ತ ಮೇಲೆ ತಿಳೀತು
ಹಲವು ದೇವರ ಮಾಡಿ ಹಾರುವಯ್ಯ ಕೆಟ್ಟ
ಹಬ್ಬದ ದಿನವೂ ಹಳೇ ಗಂಡನೇ ?
ದೇಶ ಸುತ್ತು ; ಕೋಶ ಓದು.
ಸರಿಸುಮಾರಾಗಿ ಸಮಾನಾರ್ಥಕ ಗಾದೆಗಳು
ಕಳ್ಳನ ಹೆಂಡತಿ ಎಂದಿದ್ದರೂ ಮುಂ..
ಸಾಲ ಅಂದ್ರೆ ಶೂಲ, ಕಾಲ ಅಂದ್ರೆ ಯಮ
ಗಿಣಿ ಸಾಕಿ ಗಿಡುಗದ ಕೈಗೆ ಕೊಟ್ಟರು
ಕೊಡಲಾರದ ಹೆಣ್ಣಿಗೆ ತೆರವ ಕೇಳಿದರಂತೆ
ಲಕುಮಿ ತೊಲಗಿದ ಬಳಿಕ ಕುಲ ವೀರವಿದ್ದು ಫಲವಿಲ್ಲ
ಮಾತು ಮನೆ ಮುರೀತು, ತೂತು ಒಲೆ ಕೆಡಿಸ್ತು
ಹೋದಾ ಪುಟ್ಟಾ, ಬಂದಾ ಪುಟ್ಟಾ, ಪುಟ್ಟನ ಕಾಲಿಗೆ ನೀರಿಲ್ಲ
ಹಿಮಾಲಯದಲ್ಲಿ ಹಿಮ ಹೆಚ್ಚಂತೆ, ವೀರಭದ್ರನಲ್ಲಿ ಅವತಾರ ಹೆಚ್ಚಂತೆ.
ಅಗಸನ ಬಡಿವಾರವೆಲ್ಲ ಹೆರರ ಬಟ್ಟೆ ಮೇಲೆ
ಸಂಸಾರ ಗುಟ್ಟು; ವ್ಯಾಧಿ ರಟ್ಟು
ಬಸವನ ಹಿಂದೆ ಬಾಲ, ಸೂಜಿ ಹಿಂದೆ ದಾರ
ಮಾತಿಂದಲೇ ನಗೆನುಡಿ ಮಾತಿಂದಲೇ ಹಗೆ
ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ
ಧೂಳಿ ಧೂಪವಾದೀತೆ, ಮಾಳಿಗೆ ಸ್ವರ್ಗವಾದೀತೆ?
ತಪ್ಪಿದವನಿಗೆ ಒಪ್ಪು ಇಲ್ಲ ತಪ್ಪು ಹೊರಿಸಿದವನಿಗೆ ಒಪ್ಪುವವನು ಯಾರು
ಕುದಿಯುವುದರೊಳಗಾಗಿ ಮೂರು ಸಾರಿ ಹಳಸಿದಂತೆ
ಎಲ್ಲಾ ಬಣ್ಣ ಮಸಿ ನುಂಗಿತು
ಬರೀ ಕೈಗಿಂತ ವಾಸಿ ಹಿತ್ತಾಳೆ ಕಡಗ
ರಾಯ ಸತ್ತರೂ ಹೆಣ ; ನಾಯಿ ಸತ್ತರೂ ಹೆಣ .
ಹೊಸ ಡಾಕ್ಟರ್‌ಗಿಂತ ಹಳೇ ಕಾಂಪೌಂಡರ್ ವಾಸಿ
ಚರ್ಮ ಸುಕ್ಕಾದ್ರೆ ಮುಪ್ಪು, ಕರ್ಮ ಮುಕ್ಕಾದ್ರೆ ಮುಕ್ತಿ
ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಇಷ್ಟ.
ಆರಿದ್ರೆ ಮಳೆಯಲ್ಲಿ ಆದವನೇ ಒಡೆಯ.
ಹುಟ್ಟಿಸಿದ ದೇವರು ಹುಲ್ಲು ಮೇಯಿಸುತ್ತಾನೆಯೆ ?
ಬುದ್ಧಿ ಇದ್ದವನಲ್ಲಿ ಶ್ರದ್ಧೆ, ನಿದ್ದೆ ಬಾರದವನಲ್ಲಿ ವಿದ್ಯೆ.
ಸಂತೆ ಸೂಳೆ ನೆಚ್ಚಿಕೊಂಡು ಮನೆ ಹೆಂಡಿರನ್ನ ಬಿಟ್ಟರಂತೆ.
ಮಾತಿಂದಲೇ ಉಪಚಾರ ಮಾತಿಂದಲೇ ಅಪಚಾರ
ಅಣ್ಣಿಗೇರ‍್ಯಾಗ ಎಣ್ಣೆ ಮೊಣಕಾಲ ಮಟ್ಟ
ಸಂಕಟ ಬಂದಾಗ ವೆಂಕಟರಮಣ
ಮಂಗನ ಕೈಗೆ ಮಾಣಿಕ್ಯ ಕೊಟ್ಟ ಹಾಗೆ
ತಾಯಿ ಬೇಕು ಇಲ್ಲವೆ ಬಾಯಿ ಬೇಕು
ನೇಮ ಉಳ್ಳವನ ಕಂಡರೆ ಯಮನಿಗೂ ಭಯ
ಹನುಮಂತನೇ ಹಗ್ಗ ತಿನ್ನುವಾಗ ಪೂಜಾರಿಗೆ ಶ್ಯಾವಿಗೆ ಬೇಕಂತೆ
ಹಳೆ ಚಪ್ಪಲಿ, ಹೊಸ ಹೆ೦ಡತಿ ಕಚ್ಹೊಲ್ಲ
ಹತ್ತರೊಟ್ಟಿಗೆ ಹನ್ನೊಂದು ಜಾತ್ರೆಯೊಟ್ಟಿಗೆ ಗೋವಿಂದು
ನೂಕ್ಮಣೆ, ಯಾಕ್ಮಣೆ ತೇಗಿ ತೇಗಿ ಬೀಗಿ ಬಿದ್ದ
ಮೆಲ್ಲಗೆ ಹರಿಯೋ ನೀರು ಕಲ್ಲ ಕೊರೆದಿತ್ತು
ಗಾಳಿ ಬ೦ದಾಗ ತೂರಿಕೋ.
ಭಾಷೆ ಕೊಟ್ಟವನು ಪೋಷಣೆ ಮಾಡನೇ?
ಹ೦ಪೆಗೆ ಹೋಗದಿದ್ದರೆ ಸ೦ಪಿಗೆ ನೋಡಲಿಲ್ಲವೇ?
ಅಂಜುತ್ತಾ ಅಳುಕುತ್ತಾ ತಿಂದ ಅಮೃತ ನಂಜು
ಒಕ್ಕಣ್ಣರ ನಾಡಿಗೆ ಹೋದ್ರೆ ಒಂದು ಕಣ್ಣು ಮುಚ್ಚಿ ನಡೆಯಬೇಕು
ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದ ಹಾಗೆ.
ಗುಡಿಸಿದ ಮೇಲೆ ಕಸವಿರಬಾರದು ಬಡಿಸಿದ ಮೇಲೆ ಹಸಿವಿರಬಾರದು
ಓದಿ ಓದಿ ಮರುಳಾದ ಕೂಚು ಭಟ್ಟ; ಓದದೆ ಅನ್ನ ಕೊಟ್ಟ ನಮ್ಮ ರೈತ
ಮೂರು ವರ್ಷಕ್ಕೆ ಬಂದಿದ್ದು ಮೂವತ್ತು ವರ್ಷಕ್ಕೆ ಬಂತು
ಅಡುಗೆ ಮಾಡಿದವಳಿಗಿ೦ತ ಬಡಿಸಿದವಳೆ ಮೇಲು.
ಕೈಗೆಟುಕದ ದ್ರಾಕ್ಷಿ ಹುಳಿ
ಕೈಯ್ಯಲ್ಲೆ ಬೆಣ್ಣೆ ಇಟ್ಟುಕೊಂಡು,ತುಪ್ಪಕ್ಕೆ ಊರೆಲ್ಲ ಅಲೆದರಂತೆ
ಸಾದೆತ್ತಿಗೆ ಎರಡು ಹೇರು (ಹೊರೆ)
ತೊಳೀಲಿಲ್ಲ ಬಳೀಲಿಲ್ಲ ಮೂಗೇಕೆ ಮಸಿಯಾಯ್ತು
ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.
ಹಾಲು ಮಾರಿದ್ದು ಹಾಲಿಗೆ ನೀರು ಮಾರಿದ್ದು ನೀರಿಗೆ
ಪಡುವಣ ಮನೆಗೆ ಮೂಡಣ ದೀಪ
ತತ್ವಮಸಿ ಅಂತ ಅನ್ನೋದ್ ಕಲಿ ಅಂದ್ರೆ ತುತ್ತು ಸವಿ ಅಂತ ಉಣ್ನೋದ್ ಕಲ್ತ
ಎಡವಿದ ಕಾಲು ಎಡವುದು ಹೆಚ್ಚು
ಜಾತಿ ನೀತಿಯಿಲ್ಲ, ಮಾರಿಗೆ ಕರುಣೆ ಇಲ್ಲ.
ಬಾಯಿಯಿದ್ದ ಮಗ ಬದುಕುವನು.
ಸಿರಿಯವ್ವನದ ಹೆಣ್ಣು ಸಕ್ಕರೆ ಬೊಂಬೆಯಂತೆ
ಹೊನ್ನಿನ ಶೃತಿ ಕೇಳಿ ಎಂಥೆಂಥಾವರೆಲ್ಲ ಭ್ರಮೆಗೆ ಬಿದ್ದರು
ಗಂಡ ಹೆಂಡಿರ ಜಗಳ ಉನ್ಡು ಮಲಗೊ ತನಕ
ಕಬ್ಬು ಡೊಂಕಾದರೆ ಸಿಹಿ ಡೊಂಕೆ ?
