ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ದೇವರ ದರ್ಶನ ಹೇಗೆ ಮಾಡಬೇಕು?

ದೇವರ ದರ್ಶನ ಹೇಗೆ ಮಾಡಬೇಕು?

ಯಾವುದಾದರೂ ಯಾತ್ರೆ ಅಥವಾ ದೇವಸ್ಥಾನಕ್ಕೆ ಹೋದಾಗ ನಾವು ದೇವರ ದರ್ಶನ ಹೇಗೆ ಪಡಿಬೇಕು ಅನ್ನುವದಕ್ಕೆ ನಮ್ಮ ಪೂರ್ವಜರು ಸರಿಯಾದ ಕ್ರಮವನ್ನು ತಿಳಿಸುತ್ತಾರೆ .ಅದರಂತೆ ನಡೆದರೆ ನಮಗೆ ಖಂಡಿತ ದರ್ಶನ ಫಲ ಸಿಗುತ್ತದೆ …‌‌

ಯಾವದೇ ಯಾತ್ರೆಗೆ ಹೋದಾಗ ಯಾತ್ರಾರ್ಥಿಯು ದೇವರ ಪ್ರಥಮ ದರ್ಶನ ಸಮಯದಲ್ಲಿ ಮೊದಲು ದೇವಸ್ಥಾನದ ಗೋಡೆಗೆ ಒರಗಿ ನಿಂತು ಕೈಮುಗಿದು ಹೀಗೆ ಹೇಳಬೇಕು..

“ನೂರು ಕೋಟಿ ತಿರ್ಥಗಳ ಸ್ನಾನ ಮಾಡಿಸು, ವಿರಜಾ ನದಿಯ ಸ್ನಾನ ಮಾಡಿಸು, ತಾರಕ ಬ್ರಹ್ಮ ದೇವರಿಂದ ತತ್ವ ಉಪದೇಶ ಮಾಡಿಸು. ವೈಕುಂಠಕ್ಕೆ ಕರೆದೊಯ್ದು ನಿನ್ನ ದರುಶನ ಮಾಡಿಸು ” ಎಂದು ಪ್ರಾರ್ಥಿಸಿ
ನಂತರ ಹೊರಗಿನಿಂದಲೇ ದೇವರ ದರ್ಶನ ಮಾಡಬೇಕು..ಅದಕ್ಕೆ ಧೂಳಿದರ್ಶನ ಅಂತಾರೆ. ‘ಧೂಳಿ ದರ್ಶನಂ ಪಾಪ ನಾಶನಂ’ ಧೂಳಿದರ್ಶನ ದಿಂದ ಪಾಪ ನಾಶವಾಗುತ್ತೆ .

  ಕಗ್ಗ - ಹಸಿವಿನ ದೇವರು - Hunger God

ನಂತರ ತಲೆಯಲ್ಲಿರು ಚಿಂತಗಳನ್ನೇಲ್ಲ ಬಿಟ್ಟು ಶಿಖರ ದರ್ಶನ ಮಾಡಿ. ‘ಶಿಖರ ದರ್ಶನಂ ಚಿಂತಾನಾಶನಂ’
ನಂತರ ದೇವಸ್ಥಾನ ಒಳಗೆ ಹೋಗುವಾಗ ಕೈಕಾಲುಗಳನ್ನು ತೊಳೆದು ದೇವಸ್ಥಾನ ಒಳಗಡೆ ಪ್ರವೇಶಮಾಡಿ ತಕ್ಷಣ ದೇವರ ವಿಗ್ರಹವನ್ನು ನೋಡ ಬೇಡಿ ಅದಕ್ಕೂ ಒಂದು ಕ್ರಮವಿದೆ .

ಮೊದಲು ಪಾದ ದರ್ಶನ ಮಾಡಿ: ‘ಪಾದ ದರ್ಶನಂ ಪಾಪನಾಶನಂ ‘…‌ನಂತರ

ಕಟಿ ದರ್ಶನ: ‘ಕಟಿ ದರ್ಶನಂ ಕಾಮನಾಶನಂ’ … ನಂತರ
ನಾಭಿ ದರ್ಶನ: ‘ನಾಭಿ ದರ್ಶನಂ ನರಕ ನಾಶನಂ’ … ನಂತರ

  ನೆಲ್ಲಿಕಾಯಿ ಅಥವ ಅಮಲಕ ದೀಪದ ಮಹತ್ವಗಳು

ಕಂಠ ದರ್ಶನ: ‘ಕಂಠ ದರ್ಶನಂ ವೈಕುಂಠ ಸಾಧನಂ’ .. ನಂತರ

ಮುಖ ದರ್ಶನ: ‘ಮುಖ ದರ್ಶನಂ ಮುಕ್ತಿ ಸಾಧನಂ’ … ನಂತರ

ಕಿರೀಟ ದರ್ಶನ: ‘ಕೀರಿಟ ದರ್ಶನಂ ಪುನರ್ಜನ್ಮ ನಾಶನಂ’ .. ನಂತರ

ಸರ್ವ ದರ್ಶನ: ‘ಸರ್ವಾಂಗ ದರ್ಶನಂ ಸರ್ವ ಪಾಪ ನಾಶನಂ’ .‌‌‌ಸರ್ವಾಂಗ ದರ್ಶನ ಮಾಡಬೇಕು..ಇದು ಕ್ರಮ….

ಕೃಷ್ಣಾರ್ಪಣಮಸ್ತು
(ಸತ್ಸಂಗ ಸಂಗ್ರಹ)
ಹಿಂದೂ ಸಂಸ್ಕ್ರತಿಯಲ್ಲಿ ಪ್ರತಿಯೊಂದಕ್ಕೂ ಕಾರಣ ಇದೆ ಸ್ನೇಹಿತರೇ….ನಮ್ಮ ಸನಾತನ ಸಂಸ್ಕೃತಿ ಮರೆಯಬೇಡಿ🙏
!! ಶ್ರೀಕೃಷ್ಣಾರ್ಪಣಮಸ್ತು !!

Leave a Reply

Your email address will not be published. Required fields are marked *

Translate »