ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಪ್ರಾರ್ಥನೆ ಪೂಜೆ ನಂಬಿದವರಿಗೆ ದೇವರಿದ್ದಾನೆ ಕಥೆ

ಪ್ರಾರ್ಥನೆ ಪೂಜೆ ನಂಬಿದವರಿಗೆ ದೇವರಿದ್ದಾನೆ,ಎಂಬುದಕ್ಕೆ ಸಾಕ್ಷಿಯಾಗುವ ಸ್ವಾರಸ್ಯಕರ ಪ್ರಸಂಗವೊಂದು ಇಲ್ಲಿದೆ…

“ಪ್ರಾರ್ಥನೆ ಪೂಜೆ ನಂಬಿದವರಿಗೆ ದೇವರಿದ್ದಾನೆ,ಪಾಲಿಸು ತ್ತಾನೆ, ರಕ್ಷಿಸುತ್ತಾನೆ, ಸಹಕರಿಸುತ್ತಾನೆ” ಎಂಬುದಕ್ಕೆ ಸಾಕ್ಷಿಯಾಗುವ ಸ್ವಾರಸ್ಯಕರ ಪ್ರಸಂಗವೊಂದು ಇಲ್ಲಿದೆ…

ಒಂದು ನಗರದಲ್ಲಿ ಔಷಧ ಅಂಗಡಿ ಹೊಂದಿದ್ದ ವ್ಯಕ್ತಿಯೊಬ್ಬ ದೇವರನ್ನು ನಂಬದ ಪರಮ ನಾಸ್ತಿಕನಾಗಿದ್ದ. ಆದರೆ ಜನ ಸೇವೆಯೆಂಬ ಕಾಯಕದಿಂದ ಆಸುಪಾಸಿನವರಿಗೆಲ್ಲ ಅಚ್ಚು ಮೆಚ್ಚಿನವನಾಗಿದ್ದ. ಆತನ ಮನೆಯವರೆಲ್ಲ ಆಸ್ತಿಕರಾಗಿ ದ್ದರು. ದೇವಸ್ಥಾನ, ದೇವರು, ಪ್ರಾರ್ಥನೆ ಇಂತಹ ವಿಚಾರ ದಲ್ಲಿ ನಂಬಿಕೆ ಇದ್ದ ಮನೆಮಂದಿಯೆಲ್ಲ ಈತನನ್ನು ಪ್ರಾರ್ಥಿಸುವಂತೆ ಒತ್ತಾಯಿಸುತ್ತಿದ್ದರೂ ನಾಸ್ತಿಕನಾಗಿಯೇ ಉಳಿದಿದ್ದ.

ಒಂದು ದಿನ ರಾತ್ರಿ ಜೋರಾಗಿ ಮಳೆಸುರಿಯಲಾರಂಭಿಸಿ ದಾಗ ವಿದ್ಯುತ್ ಕಡಿತವಾಯಿತು. ಆ ವೇಳೆಯಲ್ಲಿ ಮಳೆ ಯಲ್ಲಿ ತೋಯ್ದು ಹೋಗಿದ್ದ ಬಾಲಕನೊಬ್ಬ ಓಡೋಡಿ ಬಂದು ಅನಾರೋಗ್ಯ ಪೀಡಿತಳಾಗಿರುವ ತನ್ನ ತಾಯಿಗೆ ತುರ್ತಾಗಿ ಔಷಧ ಕೊಡುವಂತೆ ಕೋರಿ ಔಷಧ ಚೀಟಿಯನ್ನು ಕೊಟ್ಟ. ಅಂಗಡಿ ಮಾಲೀಕ ಒಲ್ಲದ ಮನಸ್ಸಿನಿಂದಲೇ ಟಾರ್ಚ್ ಬೆಳಕಿನಲ್ಲಿ ತಡಕಾಡಿ ಔಷಧ ಕೊಟ್ಟು ಕಳಿಸಿದ.

  ಮಂತ್ರಾಲಯದ ಪಂಚಮುಖಿ ಆಂಜನೇಯ ದೇವಸ್ಥಾನ..!

ಕೊಂಚ ಹೊತ್ತಲ್ಲಿ ಮಳೆ ನಿಂತು, ವಿದ್ಯುತ್ ದೀಪಗಳು ಬೆಳಗಿದವು. ಅಷ್ಟರಲ್ಲಿ ಅಂಗಡಿ ಮಾಲೀಕ, ತಾನು ಕತ್ತಲಲ್ಲಿ ಬಾಲಕನಿಗೆ ಕೊಟ್ಟ ಔಷಧಗಳತ್ತ ಗಮನ ಹರಿಸಿ ಹೌಹಾರಿದ. ಅದು ಮನುಷ್ಯರು ಸೇವಿಸುವ ಔಷಧವಾಗಿರದೆ ಕ್ರಿಮಿ ನಾಶಕದ ಬಾಟಲಿಯಾಗಿತ್ತು. ತನ್ನಿಂದ ಅಮಾಯಕ ಜೀವ ವೊಂದು ಬಲಿಯಾಗುತ್ತದಲ್ಲ ಎಂಬ ಪಾಪಪ್ರಜ್ಞೆಯೂˌ ಜೊತೆಗೆ ಆ ಬಾಲಕ ಅನಾಥನಾಗುತ್ತಾನಲ್ಲ, ಎಂಬ ಅಪರಾಧ ಪ್ರಜ್ಞೆಯೂ ಕಾಡಿತು. ಏನು ಮಾಡಬೇಕೆಂಬುದನ ರಿಯದೆ ಈ ದುರಂತವನ್ನು ಹೇಗೆ ತಪ್ಪಿಸಲಿ ಎಂದು ಯೋಚಿಸುತ್ತಾನೆ.