ಹೊಟ್ಟೆ ಉರಿದು ಕೊಳ್ಳೋದು ಒಂದೇಯ, ಹೊಟ್ಟೆ ಇರಿದು ಕೊಳ್ಳೋದು ಒಂದೇಯ
ಉಪ್ಪ ತಿಂದ ಮೇಲೆ ನೀರು ಕುಡಿಯಲೇ ಬೆಕು
ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ.
ಕಾಡಿಗೆ ಗಣ್ಣ ಚೆಲುವೆ ಮನೆಗೆ ಕೇಡು ತಂದಳು
ಎಲ್ಲವೂ ತಾನಗ ಬಲ್ಲರೆ ಅದುವೇ ಯೋಗ
ಊರಿಗೆ ದೊರೆ ಆದರೂ ತಾಯಿಗೆ ಮಗನೆ.
ಬಿಡುಕು ಮಾತಿಗೆ ಮಾಡಿಕೊಳ್ಳದಿರು ಕೆಡುಕು.
ರಾಮೇಶ್ವರಕ್ಕೆ ಹೋದ್ರೂ ಶನೀಶ್ವರನ ಕಾಟ ತಪ್ಪಲಿಲ್ಲ
ತಾಯಿಗೆ ಕಂಡರೆ ತಲೆ ನೋವು
ಹಾಕು ಮಣೆ,ನೂಕು ಮಣೆ,ತಳ್ಳು ಮಣೆ
ಉಪ್ಪಿಕ್ಕಿದವರನ್ನು ಮುಪ್ಪಿನ ತನಕ ನೆನೆ
ವಿದ್ಯೆ ಇಲ್ಲದವನು ಹದ್ದಿಗಿಂತಲೂ ಕಡೆ
ತೋಟ ಶೃಂಗಾರ, ಒಳಗೆ ಗೋಣಿ ಸೊಪ್ಪು
ಉಟ್ಟು ಉಡಲಾರ ಕೊಟ್ಟು ಸೈರಿಸಲಾರ
ಕಂಡದ್ದು ಕಾಣೆ ಉತ್ತಮ ಕಂಡದ್ದು ಕಂಡೆ ಮಧ್ಯಮ, ಕಾಣದ್ದು ಕಂಡೆ ಅಧಮ
ಕಾಯಕವೇ ಕೈಲಾಸ
ಹತ್ತರ ಮಾತು ರುಚಿಯಲ್ಲ
ವರಕವಿಗಳ ಮುಂದೆ ನರಕವಿಗಳು ವಿದ್ಯೆ ತೋರಬಾರದು
ಅಣ್ಣ ಹುಸಿಯಾದರೂ ತಮ್ಮ ತಂಪು ತರದೇ ಹೋಗಲ್ಲ.
ದೈವದ ಸೊಲ್ಲು ಹರಟುವಾತ ಭವದೊಳಗೆ ತೇಲಾಡುತಿದ್ದ
ಬಾಯ್ ತೆವಲು ತೀರಿಸಿಕೊಳ್ಳೋಕೆ ಎಲೆ ಅಡಿಕೆ ಬೇಕು, ಮೈ ತೆವಲು ತೀರಿಸಿಕೊಳ್ಳೋಕೆ ಒಡಂಬಡಿಕೆ ಬೇಕು
ನಾನು ಅಗೆಯುವಲ್ಲಿ ಕಲ್ಲು, ಅಜ್ಜ ಅಗೆಯುವಲ್ಲಿ ಮಣ್ಣು.
ಹಗ್ಗ ಹರಿಯಲಿಲ್ಲ ಕೋಲು ಮುರಿಯಲಿಲ್ಲ
ಶ್ಯಾನುಭೋಗರ ಸ೦ಬಳ ಸ೦ತೋಷ ಕೇಳಬೇಡಾ.
ತನ್ನ ಮೊಸರನ್ನು ಯಾರೂ ಹುಳಿ ಅನ್ನುವುದಿಲ್ಲ.
ಸಂಸಾರಿ ಸಾವಾಸ ಮಾಡಿ ಸನ್ಯಾಸಿ ಕೆಟ್ಟ
ಕಾಲ್ಮುರುಕ ದೇವರಿಗೆ ಕೈಲಾಸವೇ
ತವಡು ತಿಂಬುವವ ಹೋದರೆ ಉಮ್ಮಿ ತಿಂಬುವವ ಬತ್ತಾನೆ
ದಡ್ಡ ಮನುಷ್ಯ ನೆಲಕ್ಕೆ ಭಾರ, ಅನ್ನಕ್ಕೆ ಖಾರ.
ಮರ ಕಡಿದು ಮೈಮೇಲೆ ಹಾಕಿಕೊಂಡ್ರಂತ
ತಾಯಿ ಕಂಡರೆ ತಲೆ ನೋವು
ಕಳ್ಳನಿಗೊಂದು ಪಿಳ್ಳೆ ನೆವ
ಕಾಣದಿರೋ ದೇವರಿಗಿಂತ ಕಾಣೋ ಭೂತಾನೇ ವಾಸಿ
ತಲೇ ಒಡೆದವನೂ ಸಮ ಲೇಪ ಹಚ್ಚಿದವನೂ ಸಮ
ಬೀಳು ಭೂಮಿಗೆ ಬೀಜ ದಂಡ
ಬಿಮ್ಮಗಿದ್ದಾಗ ಹಮ್ಮು, ಬಿಮ್ಮು ತಪ್ಪಿದಾಗ ದಮ್ಮು
ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿತಂತೆ
ಭಿಕಾರಿಯಾದವ ಕಾಶಿಗೆ ಹೋದರೂ, ಭಿಕ್ಷಾನ್ನವಲ್ಲದೆ ಪಕ್ವಾನ್ನ ಉಂಡಾನೇ?
ಹಲ್ಲಿದ್ದವನಿಗೆ ಕಡಲೆ ಇಲ್ಲ, ಕಡಲೆಯಿದ್ದವನಿಗೆ ಹಲ್ಲಿಲ್ಲ.
ಒಂದು ಹೊತ್ತು ಉಂಡವ ಯೋಗಿ ಎರಡು ಹೊತ್ತು ಉಂಡವ ಭೋಗಿ ಮೂರು ಹೊತ್ತು ಉಂಡವ ರೋಗಿ ನಾಲ್ಕು ಹೊತ್ತು ಉಂಡವ ಎತ್ತುಕೊಂಡು ಹೋಗಿ
ತಮ್ಮ ಕಲಹಕ್ಕೆ ಐವರು , ಪರರ ಕಲಹಕ್ಕೆ ನೂರಾ ಐವರು. (ಸುಳಿವು ಪಾಂಡವಕೌರವರು)
ತರುವವ ಮರೆತರೆ ಮೊರ ಏನು ಮಾಡೀತು
ಹೆತ್ತವರಿಗೆ ಅಂಬಲಿ ಬಿಡದಿದ್ದರೂ, ಹಂಬಲ ಬಿಡದಿದ್ದರೆ ಸಾಕು
ವಿನಾಶ ಕಾಲಕ್ಕೆ ವಿಪರೀತ ಬುದ್ಧಿ
ಹುಬ್ಬೆ ಮಳೇಲಿ ಹುಬ್ಬೆತ್ತಕ್ಕೂ ಆಗಲ್ಲ.
ಹಾದರಗಿತ್ತಿ ಗಂಡನ ನಂಬಳು
ಕೆಟ್ಟ ಮೇಲೆ ಬುದ್ಧಿ ಬಂತು.
ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬರಲ್ಲ.
ಸೀರೆ ಗಂಟು ಬಿಚ್ಚೋವಾಗ ದಾರದ ನಂಟು ಯಾರಿಗೆ ಬೇಕು?
ಮೇಲೆ ಬಿದ್ದು ಬಂದೋಳು ಮೂರು ಕಾಸಿಗೂ ಕಡೆ
ಉಂಡಿದ್ದು ಹೊಟ್ಟೆಗಾಗಿ, ಮಾಡಿದ್ದು ಬಟ್ಟೆಗಾಗಿ.
ಲೇ ಅನ್ನಲು ಅವಳೇ ಇಲ್ಲ ಮಗನ ಹೆಸರು ಮುದ್ದುರ೦ಗ.
ರಾಮೆಶ್ವರಕ್ಕೆ ಹೋದ್ರೂ ಶನೀಶ್ವರನ ಕಾಟ ತಪ್ಪಲಿಲ್ಲ
ಬನ್ನ ಪಟ್ಟುಣ್ಣೋ ಬಿಸಿ ಅನ್ನಕ್ಕಿಂತ ತಂಗುಳೇ ಲೇಸು
ಸಮಯಕ್ಕಾದ ಹುಲ್ಲು ಕಡ್ಡಿ ಸಹಸ್ರ ಹೊನ್ನು
ಊರಿಗಾಗದ ಗೌಡ, ಮೇಲೆರಗುವ ಗಿಡುಗ
ತಾಮ್ರದ ನಾಣ್ಯ ತಾಯಿ ಮಕ್ಕಳನ್ನ ಕೆಡಿಸ್ತು
ಇದೇನು ತೋಟದಪ್ಪನ ಛತ್ರಾನ?
ಶಂಖದಿಂದ ಬಿದ್ದರೆ ತೀರ್ಥ
ಎಲ್ಲರ ಹಲ್ಲೊಳಗೆ ನುರಿದು ಹೋಗೋದಕ್ಕಿಂತ ಒಣಗಿದ ಹುಲ್ಲೊಳಗೆ ಉರಿದು ಹೋಗೋದು ವಾಸಿ
ತಟ್ಟು ಇದ್ದರ‍ೇ ತಟಾಯಿಸಿ ನಡದಾನು
ಕೈಲಾಗದೋನು ಮೈ ಪರಚಿಕೊಂಡ
ಹೇಳೋರು ಹೆಡ್ಡರಾದರೆ ,ಕೇಳೋರು ಕಿವುಡರೇ?
ಬೆಂಗಳೂರಿಗೆ ಬಂದೋನೇ ಬಹದ್ದೂರ
ನುಡಿಯಿರದವನಿಗೆ ಇಲ್ಲವು ನಾಡೂ
ಹಾರುವಯ್ಯನಿಗೆ ಹರಕೆ ಕಟ್ಟಿದಕ್ಕೆ ಹಳೇ ಪರಕೇಲಿ ಹೋಡ್ದ ಹಾಗೆ
ಬೀದೀಲಿ ಹೋಗೋ ಮಾರೀನ ಮನೆಗೆ ಕರೆದಂತೆ
ಇಟ್ಟ ಶಾಪ ಕೊಟ್ಟವನಿಗೆ ತಟ್ಟೀತು
ಹೆತ್ತ ಅಮ್ಮನ್ನ ತಿನ್ನೋಳು ಅತ್ತೆಯಮ್ಮನ್ನ ಬಿಟ್ಟಾಳ
ಏಕಾದಶಿಯ ಮನೆಗೆ ಶಿವರಾತ್ರಿ ಬಂದ ಹಾಗೆ
ಹೆಣ್ಣು ಹಡೆದವರ ಮನೆ ನುಣ್ಣಗೆ ಗಂಡು ಹಡೆದವರ ಮನೆ ತಣ್ಣಗೆ
ತನ್ನ ತಾನರಿತರೆ ತಾನ್‍ಆದಾನು ತನ್ನ ತಾ ಮರೆತರೆ ತಾ ಹೋದಾನು
ಹಾರುವರ ಕೇರೀಲಿ ಹಬ್ಬ ಆದ್ರೆ ಮೂಳನಾಯಿಗೇನು ಓಡಾಟ
ಬೆಲ್ಲವಿಲ್ಲದಿದ್ದರೆ ಬೆಲ್ಲದಂಥ ಮಾತೂ ಇಲ್ಲವೇ?
ಹೊರೆ ಹೊತ್ತುಕೊಂಡು ಗ್ರಹಗತಿ ಕೇಳ್ದಂದೆ
ನೂರಾರು ರೋಗಿಗಳನ್ನು ಕೊಂದು ಒಬ್ಬ ವೈದ್ಯ ಆದಂತೆ.
ಹಿಟ್ಟೂ ಹಳಸಿತ್ತು ನಾಯಿಯೂ ಹಸಿದಿತ್ತು
ಈಸಿ ನೋಡು , ಇದ್ದು ಜೈಸಿ ನೋಡು
ತಾನಾಗಿ ಬೀಳುವ ಮರಕ್ಕೆ ಕೊಡಲಿ ಇಕ್ಕಿದ ಹಾಗೆ
ಹಾಲು ಕಾಯಿಸ್ಕೊಂಡು ನಾನಿದ್ದೆ ಹಲ್ಲು ಕಿರ‍್ಕೊಂಡು ನೀ ಬಂದೆ.
ನನ್ನ ಮಗ ಎಂಟು ವರ್ಷಕ್ಕೆ ದಂಟು ಎಂದ
ನೂರು ಜನಿವಾರ ಒಟ್ಟಿಗಿರಬಹುದು; ಮೂರು ಜಡೆ ಒಟ್ಟಿಗಿರುವುದಿಲ್ಲ
ಇದ್ದದ್ದನ್ನು ಇದ್ದಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ
ಹುಟ್ಟು ಗುಣ ಸುಟ್ಟರೂ ಹೊಗೊದಿಲ್ಲ
ಕೋತಿ ಕೈಯಲ್ಲಿ ಮಾಣಿಕ್ಯ ಕೊಟ್ಟ ಹಾಗೆ.
ಕಿಡಿ ಇಲ್ಲದೆ ಬೆಂಕಿಯಿಲ್ಲ ;ಕಾರಣ ಇಲ್ಲದೆ ಜಗಳವಿಲ್ಲ
(ಉಪ್ಪು) ಹಪ್ಪಳಕ್ಕೆ ಊರಿತು ; ಸಂಡಿಗೆಗೆ ಏರಿತು.
ನೀರಿಳಿಯದ ಗಂಟಲಲ್ಲಿ ಕಡುಬು ತುರುಕಿದಂತೆ
ವಿದ್ಯೆ ಬಲ್ಲವ ಇದ್ದಲ್ಲು ಸಲ್ಲುವ ಹೋಗಿದ್ದಲ್ಲು ಸಲ್ಲುವ
ಕಾರ್ಯವಾಸಿ ಕತ್ತೆ ಕಾಲು ಕಟ್ಟು
ಹಸಿದವರ ಮುಂದೆ ಭಾಷಣ ಮಾಡಿದ ಹಾಗೆ.
ತಿರುಕನ ಬಳಿಗೆ ತಿರುಕ ಹೋದರೆ ಮರುಕ ತಾ ಬರುವುದೇ?
ಹಾರದ ಕೋತಿಗೆ ಮುಪ್ಪಾಗ ಬೆಲ್ಲ ತಿನ್ನಿಸಿದರಂತೆ.
ಪಾಪ ಅಂದ್ರೆ ಕರ್ಮ ಬರ್ತದೆ
ಆಕಾಶಕ್ಕೆ ಏಣಿ ಹಾಕಿದ ಹಾಗೆ
ಹೆತ್ತವರು ಹೆಸರಿಕ್ಕ ಬೇಕು
ತಟಕಿನಿಂದ ತಟಪಟವಾಯಿತು
ಅನ್ನ ಇಕ್ಕಿ ಸಾಕು ಅನ್ನಿಸ ಬಹುದು, ದುಡ್ಡು ಕೊಟ್ಟು ಸಾಕು ಅನ್ನಿಸೋಕಾಗಲ್ಲ
ಕೋತಿ ತಾನು ಕೆಡೋದಲ್ದೆ ವನ ಎಲ್ಲ ಕೆಡಿಸಿತಂತೆ
ಹುಣಿಸೆ ಮುಪ್ಪಾದರೂ ಹುಳಿ ಮುಪ್ಪೆ ? ಆಕಳು ಕಪ್ಪಾದರೂ ಹಾಲು ಕಪ್ಪೆ ?
ತಳಿಗೆ ಚಂಬು ಹೋದ ಮೇಲೆ ಮಳಿಗೇ ಬಾಗಿಲು ಮುಚ್ಚಿದ ಹಾಗೆ
ಬೆಕ್ಕಿಗೆ ಚೆಲ್ಲಾಟ: ಇಲಿಗೆ ಪ್ರಾಣಸಂಕಟ
ಬುದ್ಧಿ ಉಳ್ಳವನಿಗೆ ಕರ್ಮ ತಿದ್ದಿ ಕೊಡುತಿತ್ತು
ಪ್ರತ್ಯಕ್ಷವಾಗಿ ಕ೦ಡರೂ ಪ್ರಮಾಣಿಸಿ ನೋಡು.
ಚೆಲ್ಲಿದ ಹಾಲಿಗೆ, ಒಡೆದ ಕನ್ನಡಿಗೆ ಎ೦ದೂ ಅಳಬೇಡ.
ಪರರ ಹಂಗಿಸಿ ಮಂಗ ಅನಿಸಿಕೊಂಡ
ತಗ್ಗಿದವ ಎಂದಿಗೂ ನುಗ್ಗಾಗ
ಸುಂಕದೋನ ಹತ್ರ ಸುಖದುಃಖ ಹೇಳಿಕೊಂಡ ಹಾಗೆ
ಇರಲಾರದೆ ಇರುವೆ ಬಿಟ್ಟುಕೊಂಡು
ಹೆಣ್ಣು ಉರಿಸಿದ ಮನೆಯ ಹೆಗ್ಗಂಬ ಉರಿಯಿತು
ಹಾಲಿದ್ದಾಗ ಹಬ್ಬ ;ನೀರಿದ್ದಾಗ ನೇಮ
ಓದೋದು ಕಾಶಿ ಖಂಡ, ತಿನ್ನೋದು ಮಶಿ ಕೆಂಡ
ಗುರುವಿಗೆ ತಿರುಮಂತ್ರ
ತಿರುಳು ತಿಂದರೂ ಮರುಳು ಹೋಗಲಿಲ್ಲ
ಆಡೋಣ ಬಾ ಕೆಡಿಸೋಣ ಬಾ
ಮಾಡಿದ್ದುಣ್ಣೋ ಮಹರಾಯ
ಕಂಕುಳಲ್ಲಿ ಮಗು ಇಟ್ಟುಕೊಂಡು ಊರೆಲ್ಲ ಹುಡುಕಿದರಂತೆ
ಹೊಟ್ಟೆ ತುಂಬಿದ ಮೇಲೆ ಕಜ್ಜಾಯವೂ ವಿಷ
ಹಳೆ ಮನೆಗೆ ಹೆಗ್ಗಣ ಸೇರಿಕೊಂಡಂಗೆ
ಆನೆ ಬರುವುದಕ್ಕು ಮುನ್ನ ಗಂಟೆ ಸದ್ದು
ಲಂಘನಮ್ ಪರಮೌಷಧಮ್
ಬಗ್ಗಿದವನಿಗೆ ಒಂದು ಗುದ್ದು ಜಾಸ್ತಿ
ಇದ್ದ ಊರ ಸುದ್ದಿ ಇದ್ದಲ್ಲಿ ತೆಗೆಯ ಬಾರದು, ಬೇವೂರ ಸುದ್ದಿ ಹೋದಲ್ಲಿ ತೆಗೆಯ ಬಾರದು
ಮುಲಾಜಿಗೆ ಬಸುರಾಗಿ ಹೇರೋಕೆ ತಾವಿಲ್ಲ
ಕಾಗೆಗೆ ಯಜಮಾನನ ಸ್ಥಾನ ಕೊಟ್ಟರೆ ಮನೆ ತುಂಬಾ ಪಿಷ್ಟ.