ಆಗ ಆತನಿಗೆ ಗೋಡೆಯಲ್ಲಿ ತೂಗುಹಾಕಿದ್ದ ದೇವರ ಚಿತ್ರ ಪಟವೊಂದು ಕಣ್ಣಿಗೆ ಬಿತ್ತು. ಬೇಡವೆಂದರೂ ಒತ್ತಾಯ ದಿಂದ ಆತನ ತಂದೆ ಅದನ್ನಲ್ಲಿ ತೂಗು ಹಾಕಿದ್ದರು. “ಯಾವುದೇ ಸಂದರ್ಭದಲ್ಲಿ ಪರಿಸ್ಥಿತಿ ನಿನ್ನ ಕೈಮೀರಿ ಹೋದಾಗ, ಅಸಹಾಯ ಸ್ಥಿತಿಯಲ್ಲಿದ್ದಾಗಲಾದರೂ ಈ ಚಿತ್ರ ಪಟಕ್ಕೆ ಕೈಮುಗಿದು ಮನಃಪೂರ್ವಕವಾಗಿ ಪ್ರಾರ್ಥಿಸು, ದಾರಿಯೊಂದು ಗೋಚರವಾಗುತ್ತದೆ” ಎಂದು ಅಪ್ಪ ಹೇಳಿದ್ದ ಮಾತು ಆ ಕ್ಷಣಕ್ಕೆ ನೆನಪಿಗೆ ಬಂತು. ಎಂದೂ ದೇವರಿಗೆ ಕೈಮುಗಿಯದಿದ್ದ ಆತ ಮೊದಲ ಬಾರಿಗೆ ಕೈಮುಗಿದು ಪ್ರಾರ್ಥನೆ ಸಲ್ಲಿಸಿದ.

  ಭಕ್ತ ಶಿರೋಮಣಿ ಸಂಕಟಮೋಚನ ಹನುಮಂತನ ವಿವಿಧ ಗುಣವೈಶಿಷ್ಟ್ಯಗಳು !

ಕೆಲವೇ ಕ್ಷಣಗಳಲ್ಲಿ ಪವಾಡವೋ ಎಂಬಂತೆ ಔಷಧ ತೆಗೆದು ಕೊಂಡು ಹೋಗಿದ್ದ ಬಾಲಕ ಏದುಸಿರು ಬಿಡುತ್ತ ಓಡೋಡಿ ಅಂಗಡಿಗೆ ಬಂದು ‘ಅಂಕಲ್ ಜೋರುಮಳೆಯಲ್ಲಿ ನಾನು ಓಡೋಡಿ ಹೋಗುತ್ತಿದ್ದಾಗ ನೀವು ಕೊಟ್ಟಿದ್ದ ಔಷಧ ಬಾಟಲಿ ಕೈಜಾರಿ ಕೆಳಗೆ ಬಿದ್ದು ಒಡೆದು ಹೋಯಿತು, ನನಗೆ ಇನ್ನೊಂದು ಔಷಧ ಬಾಟಲಿ ಕೊಡಿ, ಆದರೆ ನನ್ನಲ್ಲೀಗ ಕೊಡಲು ಹಣವಿಲ್ಲ’ ಎಂದು ಗಾಬರಿಯಿಂದ ಒಂದೇ ಉಸಿರಿಗೆ ಹೇಳಿ ಕಣ್ಣೀರು ಹಾಕಿದ.

ಆಗ ಅಂಗಡಿಯವನು ಆ ಬಾಲಕನನ್ನು ತಬ್ಬಿಕೊಂಡು, ಆತನಿಗೆ ಬೇಕಾದ ಔಷಧದ ಜೊತೆಗೆ ಕೊಂಚ ಹಣವನ್ನೂ ಕೊಟ್ಟು ಕಳಿಸಿದ. ನಾಸ್ತಿಕನಾಗಿದ್ದರೂ ಪರಿಶುದ್ಧ ಮನಸ್ಸಿನಿಂದ ಆತ ಮೊದಲ ಬಾರಿಗೆ ದೇವರಲ್ಲಿ ಮೊರೆ ಇಟ್ಟು ಮಾಡಿದ ಪ್ರಾರ್ಥನೆ ಕೈಗೂಡಿತ್ತು. ಮನುಜ ಶುದ್ಧ ಭಕ್ತಿಯ ಮೂಲಕ ಮೋಕ್ಷವನ್ನು ಪಡೆಯಬಹುದು. ಸರ್ವಶಕ್ತನಾದ ಭಗವಂತನಲ್ಲಿ ಅನುದಿನ-ಅನುಕ್ಷಣ ಪ್ರಾರ್ಥನೆ ಸಲ್ಲಿಸುತ್ತಿರಬೇಕು. ನಿಷ್ಕಲ್ಮಶ ಮನದಿಂದ ಪ್ರಾರ್ಥನೆ ಸಲ್ಲಿಸಿದಾಗ ಅಸಾಧ್ಯವೂ ಸಾಧ್ಯವಾಗುತ್ತದೆ…..🙏

  ಬಹುಶಃ - ಅಂತ್ಯವಿಲ್ಲದ ಕಥೆ - ಈ ಜೆನ್ ಕಥೆ

Leave a Reply

Your email address will not be published. Required fields are marked *

Translate »