ಐದು ಬೆರಳು ಒ೦ದೇ ಸಮ ಇರುವುದಿಲ್ಲ.
ಸನ್ಯಾಸಿ ಬೆಕ್ಕು ಸಾಕಿದ ಹಾಗೆ
ತಾಸಿಗೊಂದು ಕೂಸು ಹೆತ್ತರೆ ಈಸೀಸು ಮುತ್ತು
ದೀಪಕ್ಕೆ ಎಣ್ಣೆಯ ಹುಯ್ಯ್ ಅಂತ ಸುರಿಯುತ್ತಾರೇ
ನಾಡೆಂದ್ರ ಕಾಡನ್ನ ಸುಡುವಾಗ ದೇವೇಂದ್ರ ಗಾಳೀನ್ನ ನೋಡೊಕೆ ಕಳಿಸಿದ
ಅಲ್ಪರ ಸಂಗ ಅಭಿಮಾನ ಭಂಗ
ಕೂರೆಗೆ ಹೆದರಿ ಸೀರೆ ಬಿಚ್ಚೆಸೆದರು
ಬೆರಳು ತೋರಿಸಿದರೆ ಅಂಗೈ ನುಂಗಿದಂತೆ.
ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ
ಅಮ್ಮನ ಮನಸ್ಸು ಬೆಲ್ಲದ ಹಾಗೆ, ಮಗಳ ಮನಸ್ಸು ಕಲ್ಲಿನ ಹಾಗೆ
ಕ೦ಡವರ ಮನೇಲಿ ನೋಡು ನನ್ನ ಕೈ ಧಾರಾಳವ!
ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂದರಂತೆ
ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ
ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊಂಡರಂತೆ
ಅತಿ ಆಸೆ ಗತಿ ಕೇಡು
ಆಳಿದ ದೊರೆ ಹುಸಿದರೆ ಅಲ್ಲಿಂದ ಹೇಳದೆ ಹೋಗಬೇಕು
ಕೋಳಿಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆರೆಯದೆ ಇರುವುದೇ?
ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಹೇಳಿದ ಹಾಗೆ.
ರಾಗಿಕಲ್ಲು ತಿರುಗುವಾಗ ರಾಜ್ಯವೆಲ್ಲಾ ನೆಂಟರು
ಗಾಣಿಗಿತ್ತಿ ಅಯ್ಯೋ ಅಂದರೆ ನೆತ್ತಿ ತಂಪಾದೀತೇ?
ಅತಿಆಸೆ ಗತಿ ಕೇಡು.
ಹುಟ್ಟು ಗುಣ ಸುಟ್ಟರೂ ಹೋಗಲ್ಲ
ಮುತ್ತು ಒಡೆದರೆ ಹೋಯ್ತು, ಮಾತು ಆಡಿದರೆ ಹೋಯ್ತು
ಕಣ್ಣಿಗೂ ಮೂಗಿಗೂ ಮೂರು ಗಾವುದ.
ಸತ್ಯಕ್ಕೆ ಸಾವಿಲ್ಲ; ಸುಳ್ಳಿಗೆ ಸುಖವಿಲ್ಲ
ಗಂಡ-ಹೆಂಡಿರ ಜಗಳ ತಿಂದು ಮಲುಗೊ ವರೆಗೆ
ಇಟ್ಟ ವಿಭೂತಿ ಪಟ್ಟದಂತೆ ಇಟ್ಟ ವಿಭೂತಿ ಅಳಿದರೆ ಚಟ್ಟ ಹತ್ತಿದಂತೆ
ಸ್ವರ್ಗವೂ ತಪ್ಪಿತು ದುರ್ಗವೂ ತಪ್ಪಿತು
ಹಾಲು ಕುಡಿದ ಮಕ್ಕಳೇ ಬದುಕಲಿಲ್ಲ ವಿಷ ಕುಡಿದ ಮಕ್ಕಳು ಬದುಕ್ಯಾರೆ
ಇಬ್ಬರ ನ್ಯಾಯ, ಮೂರನೇಯವನಿಗೆ ಆದಾಯ
ಉತ್ತರನ ಪೌರುಷ ಒಲೆ ಮುಂದೆ;ನಿನ್ನ ಪೌರುಷ ನನ್ನ ಮುಂದೆ
ಸಾವಿರ ಕೊಟ್ಟರೂ ಸವತಿ ಮನೆ ಬೇಡ
ಕೆಟ್ಟು ಪಟ್ಟಣ ಸೇರು ಇಟ್ಟು ಹಳ್ಳಿ ಸೇರು
ತಾಳದಲ್ಲಿ ಜಾಣನಾದರೆ ತಾಳಿಕೆ ಇದ್ದೀತೇ
ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ
ಹೊತ್ತು ಕಳೆದರೆ ಮತ್ತೆ ಬಾರದು
ನಾಳೆ ಎಂದವನಿಗೆ ಹಾಳು, ಇಂದೇ ಎಂದವನಿಗೆ ಬೀಳಾಗದು ಬಾಳು.
ಗಂಡಸು ಕೂತು ಕೆಟ್ಟ ;ಹೆಂಗಸು ತಿರುಗಿ ಕೆಟ್ಟಳು
ಇಲಿಯಾಗಿ ನೂರುದಿನ ಬಾಳೋದಕ್ಕಿಂತ ಹುಲಿಯಾಗಿ ಮೂರು ದಿನ ಬಾಳೋದು ಲೇಸು
ಸಿರಿತನ ಇರೂತನ ಹಿರಿತನ ಘನ
ರಾಜ ಇರೋತನಕ ರಾಣಿ ಭೋಗ
ಅಲ್ಪನಿಗೆ ಐಶ್ವರ್ಯ ಬ೦ದರೆ ಅರ್ಧರಾತ್ರೀಲಿ ಕೊಡೆ ಹಿಡಿದನ೦ತೆ.
ಅಂದು ಬಾ ಅಂದ್ರೆ ಮಿಂದು ಬಂದ
ಸಣ್ಣವರ ನೆರಳು ಉದ್ದವಾದಾಗ ಸೂರ್ಯನಿಗೂ ಮುಳುಗುವ ಕಾಲ
ಪರಿಸರ ಮಾಲಿನ್ಯ ವಿನಾಶಕ್ಕೆ ಕಾರಣ.
ಮಳೆ ಹುಯ್ದರೆ ಕೇಡಲ್ಲ, ಮಗ ಉ೦ಡರೆ ಕೇಡಲ್ಲ.
ಎಲ್ಲಾ ಜಾಣ; ತುಸ ಕೋಣ
ಸಿಟ್ಟು ಬಂದರೆ ಪಡಿ ಹಿಟ್ಟು
ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು
ಹಣ ಅಂದ್ರೆ ಹೆಣವೂ ಬಾಯಿ ಬಿಡ್ತದೆ
ಸಾವಿರ ಉಳಿ ಪೆಟ್ಟು,ಒಂದು ಚಿತ್ತಾರ
ತಾನು ತಿಂದದ್ದು ಮಣ್ಣು ಹೆರರಿಗೆ ಕೊಟ್ಟದ್ದು ಹೊನ್ನು
ಸಂತೆ ಕಟ್ಟೋಕು ಮೊದಲೇ ಸೇರಿದರು ಗಂಟು ಕಳ್ಳರು
ಐದು ಕುರುಡರು ಆನೆಯನ್ನು ಬಣ್ಣಿಸಿದ ಹಾಗೆ
ಉತ್ತರೆ ಹೊಲ ಚಂದ ಬಿತ್ತರೆ ಬೆಳೆ ಚಂದ
ಹೋದ ಬದುಕಿಗೆ ಹನ್ನೆರಡು ದೇವರು
ಸಜ್ಜನರ ಮಾತು ಸಿಹಿ, ದುರ್ಜನರ ತುತ್ತು ಕಹಿ.
ಚಾಪೆ ಕೆಳಗೆ ಒಬ್ಬ ತೂರಿದರೆ ಇನ್ನೊಬ್ಬ ರಂಗೋಲಿ ಕೆಳಗೆ ತೂರಿದ
ಕೂಳಿಗೆ ಮೂಲ ಭೂಮಿಗೆ ಭಾರ.
ಅರಿತೂ ಮಾಡಿದ ಪಾಪ ವಜ್ರಲೇಪ
ಕಯ್ಯಾರೆ ಮಾಡುವ ಧರ್ಮ ಲೇಸು
ಹತ್ತು ಮಕ್ಕಳ ತಾಯಾದರೂ ಸತ್ತ ಮಗನ್ನ ಮರೆಯೊದಿಲ್ಲ
ತರುಬು ಇದ್ದರೆ ಹರುಬು ನಿಂತೀತೇ
ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
ಗೌರಿ ಹಬ್ಬಕ್ಕೆ ಬಂದ ಗತಿಗೆಟ್ಟ ಅಳಿಯ
ಶರೀರಕ್ಕೆ ಸುಖ, ಹೊಟ್ಟೆಗೆ ದುಃಖ.
ನಾಯಿ ಬಾಲ ಡೊಂಕು
ಡಂಬು (=ಬೂಟಾಟಿಕೆ) ನನ್ನ ಕೇಳು, ಡಬ್ಬು ನನ್ನ ಹೆಂಡ್ರನ್ನ ಕೇಳು
ಕೀಲು ಸಣ್ಣದಾದರೂ ಗಾಲಿ ನಡೆಸುತ್ತದೆ
ಇಲಿ ಸಿಕ್ಕರೆ ಬೆಕ್ಕು ಆಗುವುದು ಹುಲಿ.
ಏನಾದರೇನು ತಾನು ತಾನಾಗದ ವರೆಗೆ
ಹಾಸಿಗೆ ಇದ್ದಷ್ಟು ಕಾಲು ಚಾಚು
ಕಳೆದ ದಿನಗಳು ಬರೆದ ಪುಟಗಳಂತೆ.
ಉಡೋಕೆ ಇಲ್ಲದವ ಮೈಲಿಗೆಗೆ ಹೇಸ, ಉಂಬೋಕೆ ಇಲ್ಲದವ ಎಂಜಲಿಗೆ ಹೇಸ
ಎಟ್ಟ್ (ಹಟಮಾರಿ) ಗಂಡಗೆ ಖೊಟ್ಟಿ ಹೆಂಡತಿ
ಗಂಜಿಯ ಕುಡಿದರೂ ಗಂಡನ ಮನೆ ಲೇಸು
ಒಂದು ಹೊತ್ತು ತಿನ್ನೋವ್ನು ಯೋಗಿ, ಎರಡು ಹೊತ್ತು ತಿನ್ನೋವ್ನು ಭೋಗಿ, ಮೂರು ಹೊತ್ತು ತಿನ್ನೋವ್ನು ರೋಗಿ, ನಾಕು ಹೊತ್ತು ತಿನ್ನೋವ್ನ ಎತ್ಕೊಂಡು ಹೋಗಿ
ಅಗ್ಗದ ಮಾಲು;ಮುಗ್ಗಿದ ಜೋಳ
ಬರಿಗೈಯವರ ಬಡಿವಾರ ಬಹಳ.
ಓಡಿ ಹೋಗೋ ಬಡ್ಡಿ ಹಾಲು ಹೆಪ್ಪಿಟ್ಟಾಳೆ?
ತನಗೇ ಇಲ್ಲದವ ಪರರಿಗೆ/ಮಂದಿಗೆ ಏನು ಕೊಟ್ಟಾನು
ಕೋಪದಲ್ಲಿ ಕುಯ್ದ ಮೂಗು ಶಾಂತಿಯಲ್ಲಿ ಬಂದೀತೇ
ವೇದ ಸುಳ್ಳಾದರೂ ಗಾದೆ ಸುಳ್ಳಾಗದು
ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು
ಕೈ ಕೆಸರಾದ್ರೆ ಬಾಯಿ ಮೊಸರು
ಮಳೇ ನೀರ ಬಿಟ್ಟು ಮಂಜಿನ ನೀರಿಗೆ ಕೈ ಒಡ್ಡಿದಂತೆ
ಬಂಧುಗಳಿಲ್ಲದಿರೊ ಬಡತನ ಎಂದಿಗೂ ಬೇಡ
ಮೂಕ ಪ್ರಾಣಿಯ ಕೊಲ್ಲದ್ದು ಜೀವಧರ್ಮ
ಪಡಿತಿಂದು ಗುಡಿಯಲ್ಲಿ ಉರುಳಾಡಿದ.
ಕೊಲ್ಲದಿರುವುದೇ ಧರ್ಮ ಬಲ್ಲವರಿಗೆ ಅದೇ ಸಮ್ಮತ
ಆರಿದೋಗರಕ್ಕೆ ಮೊಸರಿಕ್ಕಿ ಕಾಗೆಗೆ ಸೂರೆಕೊಟ್ಟರು
ಕೋಡಗ ಲಂಕೆಯ ಸುಡುವಾಗ ರಾವಣ ನಾಡ ಕಾಯ್ದಿದ್ದ
ಗಾಜಿನ ಮನೇಲಿರೋವ್ರು ಅಕ್ಕಪಕ್ಕದ ಮನೇ ಮೇಲೆ ಕಲ್ಲೆಸೆಯಬಾರದು
ತಮ್ಮ ಸಂಗಡ ತಂಗಿಯ ಗಂಡ ದೂರು ಹೇಳಿದರೆ ನಿನಗೇನಪ್ಪ
ಕೋರಿ ಒಲುಮೆ ತನಗೆ ಅನ್ನೋ ಮಾರನಿಗೆ ಮಾರಿ ಹಿಡಿಯಿತು.
ಮದುವೆ ಮಡಿನೋಡು ಮನೆ ಕಟ್ಟಿ ನೋಡು
ಭೋಗಿ ಭೋಗದಲ್ಲಿ ನೆರೆದು ರೋಗಿಯಾದ, ಯೋಗಿ ಯೋಗದಲ್ಲಿ ನೆರೆದು ಯೋಗವಾದ
ದೀನನ ಬೇಡಿ ಬಳಲಿದರೆ ಆತ ಏನು ಕೊಟ್ಟಾನು
ಮುಸುಕಿನೊಳಗೆ ಗುದ್ದಿಸಿಕೊಂಡಂತೆ ಕದ್ದು ತಿಂದ ಹಣ್ಣು,
ಬಿದ್ದರೂ ಮೀಸೆ ಮಣ್ಣಾಗಲಿಲ್ಲ
ತರತರವಾಗಿ ಹೇಳಿದ್ದು ಮರೆತರೆ ಮರಕ್ಕಿಂತಾ ಕಡೆ
ಮೂರ್ತಿ ಚಿಕ್ಕದಾದ್ರು ಕೀರ್ತಿ ದೊಡ್ಡದು
ಕಣ್ಣಿಗೆ ಒಪ್ಪವಿಲ್ಲದ ಹೆಣ್ಣು ಸಪ್ಪಗೆ ಕಂಡಳು
ಗಂಡನಿಗೆ ಹೊರಸು ಆಗದು , ಹೆಂಡತಿಗೆ ನೆಲ ಆಗದು!
ಕುಣಿಯಲಾರದವಳು ನೆಲ ಡೊಂಕು ಅಂದಳಂತೆ
ಬಾಳೆಂಬ ಬಂಧನದಲ್ಲಿ ಈಜಬೇಕು, ಸಂಸಾರ ಎಂಬ ಸಾಗರದಲ್ಲಿ ತೇಲಬೇಕು.
‍*ತರಗು ಲಡ್ಡಿಗೆ ಡೊಳ್ಳು ಗಣಪತಿಯೇ ಶ್ರೇಷ್ಠ
ತಲೆಗೆಲ್ಲಾ ಒಂದೇ ಮಂತ್ರವಲ್ಲ
ತಣ್ಣಗಿದ್ದರೆ ಮಣ್ಣಾದರೂ ಅಸಾಧ್ಯ
ಶೆಟ್ಟಿ ಬಿಟ್ಟಲ್ಲೆ ಪಟ್ಣ
ಕಾಮಾಲೆ ಕಣ್ಣಿನವನಿಗೆ ಲೋಕವೆಲ್ಲಾ ಹಳದಿಯಂತೆ
ಬೊಗಳುವ ನಾಯಿ ಕಚ್ಚುವುದಿಲ್ಲ.
ತಿಮರು (=ಕಡಿತ, ನವೆ) ತುರಿಸಿದರೆ ಅರಸಿನ ಹಾಗೆ
ಯಾರನ್ನ ನಂಬಿದರು ಆರೈದು ನಂಬಬೇಕು
ಯೋಗವಿದ್ದಷ್ಟು ಭೋಗ .
ಕೊಟ್ಟು ಕೆಟ್ಟವರಿಲ್ಲ, ತಿಂದು ಬದುಕಿದವರಿಲ್ಲ.
ಹೆಣ್ಣು ಚಂದ ಕಣ್ಣು ಕುಲ್ಡು ಅಂದಂಗೆ
ಕಾಲಿನದು ಕಾಲಿಗೆ; ತಲೆಯದು ತಲೆಗೆ
ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ.
ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ
ಉಂಬಾಗ ಉಡುವಾಗ ಊರೆಲ್ಲ ನೆಂಟರು
ಹಿಟ್ಟು ಹಳಸಿತ್ತು;ನಾಯಿ ಹಸಿದಿತ್ತು
ತಿಕ ಮಕ ಒಂಡೇ ತಿಪ್ಪಾಭಟ್ಟರಿಗೆ
ತಗಲುಗಾರನಿಗೆ ಬಗಲ ಮೇಲೆ ಜ್ಞಾನ
ಮಾಡಿದ ಪಾಪ ದಾನದಿಂದ ಹೋದೀತೆ
ಹೆಸರಿಗೆ ಹೊನ್ನ ಹೆಗ್ಗಡೆ, ಎಸರಿಗೆ ಅಕ್ಕಿ ಇಲ್ಲ
ಚಿಂತೆ ಮಾಡಿದರೆ ಸಂತೆ ಸಾಗೀತೆ?
ಇಕ್ಕೇರಿ ತನಕ ಬಳಗ, ಮಾನ ಮುಚ್ಚಲಿಕ್ಕೆ ಅರಿವೆ ಇಲ್ಲ
ಹಣವಿದ್ದ ಗಂಡನನ್ನು ಮದುವೆಯಾದರೂ ಋಣವಿದ್ದಷ್ಟೇ
ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ.
ಬೆಂಕಿಗೆ ಕರಗದ್ದು ಬಿಸಿಲಿಗೆ ಕರಗೀತೇ.
ರಾತ್ರಿ ಕಂಡ ಬಾವೀಲಿ ಹಗಲು ಬಿದ್ದಂಗೆ
ಸಾಯ್ತಿನಿ ಸಾಯ್ತಿನಿ ಅಂತ ಸಾವಿರ ಕೋಳಿ ತಿಂದನಂತೆ
ಉಂಡರೆ ಉಬ್ಬಸ , ಹಸಿದಿದ್ದರೆ ಸಂಕಟ(ನಾಜೂಕು ದೇಹಸ್ಥಿತಿ)
ಪ್ರಯತ್ನಕ್ಕೆ ಪರಮೇಶ್ವರನೂ ಸಹಾಯ ಮಾಡುವನು.
ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದಂತೆ
ಮೇಯುವುದಕ್ಕೆ ಮುಂದೆ ;ಮೀಯುವುದಕ್ಕೆ ಹಿಂದೆ
ಉಚ್ಚೆ ಕುಡಿದರೂ ತನ್ನಿಚ್ಚೇಲಿರಬೇಕು
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
ಬರೋಳನ್ನು ನೆಚ್ಚಿ ಇರೋಳನ್ನು ಬಿಟ್ಟ
ಹಂಗಿನರಮನೆಗಿಂತ ಕುಂದಣದ ಗುಡಿ ಲೇಸು
ಹುಲಿಗೆ ಹುಣ್ಣು ಎದ್ದ ಹಾಗೆ
ಕಂಚು ಕಡೆಯಲ್ಲ, ಹಂಚು ದ್ರವ್ಯವಲ್ಲ.
ಹಾಲಪ್ಪ ಅಂತ ಹೆಸರಿದ್ದರೂ ಮಜ್ಜಿಗೆಗೆ ಗತಿ ಇಲ್ಲ
ಹರುವಯ್ಯನ ಎಲೆ ಇಂಬ, ಒಕ್ಕಲಿಗನ ಮನೆ ಇಂಬ
ಬಂಟರ ಅಬ್ಬರ ಸೇವಿನ ಗೊಬ್ಬರ
ಮನೆಗೆ ಮಾರಿ, ಊರಿಗೆ ಉಪಕಾರಿ.
ಹಗೆಯೋನ ಕೊಲ್ಲಾಕೆ ಹಗಲೇನು ಇರುಳೇನು
ತನ್ನ ಅಕ್ಕನ ಅರಿಯದವಳು ನೆರೆಮನೆ ಬೊಮ್ಮಕ್ಕನ ಬಲ್ಲಳೇ?
ಶೀಲವಂತರ ಓಣೀಲಿ ಕೋಳಿ ಮಾಯ ಆದವಂತೆ
ಮಕ್ಕಳಿಲ್ಲದ ಮನೆಯಲ್ಲಿ ಅಜ್ಜ ಅಂಬೆಗಾಲಿಟ್ಟ
ಮಂದಾಳಿಗೊಂದು ಮುಂದಾಳು
ಸಾವಿರ ವರ್ಷ ಸಾಮು ಮಾಡಿ ಸಾಯೋ ಮುದುಕಿ ಸೊಂಟ ಮುರಿದ
ಹೇಳೋದು ಶಾಸ್ತ್ರ, ಹಾಕೋದು ಗಾಣ
ಅಂಕೆ ಇಲ್ಲದ ಚತುರೆ, ಲಗಾಮು ಇಲ್ಲದ ಕುದುರೆ
ಕೂಸು ಹುಟ್ಟುವ ಮುಂಚೆ ಕುಲಾವಿ ಹೋಲಿಸು
ಹರುವಯ್ಯನ ಎಲೆ ಇಂಬ, ಒಕ್ಕಲಿಗನ ಮನೆ ಇಂಬ ಗವುಜಿ ಗದ್ದಲ ಏನೂ ಇಲ್ಲ,
ಇದ್ದವರು ಇದ್ದಹಾಗೆ ಸಿದ್ಧಾ ದೇವಿಗೆ ಸಿಡಿಲು ಬಡೀತು
ಸುಳ್ಳನ ಮಾತು ಕೆಸರೊಳಗೆ ಮುಳ್ಳು ತುಳಿದಂತೆ
ಜನ ಮರುಳೋ ಜಾತ್ರೆ ಮರುಳೋ
ಉತ್ತುಬಿತ್ತಿದ ಭತ್ತವಾದರೂ ಮಳೆಯಿಲ್ಲದೆ ಮೊಳೆಯದು
ಚರ್ಮ ಹೋದರೂ ಪರವಾಗಿಲ್ಲ, ಕಾಸು ಹೋಗಬಾರದು ಎಂದಂತೆ.
ಇದ್ದದ್ದು ಇದ್ದ ಹಾಗೆ ಹೇಳಿದ್ರೆ, ಎದ್ದು ಬಂದು ಎದೆಗೆ ಒದ್ದನಂತೆ
ಹುಲಿಗಲ್ಲ, ಸಿಂಹಕ್ಕಲ್ಲ, ಮನೆಯ ಹೆಂಡತಿಯ ನೆರಳಿಗಂಜಿದ.
ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಲ್ಲಿ ಮಣ ಹಾಕಿದರ೦ತೆ.
ವಿಧಿ ಕಾಣದ ಎಡೆಗಳಿಲ್ಲ
ಲಾಭವಿಲ್ಲದ ವ್ಯಾಪಾರ ಕತ್ತೆ ಮೈ ಪರಚಿದಂಗೆ
ತನಗಿಲ್ಲದ್ದು ಎಲ್ಲಿದ್ದರೇನು
ತಾಗದೆ ಬಾಗದು ಬಿಸಿಯಾಗದೆ ಬೆಣ್ಣೆ ಕರಗದು
ಲಲನೆಯರ ಒಲುಮೆ ತೊಲಗಿದರೆ ಇಲ್ಲ
ಒಂಡಂಬಡಿಕೆ ಇಂದ ಆಗದು ದಡಂಬಡಿಕೆ ಇಂದ ಆದೀತೇ
ಗೆದ್ದವ ಸತ್ತ ಸೋತವ ಸತ್ತ
ಕಾಸಿಗೊಂದು,ಕೊಸರಿಗೆರಡು
ಅಜ್ಜಿಗೆ ಅರಿವೆಯ ಚಿಂತೆ, ಮಗಳಿಗೆ ಗಂಡನ ಚಿಂತೆ, ಮೊಮ್ಮಗಳಿಗೆ ಕಜ್ಜಾಯದ ಚಿಂತೆ
ಕೊಣನಿಗೆ ಕೊಸೆಯೋ ಸಂಕಟ, ಎಮ್ಮೆಗೆ ಈಯೋ ಸಂಕಟ
ಎರಡೂ ಕೈ ತಟ್ಟಿದರೆ ಸದ್ದು
ಗದ್ದೆ ಸುಟ್ಟರೂ ಹಾಳಾಗದು ಗಾದೆ.
ಸಾಲಗಾರನ ಹೆಂಡತಿ ಶೋಕಿಮಾಡಿದರೇನು?
ಕೇಡು ಬರೋ ಕಾಲಕ್ಕೆ ನಂಟೆಲ್ಲ ಹಗೆಯಾಯ್ತು
ತಪಸ್ಸಿಗೆಂತ ಹೋಗಿ ಕುಪ್ಪಸಾ ಕಳಕೊಂಡ
ದೊಡ್ಡ ಗೌಡನ ಮನೇಲಿ ದೊಡ್ಡ ಗುಡಾಣ ಎತ್ತಿದರೆ ಏನೂ ಇಲ್ಲ.
ಬಾಯಿದ್ದೋರು ಬರಗಾಲದಲ್ಲೂ ಬದುಕಿದರು
ಎರವಿನವರು ಎರವು ಕಸಗೊಂಡರೆ ಕೆರವಿನಂತಾಯಿತು
ಕಾಸಿದ್ರೆ ಕೈಲಾಸ
ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ, ದಕ್ಷಿಣೆ ಹಾಕಿದರೇಯ ತೀರ್ಥ ಸಿಗೋದು
ಹುಣ್ಣಿಮೆ ಬರುವ ತನಕ ಅಮಾಸೆ ನಿಲ್ಲದು, ಅಮಾಸೆ ಬರುವನಕ ಹುಣ್ಣಿಮೆ ನಿಲ್ಲದು
ಹೊಳೆಯುವುದೆಲ್ಲಾ ಚಿನ್ನವಲ್ಲ.
ಬಾಯಲ್ಲಿ ಬಸಪ್ಪ ಹೊಟ್ಟೆಯಲ್ಲಿ ವಿಷಪ್ಪ
ತಾನು ನೆಟ್ಟ ಬೀಳು (ಬಳ್ಳಿ) ತನ್ನ ಎದೆಗೆ ಹಬ್ಬಿತು
ಎತ್ತೆಗೆ ಜ್ವರ ಬ೦ದರೆ ಎಮ್ಮೆಗೆ ಬರೆ ಎಳೆದರ೦ತೆ.
ತನ್ನ ತಾ ತಿಳಿದು ತಾನು ತಾನಾದುದೆ ಉನ್ನತಿ
ಹೆಣ್ಣಿಗೆ ರಸಪೂರಿ ಹಣ್ಣಿಗೆ ಮನ ಸೋಲದವರಿಲ್ಲ
ಬೆಲ್ಲದ ಸಿಪಾಯಿ ಮಾಡಿ ಇರುವೆ ಹತ್ತರ ಕಳಿಸಿದ
ತಾಯಂತೆ ಮಕ್ಕಳು ನೂಲಂತೆ ಸ್ಯಾಲೆ
ಅಲ್ಪ ವಿದ್ಯಾ ಮಹಾಗರ್ವಿ
ಯಜಮಾನಿಲ್ಲದ ಮನೆ ಮೇಟಿ ಇಲ್ಲದ ಕಣ ಎರಡೂ ಒಂದೆ
ಓದಿ ಓದಿ ಮರುಳಾದ ಕೂಚು ಭಟ್ಟ
ಕತ್ತೆಗೇನು ಗೊತ್ತು ಕಸ್ತೂರಿ ವಾಸನೆ
ಶೆಟ್ಟಿ ಶೃಂಗಾರ ಆಗೋದ್ರಲ್ಲಿ ಪಟ್ಣ ಕೆಡ್ತು
ವ್ಯಾಪಾರಕ್ಕೆ ನಿಮಿಷ ಬೇಸಾಯಕ್ಕೆ ವರುಷ
ಹೊಳೆ ನೀರಿಗೆ ದೊಣೆನಾಯ್ಕನ ಅಪ್ಪಣೆ ಏಕೆ ?
ಒಬ್ಬನ ಗಡ್ಡಕ್ಕೆ ಬೆಂಕಿ ಹತ್ತಿದಾಗ, ಮತ್ತೊಬ್ಬ ಕೈ ಕಾಯಿಸಿದ.
ಬರ್ತಾ ಬರ್ತಾ ರಾಯರ ಕುದುರೆ ಕತ್ತೆಯಾಯ್ತು
ಅಯ್ಯೋ ಅಂದವರಿಗೆ ಆರು ತಿಂಗಳು ಆಯಸ್ಸು ಕಮ್ಮಿ
ಹೆತ್ತವರಿಗೆ ಹೆಗ್ಗಣ ಮುದ್ದು.
ಹೇಳೊದು ವೇದ ಹಾಕೊದು ಗಾಳ
ತತ್ವದಲ್ಲಿ ಸತ್ವ ಹುಡುಕು, ವ್ಯಥೆಯಲ್ಲಿ ಕಥೆ ಹುಡುಕು.
ಆನೆಗೆ ಚಡ್ಡಿ ಹೊಲಿಸಿದ ಹಾಗೆ
ದೇವರು ವರ ಕೊಟ್ಟರು ಪೂಜಾರಿ ಕೊಡಬೇಕಲ್ಲ.
ಹಾರುವರ ಮೋರೆಯಾದರೂ ನೀರಿನಲ್ಲಿ ತೊಳೆಯದಿದ್ದರೆ ನಾರದೆ ಇದ್ದೀತೆ.
ತುಂಬಿದ ಕೊಡ ತುಳುಕುವುದಿಲ್ಲ.
ಕಲ್ತ ಕೈ ಕದ್ದಲ್ಲದೆ ಬಿಡದು
ಸಿಡಿಲು ಬಡಿದರೆ ಅಂಗೈಲಿ ಹಿಡಿದ ಕೊಡೆ ಕಾಪಾಡಿತೇ
ಎಡವಿದ ಕಾಲೇ ಎಡವುದು ಹೆಚ್ಚು.
ನಾಯಿ ಮೊಲೇಲಿ ಖಂಡುಗ ಹಾಲಿದ್ದರೇನು, ದೇವರಿಗಿಲ್ಲ ದಿಂಡರಿಗಿಲ್ಲ
ಉಪಕಾರಕ್ಕೋಗಿ ಉಪದ್ರ ಬಂತು
ನಿದ್ದೆ ಗೈಯೋನ ಹೊತ್ತು ನುಂಗ್ತು
ಆನೆಗೂ ಅಡಿ ತಪ್ಪೀತು
ತಳವಾರನಿಗೆ ಪಟ್ಟ ಕಟ್ಟಿದರೆ ಕುಳವಾರು ಹೋದೀತೋ?
ಒಪ್ಪೊತ್ತು ಕೂಳು ತಪ್ಪಿ ಕಣ್ಣು ಕಾಣಾಕ್ಕಿಲ್ಲ ಕಿವಿ ಕೇಳಾಕ್ಕಿಲ್ಲ
ಕೊಟ್ಟೋನು ಕೋಡಂಗಿ, ಇಸ್ಕೊಂಡೋನು ಈರಭದ್ರ
ಮೆತ್ತಗಿದ್ರೆ ತುಳೀತಾರೆ, ಜೋರಾಗಿದ್ರೆ ಹೆದ್ರತಾರೆ.
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ಹೂವಿನ ಜೊತೆ ದಾರ ಮುಡಿಯೇರಿತು
ನೂಲಿನಂತೆ ಸೀರೆ; ತಾಯಿಯಂತೆ ಮಗಳು
ವಿವಿಧ ರೋಗಗಳಿಗೆ ಮದ್ದಿವೆ, ಹೊಟ್ಟೆ ಉರಿಗೆ ಮದ್ದಿಲ್ಲ.
ಮಾಡಿದ ಕರ್ಮ ಬೆನ್ನಾಡಿ ಬಂತು
ಸಾಯೋ ತನಕ ಶನಿ ಕಾಟ ಆದ್ರೆ ಬಾಳೋದು ಯಾವಾಗ
ಉಟ್ಟರೆ ತೊಟ್ಟರೆ ಪುಟ್ಟಕ್ಕ ಚೆನ್ನ
ಹೆಡ್ಡಾಳಾದ್ರೂ ದೊಡ್ಡಾಳು ಮೇಲು
ತನ್ನ ತಾನರಿತರೆ ತನ್ನರಿವೆ ಗುರು
ತರಗು ತಿಂಬವನಿಗೆ ಒರಗೊಂದು ಕೇಡು
ಕಣ್ಣರಿಯದಿದ್ದರೂ ಕರುಳರಿಯುತ್ತದೆ
ಹದ ಬಂದಾಗ ಅರಗಬೇಕು ಬೆದೆ ಬಂದಾಗ ಬಿತ್ತಬೇಕು
ಸಾವಿರ ಸಲ ಗೋವಿಂದ ಅಂದರು, ಒಬ್ಬ ದಾಸಯ್ಯನಿಗೆ ಭಿಕ್ಷೆ ನೀಡಲಿಲ್ಲ
ಒಲ್ಲದ ಗಂಡಗೆ ಬೆಣ್ಣೇಲಿ ಕಲ್ಲು
ಹಿರಿಯಕ್ಕನ ಚಾಳಿ ಮನೆಮಂದಿಗೆಲ್ಲ
ಉಳಿ ಸಣ್ಣದಾದರು ಕುಳಿ ತೋಡದೆ ಬಿಡಲಾರದು.
ಯಾರಿಗೂ ತೋರದಂತೆ ದೈವ ತನ್ನೊಳಗೆ ಸಾರಿಹುದು ನಿಜವ
ಭರಣಿ ಮಳೆ ಧರಣಿ ಬೆಳೆ.
ಒಗ್ಗಿದರೆ ಮನೆಯಾದರೇನು, ಸ್ಮಶಾನವಾದರೇನು?
ಆಕಳು ಕಪ್ಪಾದರೆ ಹಾಲು ಕಪ್ಪೆ.
ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ
ಸೊಸೆಗೆ ಮನೆವಾಸ, ಅತ್ತೆಗೆ ಪರವಾಸ
ಆವು ಕಪ್ಪಾದ್ರೆ ಹಾಲು ಕಪ್ಪೇನು
ಕೇಡು ಬರೋ ಕಾಲಕ್ಕೆ ಬುದ್ಧಿಗೇಡು
ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು
ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ
ಮಾತಿಗೊಂದು ಮಾತು ಬಂತು ವಿಧಿ ಬಂದು ಆತುಕೊಣ್ತು
ಬಾಯಿ ಬಿಟ್ಟರೆ ಬಣ್ಣಗೇಡು.
ಸಿರಿ ಬಂದ ಕಾಲದಲಿ ಕರದಲಿ ಧರ್ಮ ಬೇಕು
ಅಬದ್ಧಕ್ಕೆ ಅಪ್ಪಣೆಯೇ ಅಂದ್ರೆ ಬಾಯಿಗೆ ಬಂದಷ್ಟು
ಮಳೆ ಹುಯ್ದರೆ ಕೇಡಲ್ಲ; ಮಗ ಉಂಡರೆ ಕೇಡಲ್ಲ
ಬೀದೀಲಿ ಹೊಗೊ ಮಾರೀನ ಮನೆಗೆ ಕರೆದಂಗೆ
ತಿರಿತಿರಿಗಿ ಗೋಕರ್ಣಕ್ಕೆ ಹೋಗಿ ತುರಕನಿಂದ ದೆಬ್ಬೆ ತಿಂದ
ಬಾಳುವ ಮನೆಗೊಂದು ಬೊಗಳುವನಾಯಿ. (ಅತ್ತೆ).
ಕೈ ಕೆಸರಾದರೆ ಬಾಯಿ ಮೊಸರು.
ಬಿದ್ದಿನ (=ಅತಿಥಿ, ನೆಂಟ) ಬಂದು ಹಾಳು ಮನೇ ಯಜಮಾನ (ಮನೆಯೊಡೆಯ) ಕುಂತು ಹಾಳು
ಹೊತ್ತು ಮೀರಿದ ಮಾತು ತನಗೇ ಕುತ್ತು ತಂತು
ಮರಗಿಣಿಯ ಕೂಡೆ ಆಡಿ ಅರಗಿಣಿ ಕೆಟ್ಟಿತು
ಸಾವಿರ ಕುದರೆ ಸರದಾರ ಮನೇ ಹೆಣ್ತಿಗೆ ಪಿಂಜಾರ
ಕೊಂಕಣ ಸುತ್ತಿ ಮೈಲಾರಕ್ಕೆ ಬಂದ ಹಾಗೆ
ಸದಾಚಾರಣೆಯ ಉದಾಹರಣೆಯೇ ಉತ್ತಮವಾದ ಉಪದೇಶ.
ರಸ ಬೆಳೆದು ಕಸ ತಿನ್ನಬೇಡ, ಹಸ ಕಟ್ಟಿ ಮೊಸರಿಗೆ ಪರದಾಡಬೇಡ
ಅಕ್ಕಸಾಲಿ, ಅಕ್ಕನ ಚಿನ್ನವನ್ನೂ ಬಿಡುವುದಿಲ್ಲ.
ಸಾಯೋ ಮುಂದೆ ಸಕ್ಕರೆ ತುಪ್ಪ ತಿನಿಸಿದರಂತೆ
ನೆಂಟರನ್ನು ಲಕ್ಷಿಸದಿರಲು, ಸ್ನೇಹಿತರನ್ನು ಅಲಕ್ಷಿಸದಿರು.
ಸುಡುವ ಮನೆಯ ಗಳ ಹಿರಿದಂತೆ
ಸೋದರ ಮಾವನ ಚಾಳು ತುಂಡಪುಂಡರ ಪಾಲು
ಬಡವರ ಮಾತು ನುಡಿನುಡಿಗೂ ಬೇಸರ
ಯಂಕ, ಸೀನ, ನೊಣ ಅಂತ ಮನೇಲಿ ಮೂರೇ ಜನ ಕಂಡೋರ ಮನೆ ರೊಟ್ಟಿಗೆ ಗಿಣ್ಣು ಹಾಲು ಕಾಯಿಸಿದರಂತೆ
ನಾಯಿ ಹೆಸರು’ಸಂಪಿಗೆ’ಅಂತ
ಲಾಭ ನೋಡಿ ಬಾಳೆ ಹಣ್ಣು ತಿಂದಂತೆ.
ತಾನು ಕಳ್ಳ ,ಪರರ ನಂಬ
ನಿಷ್ಠೆ ಇದ್ದಲ್ಲಿ ದೈವ ಕಲ್ಲುಗುಂಡೊಳಗೆ ಅಡಗಿತ್ತು
ಹೆಸರು ಸರಸ್ವತಿ, ಎಡಗೈ ಹೆಬ್ಬೆಟ್ಟಿನ ಸಹಿ.
ಮುದ ಹರಡುವ ಕಲೆ ಋಷಿ ಬಲ್ಲ.
ಕೊಟ್ಟಿದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
ಉಣ್ಣುವಾಗ ಎರಡು ತುತ್ತು ಕಡಿಮೆ ಉಣ್ಣು.
ಗುಡ್ಡ ಕಡಿದು ಹಳ್ಳ ತುಂಬಿಸಿ ನೆಲ ಸಮ ಮಾಡಿದ ಹಾಗೆ
ತಕ್ಕಡಿ ಬಲ್ಲದೇ ಮನೆಯ ಬಡತನವ
ಮಿಂದು ಮೈಲಿಗೆ ಉಡೊದಾದ್ರೆ ಜಳಕದ ದಂದುಗವೇಕೆ
ಲಾಲಿಸಿದರೆ ಮಕ್ಕಳು ; ಪೂಜಿಸಿದರೆ ದೇವರು
ಸವತಿ ಸಣ್ಣವಳಲ್ಲ ದಾಯಾದಿ ಚಿಕ್ಕವನಲ್ಲ
ಉತ್ತಮನು ಎತ್ತ ಹೋದರೂ ಶುಭವೇ
ಮಾನ ಮುಚ್ಚಲಿಕ್ಕೆ ಅರಿವೆ ಇಲ್ಲ ಹೆಸರಿಗೆ ಹೊನ್ನ ಹೆಗ್ಗಡೆ,ಎಸರಿಗೆ ಅಕ್ಕಿ ಇಲ್ಲ
ತಾನು ಸಾಯುವ ತನಕ ತನ್ನನ್ನು ಜೋಪಾನ ಮಾಡಿದರೆ ತತ್ತಿಯಷ್ಟು ಬ೦ಗಾರ ಕೊಟ್ಟೇನು ಅನ್ನುತ್ತ೦ತೆ ಕೋಳಿ.
ಚೋಳದೇಶದ ಚೇಳಿಗಿಂತ ಹೆಚ್ಚು
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು
ಕತ್ತೆಯಂಥ ಅತ್ತೆ ಬೇಕು ಮುತ್ತಿನಂಥ ಗಂಡ ಬೇಕು
ಹತ್ತು ಕಟ್ಟೋ ಕಡೆ ಒಂದು ಮುತ್ತು ಕಟ್ಟು.
ತನ್ನ ಓಣೀಲಿ ನಾಯಿಯೇ ಸಿಂಹ
ಭಂಗಿ ರಸ ನೆತ್ತಿಗೇರಿ ಬಿಂಗಿಯಂತಾದ ರಸವಳ್ಳಿ
ಕೊಟ್ಟ ಹೆಣ್ಣು ಕುಲದಿಂದ ಹೊರಗೆ
ಬೀಜಕ್ಕೆ ತಕ್ಕ ಫಲ.
ಮುಕ್ಕು ಸರಿದರೆ ಒತ್ತಣ್ಣ ಒತ್ತಿದರೆ ಸರಿಯಣ್ಣ
ತಪ್ಪಿದವನಿಗೆ ಒಪ್ಪು ಇಲ್ಲ
ಮೊಲ ಎಬ್ಬಿಸಿ …ಕ್ಕೆ ಕೂತರು
ಇದ್ದಿದ್ದು ಇದ್ದ ಹಾಗೆ ಹೇಳಿದ್ರೆ ಎದ್ದು ಬ೦ದು ಎದೆಗೆ ಒದ್ದನ೦ತೆ.
ತಾಸಿನ ಬಟ್ಟಲು ನೀರ ಕುಡಿದರೆ ತಾಸಿಗೆ ಕೊಡತೀ ಪೆಟ್ಟು
ಉಸ್ ಎಂದರೆ ಉಸಳಿ ಬೇಡಿದ್ದನಂತೆ
ನಿನ್ನ ಬಾಯಾಗೆ ಹುಳ ಬೀಳ
ತಳಾ ಬಿಟ್ಟು ಬಂಡಿ ಹಾರದು
ಪಾಪಿ ಸಮುದ್ರ ಹೊಕ್ಕರೂ ಮೊಳಕಾಲುದ್ದ ನೀರು
ಅಕ್ಕ ಬರಬೇಕು ಅಕ್ಕಿ ಮುಗೀಬಾರದು
ಹುಟ್ಟಿದವಗೆ ಸಾವು ತಪ್ಪದು
ಆಸೆಗೆ ತಕ್ಕ ಪರಿಶ್ರಮ ಬೇಕು.
ಬೆಳ್ಳಯ್ಯ ಕಾಕಾ ಅರಿವಯ್ಯ ಮೂಕ
ಗಾಳಿ ಗುದ್ದಿ ಮೈ ಕೈ ನೋಯಿಸಿಕೊಂಡಂತೆ
ತಟ್ಟನೆ ಆಡಿದರೆ ಕೊಟ್ಟಷ್ಟು ಫಲ
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?
ಮನೆಗೆ ಮಾರಿ ಊರಿಗೆ ಉಪಕಾರಿ.
ಮಂಗ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಹಾಗಾಯಿತು.
ಗೆದ್ದೆತ್ತಿನ ಬಾಲ ಹಿಡಿದ ಹಾಗೆ
ಎತ್ತು ಈಯಿತು ಅಂದರೆ ಕೊಟ್ಟಿಗೆಗೆ ಕಟ್ಟು ಅಂದರಂತೆ
ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?
ಮಾತು ಆಡಿದರೆ ಮುತ್ತಿನ ಹಾರದಂತಿರಬೇಕು.
ಕಣ್ಣು ಕಟ್ಟಿ ಕಾಡಲ್ಲಿ ಬಿಟ್ಟ ಹಾಗೆ
ಏತಿ ಅಂದರೆ ಪ್ರೇತಿ
ನಡತೆ ಕಲಿಯೋದು ಏರುಬಂಡೆ ನಡತೆ ಕೆಡೋದು ಜಾರುಬಂಡೆ
ಹಾಲಿಗಿಂತ ಕೆನೆ ರುಚಿ
ಯಾರೂ ಇಲ್ಲದ ಮನೆಗೆ ನಾನು ಜೋಗಪ್ಪ ಅಂದ
ಹಾಡ್ತಾ ಹಾಡ್ತಾ ರಾಗ , ನರಳ್ತಾ ನರಳ್ತಾ ರೋಗ
ಒಂದೊಂದು ಕಾಲಕ್ಕೆ ಒಂದೊಂದು ಪರಿ
ಹೋಗುವುದು ಮೂಡಿದ ಹೊತ್ತು, ಹೋಗೋದಿಲ್ಲ ಆಡಿದ ಮಾತು.
ಮಂತ್ರಕ್ಕಿಂತ ಉಗುಳೇ ಜಾಸ್ತಿ
ಹಣ್ಣೆಲೆ ಉದುರುವಾಗ ಚಿಗುರೆಲೆ ನಗುತಿತ್ತು
ಅಳಿಯ ಅಲ್ಲ,ಮಗಳ ಗಂಡ
ಹುಚ್ಚುಮುಂಡೆ ಮದುವೇಲಿ ಉಂಡವನೇ ಜಾಣ
ಹೆಂಡತಿಯಿಲ್ಲದ ಮನೆ ದೇವರಿಲ್ಲದ ಗುಡಿ
ಹಗೆಯೋನ ಕೊಲ್ಲಾಕೆ ಹಗಲೇನು ಇರುಳೇನು
ಹ೦ಪೆಗೆ ಹೋಗದಿದ್ದರೆ ಸ೦ಪಿಗೆ ನೋಡಲಿಲ್ಲವೇ?

  ಧನುರ್ಮಾಸದಲ್ಲಿ ವಿಷ್ಣುವಿನ ಆರಾಧನೆಯನ್ನು ಹೀಗೆ ಮಾಡಿದರೆ ಶ್ರೇಷ್ಠ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೨ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೩ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೪ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೫ ಕ್ಕೆ ಇಲ್ಲಿ ಕ್ಲಿಕ್ ಮಾಡಿ

  ಸಾವಿರಾರು ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ - ೧೧

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೬ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೭ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೮ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೯ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧೦ ಕ್ಕೆ ಇಲ್ಲಿ ಕ್ಲಿಕ್ ಮಾಡಿ

  ಜನಪ್ರಿಯ ಕನ್ನಡ ಗಾದೆಗಳ ಸಂಗ್ರಹ - ಭಾಗ ೧೨

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧೧ ಕ್ಕೆ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

Translate »